AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ವೃದ್ಧಿಸುವ ನಿಂಬು-ಶುಂಠಿ ರಸಂ ಮಾಡಿ ಸೇವಿಸಿ; ಇಲ್ಲಿದೆ ರೆಸಿಪಿ

ಮನೆಯಲ್ಲಿರುವ ಕಾಳು ಮೆಣಸು, ತೊಗರಿ ಬೇಳೆ, ಶುಂಠಿ, ಟೊಮೇಟೋದಂತಹ ಪದಾರ್ಥಗಳ ಮೂಲಕ ಸರಳವಾಗಿ ರುಚಿಯಾದ ಪದಾರ್ಥ ತಯಾರಿಸಬಹುದು. ಇಲ್ಲಿದೆ ನೋಡಿ ಸಿಂಪಲ್​ ಆಗಿ ಶುಂಠಿ, ನಿಂಬು ಸೇರಿಸಿ ರಸಂ ಮಾಡುವ ವಿಧಾನ.

ಆರೋಗ್ಯ ವೃದ್ಧಿಸುವ ನಿಂಬು-ಶುಂಠಿ ರಸಂ ಮಾಡಿ ಸೇವಿಸಿ; ಇಲ್ಲಿದೆ ರೆಸಿಪಿ
ರಸಂ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Feb 08, 2022 | 1:33 PM

Share

ಪ್ರತಿನಿತ್ಯ ಒಂದೇ ರೀತಿಯ ಸಾಂಬಾರ್​ ಅಥವಾ ಅಡುಗೆ (Cooking) ಮಾಡಿ ಬೇಸರವಾದಾಗ ಹೊಟೇಲ್​ಗೆ ಹೋಗೋಣ ಎನ್ನಿಸುವುದು ಸಹಜ. ಆದರೆ ಈಗ ಕೊರೊನಾ ಕಾಲ ಹೊಟೆಲ್​ಗಳಿಗೆ ಹೋಗಿ ತಿನ್ನುವುದು ಅಷ್ಟು ಸುರಕ್ಷಿತವಲ್ಲ ಹೀಗಾಗಿ  ಆದಷ್ಟು ಮನೆಯಲ್ಲಿಯೇ ಹೊಸ ರುಚಿಯ ಆಹಾರ (Food) ತಯಾರಿಸಿ ಸೇವಿಸಿ. ಅದು ಶುದ್ಧವಾಗಿಯೂ ಪೌಷ್ಟಿಕವಾಗಿಯೂ ಇರುತ್ತದೆ. ಮನೆಯಲ್ಲಿರುವ ಕಾಳು ಮೆಣಸು, ನಿಂಬು (Lemon) ತೊಗರಿ ಬೇಳೆ, ಶುಂಠಿ, ಟೊಮೇಟೋದಂತಹ ಪದಾರ್ಥಗಳ ಮೂಲಕ ಸರಳವಾಗಿ ರುಚಿಯಾದ ಪದಾರ್ಥ ತಯಾರಿಸಬಹುದು. ಅದು ಹೇಗೆ ಅಂತೀರಾ ಇಲ್ಲಿದೆ ನೋಡಿ ಸಿಂಪಲ್​ ಆಗಿ ಶುಂಠಿ, ನಿಂಬು ಸೇರಿಸಿ ರಸಂ ಮಾಡುವ ವಿಧಾನ…

ಬೇಕಾಗುವ ಸಾಮಗ್ರಿ

2 ಕಪ್​ ತೊಗರಿಬೇಳೆ

2 ಚಮಚ ತುಪ್ಪ ಮತ್ತು ಕರಿಮೆಣಸು

1 ಚಮಚ ಸಾಸಿವೆ, ಜೀರಿಗೆ

1 ನಿಂಬೆ ಹಣ್ಣು, ಟೊಮೇಟೋ

3 ಚುಂಠಿ ಚೂರುಗಳು

6 ಹಸಿಮೆಣಸಿನಕಾಯಿ

ಅಗತ್ಯಕ್ಕೆ ತಕ್ಕಷ್ಟು ಅರಿಶಿನ, ಉಪ್ಪು

ಮಾಡುವ ವಿಧಾನ

ಮೊದಲು ಅರ್ಧಗಂಟೆ ತೊಗರಿ ಬೇಳೆಯನ್ನು ನೀರಿನಲ್ಲಿ ನೆನೆಸಿಡಿ. ನಂತರ ಕುಕ್ಕರ್​ಗೆ ಹಾಕಿ, ಚಿಟಿಕೆ ಅರಿಶಿನ ಸೇರಿಸಿ 5 ಸೀಟಿ ಕೂಗಿಸಿ, ಮೃದುವಾಗಿ ಬೇಯಿಸಿಕೊಳ್ಳಿ. ಇನ್ನೊಂದೆಡೆ ಕರಿಮೆಣಸು, ಜೀರಿಗೆ ಸೇರಿಸಿ ಹುರಿದು ಸ್ವಲ್ಪ ಒರಟಾಗಿ ರುಬ್ಬಿಕೊಳ್ಳಿ. ಬಾಣಲೆಯಲ್ಲಿ ತುಪ್ಪ ಹಾಕಿ ಸಾಸಿವೆ, ಜೀರಿಗೆ ಕತ್ತರಿಸಿಕೊಂಡ ಹಸಿಮೆಣಸು, ಶುಂಠಿ ಹಾಕಿ ಹುರಿಯಿರಿ. ಅದಕ್ಕೆ ಹೆಚ್ಚಿಕೊಂಡ ಟೊಮ್ಯಾಟೋ ಸೇರಿಸಿ ಚೆನ್ನಾಗಿ ಬೇಯಿಸಿಕೊಳ್ಳಿ. ನಂತರ ಅದಕ್ಕೆ  ಬೇಯಿಸಿಟ್ಟ ತೊಗರಿಬೇಳೆಯನ್ನು ಹಾಕಿ ಮಿಶ್ರಣ ಮಾಡಿ ನಂತರ ಅದಕ್ಕೆ ಒರಟಾಗಿ ರುಬ್ಬಿಕೊಂಡ ಜೀರಿಗೆ, ಕರಿಮೆಣಸಿನ ಕಾಳನ್ನು ಹಾಕಿ ಕುದಿಸಿ. 5 ನಿಮಿಷ ಕುದಿಸಿದ ಬಳಿಕ ಉಪ್ಪು, ನಿಂಬೆ ರಸ ಹಾಕಿ 5  ನಿಮಿಷ ಲೋ ಪ್ಲೇಮ್​ನಲ್ಲಿಡಿ. ನಂತರ ಒಲೆಯಿಂದ ಇಳಿಸಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಯಾದ ನಿಂಬೆ ಶುಂಠಿ ರಸಂ ಸವಿಯಲು ಸಿದ್ಧ.

ಇದನ್ನೂ ಓದಿ:

ಅಡುಗೆ ಮಾಡುವಾಗ ಎಣ್ಣೆಯ ಆಯ್ಕೆ ಸರಿಯಾಗಿರಲಿ

Published On - 1:28 pm, Tue, 8 February 22

Follow Us
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ