AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಿ ಸ್ಟೋನ್​ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಪರಿಹಾರಕ್ಕಾಗಿ ಇಲ್ಲಿದೆ ಕೆಲವು ಸಲಹೆಗಳು

ಕಿಡ್ನಿ ಸ್ಟೋನ್ ನೋವು ತಡೆಯಲಾರದಷ್ಟು ಭೀಕರವಾಗಿರುತ್ತದೆ. ಔಷಧಿಗಳು ಮತ್ತು ನೈಸರ್ಗಿಕ ವಸ್ತುಗಳ ಸಹಾಯದಿಂದ ಸಣ್ಣ ಮೂತ್ರಪಿಂಡದ ಕಲ್ಲುಗಳನ್ನು ತೆಗೆಯಬಹುದಾಗಿದೆ.

ಕಿಡ್ನಿ ಸ್ಟೋನ್​ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಪರಿಹಾರಕ್ಕಾಗಿ ಇಲ್ಲಿದೆ ಕೆಲವು ಸಲಹೆಗಳು
ಸಾಂದರ್ಭಿಕ ಚಿತ್ರ
TV9 Web
| Updated By: preethi shettigar|

Updated on: Sep 17, 2021 | 7:59 AM

Share

ಜೀವನ ಶೈಲಿಯಲ್ಲಿ ಬದಲಾವಣೆ ಮತ್ತು ಆಹಾರ ಪದ್ಧತಿಯಲ್ಲಿನ ವ್ಯತ್ಯಾಸ ಆರೋಗ್ಯದಲ್ಲಿ ಏರು ಪೇರು ಉಂಟು ಮಾಡಬಹುದು. ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಜನರನ್ನು ಹೆಚ್ಚು ಕಾಡುತ್ತಿದೆ. ಕಲ್ಲು ಪಿತ್ತಕೋಶದಲ್ಲಿದ್ದರೆ ಶಸ್ತ್ರ ಚಿಕಿತ್ಸೆ ಹೊರತುಪಡಿಸಿ ಬೇರೆ ಪರಿಹಾರವಿಲ್ಲ. ಮೂತ್ರಪಿಂಡದಲ್ಲಿ ದೊಡ್ಡ ಗಾತ್ರದ ಕಲ್ಲು ಇದ್ದರೆ, ಆಗಲೂ ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳಬಹುದಾದ ಪರಿಸ್ಥಿತಿ ಬರಬಹುದು. ಕಿಡ್ನಿ ಸ್ಟೋನ್ ನೋವು ತಡೆಯಲಾರದಷ್ಟು ಭೀಕರವಾಗಿರುತ್ತದೆ. ಔಷಧಿಗಳು ಮತ್ತು ನೈಸರ್ಗಿಕ ವಸ್ತುಗಳ ಸಹಾಯದಿಂದ ಸಣ್ಣ ಮೂತ್ರಪಿಂಡದ ಕಲ್ಲುಗಳನ್ನು ತೆಗೆಯಬಹುದಾಗಿದೆ.

ಒಂದು ಲೋಟ ತೆಂಗಿನ ನೀರಿನ ಜತೆಗೆ ಅರ್ಧದಷ್ಟು ಲಿಂಬೆ ಹಣ್ಣನ್ನು ಮಿಶ್ರಣ ಮಾಡಿ ಸೇವಿಸಿದರೆ ಸಣ್ಣ ಕಲ್ಲು ಮೂತ್ರದ ಮೂಲಕ ಹೊರಬರಲು ಸಹಾಯವಾಗುತ್ತದೆ.

ದೊಡ್ಡ ಏಲಕ್ಕಿ ಪುಡಿಯನ್ನು ಚೆನ್ನಾಗಿ ಪುಡಿ ಮಾಡಿ. ನಂತರ ಒಂದು ಲೋಟ ನೀರಿಗೆ 1 ಚಮಚ ಏಲಕ್ಕೆ ಪುಡಿ ಮತ್ತು ಕಲ್ಲಂಗಡಿ ಬೀಜಗಳನ್ನು ಸೇರಿಸಿ ರಾತ್ರಿ ನೆನೆಸಿಡಿ. ಬೆಳಿಗ್ಗೆ ಆ ನೀರನ್ನು ಕುಡಿಯಿರಿ ಮತ್ತು ಕಲ್ಲಂಗಡಿ ಬೀಜವನ್ನೂ ಸಹ ಅಗಿದು ಸೇವಿಸಿ. ಕೆಲವೇ ದಿನಗಳಲ್ಲಿ ಕಲ್ಲು ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮೂಲಂಗಿಯನ್ನು ತಿನ್ನುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಹಗಲಿನಲ್ಲಿ ಸಾಕಷ್ಟು ನೀರು ಕುಡಿಯಿರಿ. ಇದರಿಂದ ಕಿಡ್ನಿ ಸ್ಟೋನ್ ಸಮಸ್ಯೆಗೆ ಪರಿಹಾರ ಪಡೆಯಬಹುದು.

ಆ್ಯಪಲ್ ವಿನೆಗರ್​ನಲ್ಲಿ ಸಿಟ್ರಿಕ್ ಆಮ್ಲವಿದೆ. ಇದು ಮೂತ್ರಪಿಂಡದಲ್ಲಿರುವ ಕಲ್ಲುಗಳನ್ನು ಸಣ್ಣ ಭಾಗಗಳನ್ನಾಗಿ ತುಂಡು ಮಾಡಲು ಸಹಾಯ ಮಾಡುತ್ತದೆ. ಎರಡು ಚಮಯ ವಿನೆಗರ್​ಅನ್ನು ಬೆಚ್ಚಗಿನ ನೀರಿನೊಂದಿಗೆ ಸೇವಿಸುವುದರಿಂದ ಕಲ್ಲಿನ ಸಮಸ್ಯೆಗೆ ಉತ್ತಮ ಪರಿಹಾರ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ:

Mosambi Juice Benefits: ಮೂಸಂಬಿ ಜ್ಯೂಸ್​ ಆರೋಗ್ಯಕ್ಕೆ ಉತ್ತಮ; ವಾರಕ್ಕೆ ಎರಡು ಬಾರಿಯಾದರೂ ಮೂಸಂಬಿ ಜ್ಯೂಸ್​ ಸವಿಯಿರಿ

Bone Health: ಮೂಳೆಗಳ ಕಾಳಜಿಗಾಗಿ ಈ ಹಣ್ಣುಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ

(Home remedies for can get rid of the problem of kidney stones pain)

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್