Bilva Patre : ಶಿವನಿಗೆ ಪ್ರಿಯವಾದ ಈ ಬಿಲ್ವ ಪತ್ರೆಯಿಂದ ಆರೋಗ್ಯ ತಾಪತ್ರಯಗಳು ಬಹುದೂರ

ನಮ್ಮ ಸುತ್ತ ಮುತ್ತಲಿನಲ್ಲಿರುವ ಪ್ರತಿಯೊಂದು ಗಿಡ ಮೂಲಿಕೆಗಳಲ್ಲಿ ಔಷಧೀಯ ಗುಣವು ಹೇರಳವಾಗಿದೆ. ಅಂತಹ ಸಸ್ಯಗಳ ಸಾಲಿಗೆ ಬಿಲ್ವೆ ಪತ್ರೆ ಕೂಡ ಸೇರುತ್ತದೆ. ಶಿವನಿಗೆ ಪ್ರಿಯವಾದ ಬಿಲ್ವಪತ್ರೆಯಲ್ಲಿ ಹಲವಾರು ರೋಗಗಳನ್ನು ಶಮನಗೊಳಿಸುವ ಗುಣವಿದೆ. ಇದರ ಎಲೆ, ಕಾಯಿ, ತೊಗಟೆ, ಬೇರು ಎಲ್ಲವನ್ನು ಔಷಧಿಗಳ ತಯಾರಿಕೆಯಲ್ಲಿ ಹೇರಳವಾಗಿ ಬಳಸಲಾಗುತ್ತದೆ. ಹೀಗಾಗಿ ಆರೋಗ್ಯ ಸಮಸ್ಯೆಗಳು ಎದುರಾದಾಗ ಮನೆಯಲ್ಲೇ ಈ ಸಸ್ಯದಿಂದ ಔಷಧಿಯನ್ನು ತಯಾರಿಸಿ ಸೇವಿಸಬಹುದು.

Bilva Patre : ಶಿವನಿಗೆ ಪ್ರಿಯವಾದ ಈ ಬಿಲ್ವ ಪತ್ರೆಯಿಂದ ಆರೋಗ್ಯ ತಾಪತ್ರಯಗಳು ಬಹುದೂರ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 15, 2024 | 4:59 PM

ಶಿವನಿಗೆ ಪ್ರಿಯವಾದ ಬಿಲ್ವೆ ಪತ್ರೆ ಸರ್ವ ಶೇಷ್ಟ್ರ ಔಷಧೀಯ ಸಸ್ಯವಾಗಿದೆ. ಶಿವ ದೇವಾಲಯಗಳ ಸುತ್ತ ಹೆಚ್ಚಾಗಿ ಕಾಣ ಸಿಗುವ ಇದರ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದರೆ ಬಾಯಿಯ ಮೇಲೆ ಬೆರಳಿಡುತ್ತೀರಾ. ಹೀಗಾಗಿ ನಮ್ಮ ಹಿರಿಯರು ಇದರ ಎಲೆಯಿಂದ ರೋಗಗಳನ್ನು ದೂರ ಮಾಡಿಕೊಳ್ಳುತ್ತಿದ್ದರು. ಆಯುರ್ವೇದದಲ್ಲಿ ಹೇರಳವಾಗಿ ಬಳಕೆ ಆಗುವ ಈ ಬಿಲ್ವ ಪತ್ರೆಯ ನಾನಾ ರೀತಿಯ ಕಾಯಿಲೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ.

ಬಿಲ್ವೆ ಪತ್ರೆಯ ಮನೆ ಮದ್ದುಗಳು :

  1. ಊಟದ ನಂತರ ಬಿಲ್ವದ ಹಣ್ಣಿಗೆ ಸ್ವಲ್ಪ ಸಕ್ಕರೆ ಮತ್ತು ಜೇನು ತುಪ್ಪ ಸೇರಿಸಿ ಸೇವಿಸಿದರೆ ಕಫದ ಸಮಸ್ಯೆಯು ದೂರವಾಗುತ್ತದೆ.
  2. ನೆಗಡಿಯಾಗಿದ್ದರೆ ಬಿಲ್ವಪತ್ರೆಯ ರಸವನ್ನು ನಿಯಮಿತವಾಗಿ ಸೇವಿಸುವುದು ಪರಿಣಾಮಕಾರಿಯಾದ ಔಷಧವಾಗಿದೆ.
  3. ಬಿಲ್ವೆ ಪತ್ರೆಯ ರಸವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಸಕ್ಕರೆ ಕಾಯಿಲೆಯು ನಿಯಂತ್ರಣಕ್ಕೆ ಬರುತ್ತದೆ.
  4. ಎಲೆಯನ್ನು ಅರೆದು ಪೇಸ್ಟ್ ಮಾಡಿ ಕಣ್ಣಿನ ಮೇಲೆ ಹಚ್ಚಿ ಸ್ವಲ್ಪ ಹೊತ್ತು ಹಾಗೆ ಬಿಟ್ಟರೆ ಕಣ್ಣು ಉರಿ ಗುಣ ಮುಖವಾಗುತ್ತದೆ.
  5. ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಬೆಳಗ್ಗೆ ಒಂದು ಬಿಲ್ವದ ಎಲೆಯನ್ನು ಎರಡು ಮೂರು ಕಾಳುಮೆಣಸಿನೊಂದಿಗೆ ಬಾಯಿಗೆ ಹಾಕಿಕೊಂಡು ಚೆನ್ನಾಗಿ ಜಗಿದು ತಿನ್ನುವುದು ಒಳ್ಳೆಯದು.
  6. ಬಿಲ್ವಪತ್ರೆಯನ್ನು ಅರೆದು ತಲೆಗೆ ಲೇಪಿಸಿಕೊಂಡರೆ ತಲೆಹೊಟ್ಟಿನ ಸಮಸ್ಯೆಯು ಬಹುದೂರವಾಗುತ್ತದೆ.
  7. ನಿಯಮಿತವಾಗಿ ಬಿಲ್ವೆ ಪತ್ರೆಯ ಬೇರಿನ ಕಷಾಯ ಮಾಡಿ ಸೇವಿಸುವುದರಿಂದ ವಾತದ ಸಮಸ್ಯೆಯು ಕಡಿಮೆಯಾಗುತ್ತದೆ
  8. ಬಿಲ್ವದ ಹಣ್ಣನ್ನು ಸೇವಿಸುವುದರಿಂದ ಹೊಟ್ಟೆ ನೋವು ಮತ್ತು ಭೇದಿಯಂತಹ ಸಮಸ್ಯೆಗಳು ಕಡಿಮೆಯಾಗುತ್ತದೆ. ಹಾಗೂ ಜೀರ್ಣ ಕ್ರಿಯೆಯಂತಹ ಸಮಸ್ಯೆಗಳು ಶಮನವಾಗುತ್ತದೆ.
  9. ಹಣ್ಣುಗಳನ್ನು ತಿರುಳು ತೆಗೆದು ಒಣಗಿಸಿ ಕಾಲು ಚಮಚ ಪುಡಿಯನ್ನು ಹಾಲು ಅಥವಾ ನೀರಿನೊಂದಿಗೆ ಸೇರಿಸಿ ಕುಡಿದರೆ ಆರೋಗ್ಯವಂತರಾಗಬಹುದು.
  10. ಈ ಬಿಲ್ವೆ ಪತ್ರೆ ಮರದ ಅಂಟನ್ನು ಪಾನಕ ಮಾಡಿ ಕುಡಿಯುವುದರಿಂದ ಅತಿಸಾರ ಸಮಸ್ಯೆಯು ಕಡಿಮೆಯಾಗುತ್ತದೆ.
  11. ಕಾಲರ ಸಮಸ್ಯೆಯಿರುವವರು ಬಿಲ್ವೆ ಪತ್ರೆಯ ಅಂಟನ್ನು ಕೊತ್ತಂಬರಿ ಹಾಗೂ ಕಲ್ಲು ಸಕ್ಕರೆಯೊಂದಿಗೆ ಸೇರಿಸಿ ಕಷಾಯ ಮಾಡಿ ಸೇವಿಸುವುದು ಉತ್ತಮ ಮನೆ ಮದ್ದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Fri, 15 March 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ