AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಹಬ್ಬದಲ್ಲಿ ಮೈಗಂಟಿದ ಬಣ್ಣವನ್ನು ಸುಲಭವಾಗಿ ಕ್ಲೀನ್ ಮಾಡುವುದು ಹೇಗೆ?

ಇಂದು ಭಾರತದಾದ್ಯಂತ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸಲಾಗಿದೆ. ರಾತ್ರಿಯವರೆಗೂ ಹೋಳಿ ಹಬ್ಬದ ಪ್ರಯುಕ್ತ ಬಣ್ಣಗಳನ್ನು ಎರಚಾಡುವ, ಬಣ್ಣದ ನೀರಿನ ಓಕುಳಿಯಾಡುವ ದೃಶ್ಯ ಎಲ್ಲೆಡೆ ಕಂಡುಬರುತ್ತದೆ. ಆದರೆ, ಮೈಗಂಟಿದ ರಾಸಾಯನಿಕಗಳಿರುವ ಈ ಬಣ್ಣಗಳನ್ನು ತೆಗೆಯುವುದೇ ದೊಡ್ಡ ಸವಾಲಿನ ಕೆಲಸ. ಕೂದಲು, ಚರ್ಮಕ್ಕೆಲ್ಲ ಅಂಟಿದ ಈ ಬಣ್ಣಗಳು ಸುಲಭವಾಗಿ ಹೋಗುವುದಿಲ್ಲ. ಆಗ ಏನು ಮಾಡಬೇಕು?

ಹೋಳಿ ಹಬ್ಬದಲ್ಲಿ ಮೈಗಂಟಿದ ಬಣ್ಣವನ್ನು ಸುಲಭವಾಗಿ ಕ್ಲೀನ್ ಮಾಡುವುದು ಹೇಗೆ?
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Mar 25, 2024 | 5:43 PM

Share

ಹೋಳಿ ಹಬ್ಬದಂದು ನಮ್ಮ ಚರ್ಮಕ್ಕೆ ಯಾವುದೇ ಅಲರ್ಜಿ ಉಂಟುಮಾಡದ ನೈಸರ್ಗಿಕ ಬಣ್ಣಗಳನ್ನು ಬಳಸಿದರೆ ಉತ್ತಮ. ಆದರೆ, ಬಹುತೇಕ ಜನರು ಅಂಗಡಿಗಳಲ್ಲಿ ಸುಲಭವಾಗಿ ಸಿಗುವ ರಾಸಾಯನಿಕ ಬಣ್ಣಗಳನ್ನೇ ಬಳಸಿ ಬಣ್ಣದೋಕುಳಿಯಾಡುತ್ತಾರೆ. ಈ ಬಣ್ಣಗಳು ಚರ್ಮಕ್ಕೆ ಅಂಟಿದರೆ ಸುಲಭವಾಗಿ ಹೋಗುವುದಿಲ್ಲ. ಅದನ್ನು ಹಾಗೇ ಬಿಟ್ಟರೆ ಅಲರ್ಜಿ ಕೂಡ ಉಂಟಾಗಬಹುದು. ಹೀಗಾಗಿ, ಹೋಳಿಯ ಬಣ್ಣಗಳನ್ನು ನಿಮ್ಮ ಚರ್ಮದಿಂದ ಸುಲಭವಾಗಿ ತೆಗೆಯಲು ಕೆಲವು ಸರಳ ಸಲಹೆಗಳು ಇಲ್ಲಿವೆ.

ತಣ್ಣೀರು ಬಳಸಿ:

ತಣ್ಣೀರಿನಿಂದ ನಿಮ್ಮ ಚರ್ಮ ಮತ್ತು ಕೂದಲಿನ ಬಣ್ಣಗಳನ್ನು ತೊಳೆಯುವ ಮೂಲಕ ಮೈಯನ್ನು ಕ್ಲೀನ್ ಮಾಡಲು ಪ್ರಾರಂಭಿಸಿ. ಬಿಸಿನೀರನ್ನು ಬಳಸುವುದನ್ನು ತಪ್ಪಿಸಿ. ಏಕೆಂದರೆ ಅದು ನಿಮ್ಮ ಚರ್ಮ ಮತ್ತು ಕೂದಲಿನ ಕಿರುಚೀಲಗಳಿಗೆ ಮತ್ತಷ್ಟು ಬಣ್ಣ ಅಂಟುವಂತೆ ಮಾಡುತ್ತದೆ.

ನೈಸರ್ಗಿಕ ತೈಲಗಳು:

ಹೋಳಿ ಆಡಲು ಹೊರಡುವ ಮೊದಲು ತೆಂಗಿನ ಎಣ್ಣೆ, ಆಲಿವ್ ಎಣ್ಣೆ ಅಥವಾ ಬಾದಾಮಿ ಎಣ್ಣೆಯನ್ನು ನಿಮ್ಮ ಚರ್ಮ ಮತ್ತು ಕೂದಲಿಗೆ ಹಚ್ಚಿಕೊಳ್ಳಿ. ಈ ತೈಲಗಳು ಬಣ್ಣಗಳು ನಿಮ್ಮ ಚರ್ಮಕ್ಕೆ ಅಂಟಲು ಬಿಡುವುದಿಲ್ಲ. ಇದು ನಿಮ್ಮ ಚರ್ಮ ಮತ್ತು ಕೂದಲಿನ ಬುಡಕ್ಕೆ ಬಣ್ಣಗಳು ಅಂಟದಂತೆ ತಡೆಯುತ್ತದೆ.

ಇದನ್ನೂ ಓದಿ: Lunar Eclipse 2024: ಹೋಳಿಯಂದೇ ಈ ವರ್ಷದ ಮೊದಲ ಚಂದ್ರಗ್ರಹಣ; ಸೂತಕ ಸಮಯ ಯಾವಾಗ?

ನಿಂಬೆ ರಸ ಮತ್ತು ಕಡಲೆಹಿಟ್ಟಿನ ಸ್ಕ್ರಬ್:

ಕಡಲೆ ಹಿಟ್ಟಿನೊಂದಿಗೆ ನಿಂಬೆ ರಸವನ್ನು ಮಿಶ್ರಣ ಮಾಡಿ ದಪ್ಪನೆಯ ಪೇಸ್ಟ್​ ಮಾಡಿಕೊಳ್ಳಿ. ನಿಮ್ಮ ಮೈಯಲ್ಲಿ ಎಲ್ಲೆಲ್ಲಿ ಬಣ್ಣ ಹೆಚ್ಚು ಅಂಟಿದೆಯೋ ಅಲ್ಲಿ ಈ ಸ್ಕ್ರಬ್ ಅನ್ನು ನಿಮ್ಮ ಚರ್ಮ ಮತ್ತು ಕೂದಲಿನ ಮೇಲೆ ನಿಧಾನವಾಗಿ ಮಸಾಜ್ ಮಾಡಿ.

ಮೊಸರು ಮತ್ತು ಜೇನುತುಪ್ಪದ ಹೇರ್ ಮಾಸ್ಕ್:

1 ಚಮಚ ಮೊಸರು ಮತ್ತು ಜೇನುತುಪ್ಪವನ್ನು ಬೆರೆಸಿ ಹೇರ್ ಮಾಸ್ಕ್ ತಯಾರಿಸಿ. ಈ ಮಾಸ್ಕ್ ಅನ್ನು ನಿಮ್ಮ ಕೂದಲು ಮತ್ತು ನೆತ್ತಿಗೆ ಹಚ್ಚಿಕೊಳ್ಳಿ. ಉಗುರುಬೆಚ್ಚಗಿನ ನೀರಿನಿಂದ ತೊಳೆಯುವ ಮೊದಲು ಅದನ್ನು 30 ನಿಮಿಷಗಳ ಕಾಲ ಹಾಗೆಯೇ ಒಣಗಲು ಬಿಡಿ.

ಮುಲ್ತಾನಿ ಮಿಟ್ಟಿ:

ಮುಲ್ತಾನಿ ಮಿಟ್ಟಿ ಮತ್ತು ನೀರು ಅಥವಾ ರೋಸ್ ವಾಟರ್ ಬಳಸಿ ಪೇಸ್ಟ್ ಮಾಡಿಕೊಳ್ಳಿ. ಈ ಪ್ಯಾಕ್ ಅನ್ನು ನಿಮ್ಮ ಮುಖ ಮತ್ತು ಕುತ್ತಿಗೆಗೆ ಹಚ್ಚಿಕೊಳ್ಳಿ. ಅದು ಒಣಗಿದ ನಂತರ, ಬಣ್ಣಗಳು ಮತ್ತು ಕಲ್ಮಶಗಳನ್ನು ತೆಗೆದುಹಾಕಲು ವೃತ್ತಾಕಾರದ ಚಲನೆಯಲ್ಲಿ ಪ್ಯಾಕ್ ಅನ್ನು ನಿಧಾನವಾಗಿ ಸ್ಕ್ರಬ್ ಮಾಡಿ.

ಟೊಮ್ಯಾಟೋ ತಿರುಳು:

ಬಣ್ಣದ ಕಲೆಗಳನ್ನು ತಿಳಿಯಾಗಿಸಲು ನಿಮ್ಮ ಚರ್ಮ ಮತ್ತು ಕೂದಲಿನ ಮೇಲೆ ತಾಜಾ ಟೊಮ್ಯಾಟೊ ತಿರುಳನ್ನು ಉಜ್ಜಿಕೊಳ್ಳಿ. ಟೊಮ್ಯಾಟೋಸ್ ನೈಸರ್ಗಿಕ ಆಮ್ಲಗಳನ್ನು ಹೊಂದಿದ್ದು ಅದು ಬಣ್ಣ ವರ್ಣದ್ರವ್ಯಗಳನ್ನು ಒಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Holi 2024: ಹೋಳಿ ಬಣ್ಣದಿಂದ ನಿಮ್ಮ ತ್ವಚೆ, ಕೂದಲು ಕಾಪಾಡಿಕೊಳ್ಳಲು ಹೀಗೆ ಮಾಡಿ

ಅಲೋವೆರಾ ಜೆಲ್:

ಬಣ್ಣಗಳಿಂದ ಉಂಟಾಗುವ ಯಾವುದೇ ಕಲೆ ಅಥವಾ ಕಿರಿಕಿರಿಯನ್ನು ಶಮನಗೊಳಿಸಲು ತಾಜಾ ಅಲೋವೆರಾ ಜೆಲ್ ಅನ್ನು ನಿಮ್ಮ ಚರ್ಮ ಮತ್ತು ಕೂದಲಿಗೆ ಹಚ್ಚಿಕೊಳ್ಳಿ.

ಅಕ್ಕಿ ಹಿಟ್ಟಿನ ಸ್ಕ್ರಬ್:

ಅಕ್ಕಿ ಹಿಟ್ಟನ್ನು ನೀರು ಅಥವಾ ರೋಸ್ ವಾಟರ್ ಜೊತೆಗೆ ಬೆರೆಸಿ ದಪ್ಪ ಪೇಸ್ಟ್ ಮಾಡಿಕೊಳ್ಳಿ. ಬಣ್ಣಗಳನ್ನು ತೆಗೆದುಹಾಕಲು ಮತ್ತು ಸತ್ತ ಚರ್ಮದ ಕೋಶಗಳನ್ನು ಹೊರಹಾಕಲು ಈ ಸ್ಕ್ರಬ್ ಅನ್ನು ನಿಮ್ಮ ಚರ್ಮದ ಮೇಲೆ ನಿಧಾನವಾಗಿ ಮಸಾಜ್ ಮಾಡಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ