AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗೋದಿಯ ಖಿಚಡಿ: ಇಲ್ಲಿದೆ ಸಿಂಪಲ್​ ರೆಸಿಪಿ ವಿಧಾನ

ಸುಲಭವಾಗಿ ಮಾಡುವ ಖಿಚಡಿ ದೇಹದ ಆರೋಗ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಹೆಸರು ಬೇಳೆ ಮತ್ತು ಗೋದಿಯಿಂದ ಮಾಡುವ ಖಿಚಡಿ ದೇಹದ ತೂಕ ಇಳಿಕೆಗೆ ಸಹಕಾರಿಯಾಗಿದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗೋದಿಯ ಖಿಚಡಿ: ಇಲ್ಲಿದೆ ಸಿಂಪಲ್​ ರೆಸಿಪಿ ವಿಧಾನ
ಖಿಚಡಿ
TV9 Web
| Edited By: |

Updated on:Feb 23, 2022 | 1:22 PM

Share

ಬಾಯಿಯ ರುಚಿಗೆ ತಕ್ಕಂತೆ ಅಡುಗೆ ಮಾಡಿ ತಿನ್ನುವುದು ಸಹಜ. ಆದರೆ ಬಾಯಿಗೂ ರುಚಿ ನೀಡುವ ಆರೋಗ್ಯವನ್ನೂ ಹೆಚ್ಚಿಸುವ ಅಡುಗೆಯನ್ನು ಮಾಡಿ ಸೇವಿಸುವುದು ಅಗತ್ಯವಾಗಿದೆ. ಅದಕ್ಕಾಗಿ ನೀವು ಖಿಚಡಿಯನ್ನು ಮಾಡಿ ಸೇವಿಸಬಹುದು. ಸುಲಭವಾಗಿ ಮಾಡುವ ಖಿಚಡಿ ದೇಹದ ಆರೋಗ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಹೆಸರು ಬೇಳೆ ಮತ್ತು ಗೋದಿಯಿಂದ ಮಾಡುವ ಖಿಚಡಿ ದೇಹದ ತೂಕ ಇಳಿಕೆಗೆ ಸಹಕಾರಿಯಾಗಿದೆ. ಅದೇ ರೀತಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯಕವಾಗಿದೆ. ಹಾಗಾದರೆ ಈ ಖಿಚಡಿ ಮಾಡುವುದು ಹೇಗೆ ಎನ್ನುವ ವಿಧಾನ ಇಲ್ಲಿದೆ ನೋಡಿ,

ಬೇಕಾಗುವ ಸಾಮಗ್ರಿ 1/8 ಕಪ್​ ಗೋದಿ 1 ಚಮಚ ಹೆಸರು ಬೇಳೆ 1/8 ಚಮಚ ತುಪ್ಪ 1/8 ಚಮಚ ಎಣ್ಣೆ 1/2 ಚಮಚ ಜೀರಿಗೆ ಚಿಟಿಕೆ ಇಂಗು 1/8 ಅರಿಶಿನ ಕತ್ತರಿಸಿದ ಹಸಿಮೆಣಸು 2 ರುಚಿಗೆ ತಕ್ಕಷ್ಟು ಉಪ್ಪು

ಮಾಡುವ ವಿಧಾನ

ಗೋದಿಯನ್ನು ಚೆನ್ನಾಗಿ ತೊಳೆದು 8 ಗಂಟೆಗಳ ಕಾಲ ನೆನಸಿಡಿ.  ಹೆಸರು ಬೇಳೆಯನ್ನು ನೀರಿ​ನಲ್ಲಿ 2 ಗಂಟೆಗಳ ಕಾಲ ನೆನೆಸಿಡಿ. ನೆನೆಸಿಟ್ಟ ಗೋದಿಯನ್ನು ಒರಟಾಗಿ ರುಬ್ಬುಕೊಳ್ಳಿ. ನಂತರ ಒಂದು ಕುಕರ್​ಗೆ ಎಣ್ಣೆ, ತುಪ್ಪ, ಜೀರಿಗೆ, ಮೆಣಸಿನಕಾಯಿ, ಇಂಗು ಹಾಕಿ ಅದಕ್ಕೆ ರುಬ್ಬಿಕೊಂಡ ಗೋದಿ, ನೆನೆಸಿಟ್ಟ ಹೆಸರು ಬೇಳೆ, ಅರಿಶಿನ, ಉಪ್ಪು ಸೇರಿಸಿ 5ರಿಂದ 6 ಸೀಟಿಯಾಗುವವರೆಗೆ ಕೂಗಿಸಿ. ನಂತರ ಅದನ್ನು ಪಾತ್ರೆಗೆ ಹಾಕಿ ಮೇಲಿನಿಂದ ಅರ್ಧ ಚಮಚ ತುಪ್ಪವನ್ನು ಸೇರಿಸಿ. ಮೇಲಿನಿಂದ ಅಗತ್ಯವಿದ್ದರೆ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಆರೋಗ್ಯಕ್ಕೆ ಹಿತವಾದ ಹೆಸರುವೇಳೆ ಖಿಚಡಿ ಸವಿಯಲು ಸಿದ್ಧ.

ಹೆಸರು ಬೇಳೆ ಖಿಚಡಿಯು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮಧುಮೇಹಿಗಳಿಗೂ ಉಪಯುಕ್ತ ಆಹಾರವಾಗಿದೆ. ಹೊಟ್ಟೆಯನ್ನೂ ತುಂಬಿಸುವ ಈ ಖಿಚಡಿ ಆರೋಗ್ಯಕ್ಕೆ ಉತ್ತಮವಾಗಿದೆ.

ಇದನ್ನೂ ಓದಿ:

ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮಸಾಲಾ ಮಜ್ಜಿಗೆಯ ಸಿಂಪಲ್​ ರೆಸಿಪಿ ಇಲ್ಲಿದೆ

Published On - 1:21 pm, Wed, 23 February 22

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ