AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ವೃದ್ಧಿಸುವ ನಿಂಬು-ಶುಂಠಿ ರಸಂ ಮಾಡಿ ಸೇವಿಸಿ; ಇಲ್ಲಿದೆ ರೆಸಿಪಿ

ಮನೆಯಲ್ಲಿರುವ ಕಾಳು ಮೆಣಸು, ತೊಗರಿ ಬೇಳೆ, ಶುಂಠಿ, ಟೊಮೇಟೋದಂತಹ ಪದಾರ್ಥಗಳ ಮೂಲಕ ಸರಳವಾಗಿ ರುಚಿಯಾದ ಪದಾರ್ಥ ತಯಾರಿಸಬಹುದು. ಇಲ್ಲಿದೆ ನೋಡಿ ಸಿಂಪಲ್​ ಆಗಿ ಶುಂಠಿ, ನಿಂಬು ಸೇರಿಸಿ ರಸಂ ಮಾಡುವ ವಿಧಾನ.

ಆರೋಗ್ಯ ವೃದ್ಧಿಸುವ ನಿಂಬು-ಶುಂಠಿ ರಸಂ ಮಾಡಿ ಸೇವಿಸಿ; ಇಲ್ಲಿದೆ ರೆಸಿಪಿ
ರಸಂ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Pavitra Bhat Jigalemane

Updated on:Feb 08, 2022 | 1:33 PM

ಪ್ರತಿನಿತ್ಯ ಒಂದೇ ರೀತಿಯ ಸಾಂಬಾರ್​ ಅಥವಾ ಅಡುಗೆ (Cooking) ಮಾಡಿ ಬೇಸರವಾದಾಗ ಹೊಟೇಲ್​ಗೆ ಹೋಗೋಣ ಎನ್ನಿಸುವುದು ಸಹಜ. ಆದರೆ ಈಗ ಕೊರೊನಾ ಕಾಲ ಹೊಟೆಲ್​ಗಳಿಗೆ ಹೋಗಿ ತಿನ್ನುವುದು ಅಷ್ಟು ಸುರಕ್ಷಿತವಲ್ಲ ಹೀಗಾಗಿ  ಆದಷ್ಟು ಮನೆಯಲ್ಲಿಯೇ ಹೊಸ ರುಚಿಯ ಆಹಾರ (Food) ತಯಾರಿಸಿ ಸೇವಿಸಿ. ಅದು ಶುದ್ಧವಾಗಿಯೂ ಪೌಷ್ಟಿಕವಾಗಿಯೂ ಇರುತ್ತದೆ. ಮನೆಯಲ್ಲಿರುವ ಕಾಳು ಮೆಣಸು, ನಿಂಬು (Lemon) ತೊಗರಿ ಬೇಳೆ, ಶುಂಠಿ, ಟೊಮೇಟೋದಂತಹ ಪದಾರ್ಥಗಳ ಮೂಲಕ ಸರಳವಾಗಿ ರುಚಿಯಾದ ಪದಾರ್ಥ ತಯಾರಿಸಬಹುದು. ಅದು ಹೇಗೆ ಅಂತೀರಾ ಇಲ್ಲಿದೆ ನೋಡಿ ಸಿಂಪಲ್​ ಆಗಿ ಶುಂಠಿ, ನಿಂಬು ಸೇರಿಸಿ ರಸಂ ಮಾಡುವ ವಿಧಾನ…

ಬೇಕಾಗುವ ಸಾಮಗ್ರಿ

2 ಕಪ್​ ತೊಗರಿಬೇಳೆ

2 ಚಮಚ ತುಪ್ಪ ಮತ್ತು ಕರಿಮೆಣಸು

1 ಚಮಚ ಸಾಸಿವೆ, ಜೀರಿಗೆ

1 ನಿಂಬೆ ಹಣ್ಣು, ಟೊಮೇಟೋ

3 ಚುಂಠಿ ಚೂರುಗಳು

6 ಹಸಿಮೆಣಸಿನಕಾಯಿ

ಅಗತ್ಯಕ್ಕೆ ತಕ್ಕಷ್ಟು ಅರಿಶಿನ, ಉಪ್ಪು

ಮಾಡುವ ವಿಧಾನ

ಮೊದಲು ಅರ್ಧಗಂಟೆ ತೊಗರಿ ಬೇಳೆಯನ್ನು ನೀರಿನಲ್ಲಿ ನೆನೆಸಿಡಿ. ನಂತರ ಕುಕ್ಕರ್​ಗೆ ಹಾಕಿ, ಚಿಟಿಕೆ ಅರಿಶಿನ ಸೇರಿಸಿ 5 ಸೀಟಿ ಕೂಗಿಸಿ, ಮೃದುವಾಗಿ ಬೇಯಿಸಿಕೊಳ್ಳಿ. ಇನ್ನೊಂದೆಡೆ ಕರಿಮೆಣಸು, ಜೀರಿಗೆ ಸೇರಿಸಿ ಹುರಿದು ಸ್ವಲ್ಪ ಒರಟಾಗಿ ರುಬ್ಬಿಕೊಳ್ಳಿ. ಬಾಣಲೆಯಲ್ಲಿ ತುಪ್ಪ ಹಾಕಿ ಸಾಸಿವೆ, ಜೀರಿಗೆ ಕತ್ತರಿಸಿಕೊಂಡ ಹಸಿಮೆಣಸು, ಶುಂಠಿ ಹಾಕಿ ಹುರಿಯಿರಿ. ಅದಕ್ಕೆ ಹೆಚ್ಚಿಕೊಂಡ ಟೊಮ್ಯಾಟೋ ಸೇರಿಸಿ ಚೆನ್ನಾಗಿ ಬೇಯಿಸಿಕೊಳ್ಳಿ. ನಂತರ ಅದಕ್ಕೆ  ಬೇಯಿಸಿಟ್ಟ ತೊಗರಿಬೇಳೆಯನ್ನು ಹಾಕಿ ಮಿಶ್ರಣ ಮಾಡಿ ನಂತರ ಅದಕ್ಕೆ ಒರಟಾಗಿ ರುಬ್ಬಿಕೊಂಡ ಜೀರಿಗೆ, ಕರಿಮೆಣಸಿನ ಕಾಳನ್ನು ಹಾಕಿ ಕುದಿಸಿ. 5 ನಿಮಿಷ ಕುದಿಸಿದ ಬಳಿಕ ಉಪ್ಪು, ನಿಂಬೆ ರಸ ಹಾಕಿ 5  ನಿಮಿಷ ಲೋ ಪ್ಲೇಮ್​ನಲ್ಲಿಡಿ. ನಂತರ ಒಲೆಯಿಂದ ಇಳಿಸಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಯಾದ ನಿಂಬೆ ಶುಂಠಿ ರಸಂ ಸವಿಯಲು ಸಿದ್ಧ.

ಇದನ್ನೂ ಓದಿ:

ಅಡುಗೆ ಮಾಡುವಾಗ ಎಣ್ಣೆಯ ಆಯ್ಕೆ ಸರಿಯಾಗಿರಲಿ

Published On - 1:28 pm, Tue, 8 February 22

ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್