AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hindi Diwas 2023: ಹಿಂದಿ ದಿನದ ಆಚರಣೆಯ ಹಿಂದಿನ ಇತಿಹಾಸ ಮತ್ತು ಮಹತ್ವದ ಬಗ್ಗೆ ಇಲ್ಲಿ ತಿಳಿದುಕೊಳ್ಳಿ

ಭಾರತದಲ್ಲಿ ಮುಖ್ಯವಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಜಾರ್ಖಂಡ್, ಉತ್ತರಾಖಂಡ, ಛತ್ತೀಸ್‌ಗಢ, ಬಿಹಾರ, ಹರಿಯಾಣ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿ ಹಿಂದಿ ಮಾತನಾಡುವವರಿದ್ದಾರೆ. ಆದ್ದರಿಂದ ಹಿಂದಿ ಭಾಷೆಯನ್ನು ಮಹತ್ವವನ್ನು ಮುಂದಿನ ಪೀಳಿಗೆಗೆ ಸಾರುವ ಸಲುವಾಗಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ 'ಹಿಂದಿ ದಿವಸ್' ಅನ್ನು ಆಚರಿಸಲಾಗುತ್ತದೆ.

Hindi Diwas 2023: ಹಿಂದಿ ದಿನದ ಆಚರಣೆಯ ಹಿಂದಿನ ಇತಿಹಾಸ ಮತ್ತು ಮಹತ್ವದ ಬಗ್ಗೆ ಇಲ್ಲಿ ತಿಳಿದುಕೊಳ್ಳಿ
Hindi Diwas 2023Image Credit source: HT Photo
Follow us
ಅಕ್ಷತಾ ವರ್ಕಾಡಿ
|

Updated on: Sep 14, 2023 | 11:02 AM

ಹಿಂದಿ ಭಾರತದಾದ್ಯಂತ ಮಾತನಾಡುವ ಅತ್ಯಂತ ಜನಪ್ರಿಯ ಭಾಷೆಯಾಗಿದೆ. ಭಾರತದಲ್ಲಿ ಮುಖ್ಯವಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಜಾರ್ಖಂಡ್, ಉತ್ತರಾಖಂಡ, ಛತ್ತೀಸ್‌ಗಢ, ಬಿಹಾರ, ಹರಿಯಾಣ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿ ಹಿಂದಿ ಮಾತನಾಡುವವರಿದ್ದಾರೆ. ಆದ್ದರಿಂದ ಹಿಂದಿ ಭಾಷೆಯನ್ನು ಮಹತ್ವವನ್ನು ಮುಂದಿನ ಪೀಳಿಗೆಗೆ ಸಾರುವ ಸಲುವಾಗಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ‘ಹಿಂದಿ ದಿವಸ್’ ಅನ್ನು ಆಚರಿಸಲಾಗುತ್ತದೆ. ದೇವನಾಗರಿ ಲಿಪಿಯಲ್ಲಿ ಬರೆಯಲ್ಪಟ್ಟ ಭಾರತದ ಸಂವಿಧಾನವು 14 ಸೆಪ್ಟೆಂಬರ್ 1949 ರಂದು ಹಿಂದಿ ಭಾಷೆಯನ್ನು ಭಾರತದ ಅಧಿಕೃತ ಭಾಷೆಯಾಗಿ ಸ್ವೀಕರಿಸಿತು. ಜೊತೆಗೆ ಸೆಪ್ಟೆಂಬರ್ 14, 1953 ರಂದು ಭಾರತವು ಮೊದಲ ಹಿಂದಿ ದಿನವನ್ನು ಆಚರಿಸಲಾಯಿತು. ಭಾರತೀಯರಲ್ಲಿ ಸುಮಾರು 425 ಮಿಲಿಯನ್ ಜನರು ಹಿಂದಿಯನ್ನು ತಮ್ಮ ಮೊದಲ ಭಾಷೆಯಾಗಿ ಮಾತನಾಡುತ್ತಾರೆ ಮತ್ತು ಸುಮಾರು 120 ಮಿಲಿಯನ್ ಜನರು ಹಿಂದಿಯನ್ನು ಎರಡನೇ ಭಾಷೆಯಾಗಿ ಮಾತನಾಡುತ್ತಾರೆ.

ಹಿಂದಿ ದಿನದ ಇತಿಹಾಸ:

1918 ರಲ್ಲಿ, ಹಿಂದಿಯನ್ನು ಭಾರತದ ರಾಷ್ಟ್ರೀಯ ಭಾಷೆಯಾಗಿ ಪ್ರಚಾರ ಮಾಡಲು ಹಿಂದಿ ವಿದ್ವಾಂಸರು ಮತ್ತು ಕಾರ್ಯಕರ್ತರಿಂದ ಹಿಂದಿ ಸಾಹಿತ್ಯ ಸಮ್ಮೇಳನವನ್ನು ರಚಿಸಲಾಯಿತು. 1947 ರಲ್ಲಿ ಭಾರತವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಪಡೆದ ನಂತರ, ಹಿಂದಿಯನ್ನು ದೇಶದ ಏಕೈಕ ಅಧಿಕೃತ ಭಾಷೆಯನ್ನಾಗಿ ಮಾಡಲು ಹಲವಾರು ದಿಗ್ಗಜರು ಪ್ರಪಂಚದಾದ್ಯಂತ ಒಟ್ಟುಗೂಡಿದರು . ಹಜಾರಿ ಪ್ರಸಾದ್ ದ್ವಿವೇದಿ, ಕಾಕಾ ಕಾಲೇಲ್ಕರ್, ಮೈಥಿಲಿ ಶರಣ್ ಗುಪ್ತ್ ಮತ್ತು ಸೇಠ್ ಗೋವಿಂದ್ ದಾಸ್ ಅವರೊಂದಿಗೆ ರಾಜೇಂದ್ರ ಸಿಂಹ ಪ್ರಮುಖ ವ್ಯಕ್ತಿಗಳು. ಸೆಪ್ಟೆಂಬರ್ 14, 1949 ರಂದು, ದೇವನಾಗರಿ ಲಿಪಿಯಲ್ಲಿ ಬರೆದ ಹಿಂದಿಯನ್ನು ಭಾರತದ ಸಂವಿಧಾನ ಸಭೆಯು ದೇಶದ ಅಧಿಕೃತ ಭಾಷೆಗಳಲ್ಲಿ ಒಂದಾಗಿ ಅಂಗೀಕರಿಸಿತು.

ಹಿಂದಿ ದಿನವನ್ನು ಏಕೆ ಆಚರಿಸಲಾಗುತ್ತದೆ?

ಹಿಂದಿ ದಿನವನ್ನು ಆಚರಿಸುವ ಹಿಂದಿನ ಪ್ರಮುಖ ಕಾರಣವೆಂದರೆ ದೇಶದಲ್ಲಿ ಇಂಗ್ಲಿಷ್ ಭಾಷೆಯ ಹೆಚ್ಚುತ್ತಿರುವ ಪ್ರವೃತ್ತಿಯನ್ನು ಕಡಿಮೆ ಮಾಡುವುದು. ಈ ದಿನ ಸಚಿವಾಲಯ, ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳು ಮತ್ತು ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ರಾಜಭಾಷಾ ಕೀರ್ತಿ ಪುರಸ್ಕಾರ ಮತ್ತು ರಾಜಭಾಷಾ ಗೌರವ ಪುರಸ್ಕಾರದಂತಹ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಜೊತೆಗೆ ಈ ದಿನವು ಹಿಂದಿಯನ್ನು ಅಧಿಕೃತ ಭಾಷೆಗಳಲ್ಲಿ ಒಂದನ್ನಾಗಿ ಮಾಡಲು ಅವಿರತವಾಗಿ ಶ್ರಮಿಸಿದ ಭಾರತೀಯ ಬರಹಗಾರ ರಾಜೇಂದ್ರ ಸಿಂಹ ಅವರ ಜನ್ಮದಿನವು ಕೂಡ ಹೌದು. ಮಹಾತ್ಮ ಗಾಂಧಿಯವರು ಹಿಂದಿಯನ್ನು ಜನರ ಭಾಷೆ ಎಂದು ಕರೆದಿದ್ದಾರೆ.

ಹಿಂದಿ ದಿನದ ಮಹತ್ವ:

ಈ ದಿನವು ಭಾರತದಲ್ಲಿ ವ್ಯಾಪಕವಾಗಿ ಮಾತನಾಡುವ ಹಿಂದಿ ಭಾಷೆಯ ಇತಿಹಾಸವನ್ನು ಉತ್ತೇಜಿಸುವುದು ಪ್ರಮುಖ ಉದ್ದೇಶ. ಜೊತೆಗೆ ಹಿಂದಿಯ ಶ್ರೀಮಂತ ಸಾಹಿತ್ಯ ಮತ್ತು ಸಾಂಸ್ಕೃತಿಕ ವಿಸ್ತಾರದ ಬಗ್ಗೆ ಜನರಿಗೆ ಅರಿವು ಮೂಡಿಸುವುದಾಗಿದೆ.

ಅಧಿಕೃತ ಭಾಷೆ:

ಉತ್ತರ ಪ್ರದೇಶ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಜಾರ್ಖಂಡ್, ಉತ್ತರಾಖಂಡ, ಛತ್ತೀಸ್‌ಗಢ, ಬಿಹಾರ, ಹರಿಯಾಣ ಮತ್ತು ರಾಜಸ್ಥಾನಗಳ ಜೊತೆಗೆ ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ ಹಿಂದಿ ಅಧಿಕೃತ ಭಾಷೆಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್