AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ವೃದ್ಧಿಸುವ ನಿಂಬು-ಶುಂಠಿ ರಸಂ ಮಾಡಿ ಸೇವಿಸಿ; ಇಲ್ಲಿದೆ ರೆಸಿಪಿ

ಮನೆಯಲ್ಲಿರುವ ಕಾಳು ಮೆಣಸು, ತೊಗರಿ ಬೇಳೆ, ಶುಂಠಿ, ಟೊಮೇಟೋದಂತಹ ಪದಾರ್ಥಗಳ ಮೂಲಕ ಸರಳವಾಗಿ ರುಚಿಯಾದ ಪದಾರ್ಥ ತಯಾರಿಸಬಹುದು. ಇಲ್ಲಿದೆ ನೋಡಿ ಸಿಂಪಲ್​ ಆಗಿ ಶುಂಠಿ, ನಿಂಬು ಸೇರಿಸಿ ರಸಂ ಮಾಡುವ ವಿಧಾನ.

ಆರೋಗ್ಯ ವೃದ್ಧಿಸುವ ನಿಂಬು-ಶುಂಠಿ ರಸಂ ಮಾಡಿ ಸೇವಿಸಿ; ಇಲ್ಲಿದೆ ರೆಸಿಪಿ
ರಸಂ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Feb 08, 2022 | 1:33 PM

Share

ಪ್ರತಿನಿತ್ಯ ಒಂದೇ ರೀತಿಯ ಸಾಂಬಾರ್​ ಅಥವಾ ಅಡುಗೆ (Cooking) ಮಾಡಿ ಬೇಸರವಾದಾಗ ಹೊಟೇಲ್​ಗೆ ಹೋಗೋಣ ಎನ್ನಿಸುವುದು ಸಹಜ. ಆದರೆ ಈಗ ಕೊರೊನಾ ಕಾಲ ಹೊಟೆಲ್​ಗಳಿಗೆ ಹೋಗಿ ತಿನ್ನುವುದು ಅಷ್ಟು ಸುರಕ್ಷಿತವಲ್ಲ ಹೀಗಾಗಿ  ಆದಷ್ಟು ಮನೆಯಲ್ಲಿಯೇ ಹೊಸ ರುಚಿಯ ಆಹಾರ (Food) ತಯಾರಿಸಿ ಸೇವಿಸಿ. ಅದು ಶುದ್ಧವಾಗಿಯೂ ಪೌಷ್ಟಿಕವಾಗಿಯೂ ಇರುತ್ತದೆ. ಮನೆಯಲ್ಲಿರುವ ಕಾಳು ಮೆಣಸು, ನಿಂಬು (Lemon) ತೊಗರಿ ಬೇಳೆ, ಶುಂಠಿ, ಟೊಮೇಟೋದಂತಹ ಪದಾರ್ಥಗಳ ಮೂಲಕ ಸರಳವಾಗಿ ರುಚಿಯಾದ ಪದಾರ್ಥ ತಯಾರಿಸಬಹುದು. ಅದು ಹೇಗೆ ಅಂತೀರಾ ಇಲ್ಲಿದೆ ನೋಡಿ ಸಿಂಪಲ್​ ಆಗಿ ಶುಂಠಿ, ನಿಂಬು ಸೇರಿಸಿ ರಸಂ ಮಾಡುವ ವಿಧಾನ…

ಬೇಕಾಗುವ ಸಾಮಗ್ರಿ

2 ಕಪ್​ ತೊಗರಿಬೇಳೆ

2 ಚಮಚ ತುಪ್ಪ ಮತ್ತು ಕರಿಮೆಣಸು

1 ಚಮಚ ಸಾಸಿವೆ, ಜೀರಿಗೆ

1 ನಿಂಬೆ ಹಣ್ಣು, ಟೊಮೇಟೋ

3 ಚುಂಠಿ ಚೂರುಗಳು

6 ಹಸಿಮೆಣಸಿನಕಾಯಿ

ಅಗತ್ಯಕ್ಕೆ ತಕ್ಕಷ್ಟು ಅರಿಶಿನ, ಉಪ್ಪು

ಮಾಡುವ ವಿಧಾನ

ಮೊದಲು ಅರ್ಧಗಂಟೆ ತೊಗರಿ ಬೇಳೆಯನ್ನು ನೀರಿನಲ್ಲಿ ನೆನೆಸಿಡಿ. ನಂತರ ಕುಕ್ಕರ್​ಗೆ ಹಾಕಿ, ಚಿಟಿಕೆ ಅರಿಶಿನ ಸೇರಿಸಿ 5 ಸೀಟಿ ಕೂಗಿಸಿ, ಮೃದುವಾಗಿ ಬೇಯಿಸಿಕೊಳ್ಳಿ. ಇನ್ನೊಂದೆಡೆ ಕರಿಮೆಣಸು, ಜೀರಿಗೆ ಸೇರಿಸಿ ಹುರಿದು ಸ್ವಲ್ಪ ಒರಟಾಗಿ ರುಬ್ಬಿಕೊಳ್ಳಿ. ಬಾಣಲೆಯಲ್ಲಿ ತುಪ್ಪ ಹಾಕಿ ಸಾಸಿವೆ, ಜೀರಿಗೆ ಕತ್ತರಿಸಿಕೊಂಡ ಹಸಿಮೆಣಸು, ಶುಂಠಿ ಹಾಕಿ ಹುರಿಯಿರಿ. ಅದಕ್ಕೆ ಹೆಚ್ಚಿಕೊಂಡ ಟೊಮ್ಯಾಟೋ ಸೇರಿಸಿ ಚೆನ್ನಾಗಿ ಬೇಯಿಸಿಕೊಳ್ಳಿ. ನಂತರ ಅದಕ್ಕೆ  ಬೇಯಿಸಿಟ್ಟ ತೊಗರಿಬೇಳೆಯನ್ನು ಹಾಕಿ ಮಿಶ್ರಣ ಮಾಡಿ ನಂತರ ಅದಕ್ಕೆ ಒರಟಾಗಿ ರುಬ್ಬಿಕೊಂಡ ಜೀರಿಗೆ, ಕರಿಮೆಣಸಿನ ಕಾಳನ್ನು ಹಾಕಿ ಕುದಿಸಿ. 5 ನಿಮಿಷ ಕುದಿಸಿದ ಬಳಿಕ ಉಪ್ಪು, ನಿಂಬೆ ರಸ ಹಾಕಿ 5  ನಿಮಿಷ ಲೋ ಪ್ಲೇಮ್​ನಲ್ಲಿಡಿ. ನಂತರ ಒಲೆಯಿಂದ ಇಳಿಸಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಯಾದ ನಿಂಬೆ ಶುಂಠಿ ರಸಂ ಸವಿಯಲು ಸಿದ್ಧ.

ಇದನ್ನೂ ಓದಿ:

ಅಡುಗೆ ಮಾಡುವಾಗ ಎಣ್ಣೆಯ ಆಯ್ಕೆ ಸರಿಯಾಗಿರಲಿ

Published On - 1:28 pm, Tue, 8 February 22

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್