AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Piles : ಮುಜುಗರ ತರಿಸುವ ಮೂಲವ್ಯಾಧಿಗೆ ಮನೆಯಲ್ಲೇ ಮದ್ದು

ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಕಾಡುತ್ತಿರುವ ಸಮಸ್ಯೆಗಳಲ್ಲಿ ಮೂಲವ್ಯಾಧಿಯೂ ಕೂಡ ಒಂದಾಗಿದೆ. ಸಾಮಾನ್ಯವಾಗಿ ತುಂಬಾ ಹೊತ್ತು ಕುಳಿತು ಕೆಲಸ ಮಾಡುವವರಲ್ಲಿ ಈ ಪೈಲ್ಸ್ ಸಮಸ್ಯೆಯೂ ಹೆಚ್ಚು ಕಂಡು ಬರುತ್ತದೆ. ಸರಿಯಾಗಿ ಚಿಕಿತ್ಸೆ ಹಾಗೂ ಪಥ್ಯವನ್ನು ಮಾಡಿದರೆ ಈ ಸಮಸ್ಯೆಯಿಂದ ಮುಕ್ತಿ ಹೊಂದುವುದು ಕಷ್ಟವೇನಲ್ಲ. ಮನೆಯಲ್ಲಿಯೇ ಕೆಲವು ಮನೆ ಮದ್ದುಗಳನ್ನು ಮಾಡಿ ಸೇವಿಸಿದರೆ ಕಾಡುವ ಈ ಮೂಲವ್ಯಾಧಿ ಯಿಂದ ಪಾರಾಗಬಹುದು.

Piles : ಮುಜುಗರ ತರಿಸುವ ಮೂಲವ್ಯಾಧಿಗೆ ಮನೆಯಲ್ಲೇ ಮದ್ದು
ಸಾಯಿನಂದಾ
| Edited By: |

Updated on: Mar 06, 2024 | 12:49 PM

Share

ಆರೋಗ್ಯ ಸಮಸ್ಯೆಗಳು ಯಾರಿಗಿಲ್ಲ ಹೇಳಿ. ಕೆಲವು ಕಾಯಿಲೆಗಳು ಮುಜುಗರವನ್ನುಂಟು ಮಾಡುತ್ತದೆ. ಹೀಗಾಗಿ ಯಾರೊಂದಿಗೂ ಹಂಚಿಕೊಳ್ಳುವುದಕ್ಕೂ ಆಗುವುದಿಲ್ಲ, ಅಂತಹ ಸಮಸ್ಯೆಗಳಲ್ಲಿ ಮೂಲವ್ಯಾಧಿ ಕೂಡ ಒಂದಾಗಿದೆ. ಆದರೆ ಇದನ್ನು ಕಾಯಿಲೆಯ ನೋವು ಅನುಭವಿಸಿದವರೂ ಮಾತ್ರ ಬಲ್ಲರು. ದೈಹಿಕ ಚಟುವಟಿಕೆಗಳ ಕೊರತೆ, ಔಷಧಿಗಳ ಅಡ್ಡಪರಿಣಾಮಗಳು, ಜೀವನಶೈಲಿ ಹೀಗೆ ನಾನಾ ರೀತಿಯ ಕಾರಣಗಳಿಂದ ಬರಬಹುದು. ಈ ಸಮಸ್ಯೆಯೂ ಬಂದರೆ ಕುಳಿತುಕೊಳ್ಳಲು ಮತ್ತು ಮಲಗಲು ಕಷ್ಟವಾಗುತ್ತದೆ. ವಿಪರೀತವಾದರೆ ಶಸ್ತ್ರಚಿಕಿತ್ಸೆಯ ಮಾಡಬೇಕಾಗುತ್ತದೆ. ಹೀಗಾಗಿ ಪ್ರಾರಂಭದಲ್ಲೇ ಮನೆ ಔಷಧಿಯನ್ನು ಸೇವಿಸಿದರೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತದೆ.

ಮೂಲವ್ಯಾಧಿ ಸಮಸ್ಯೆಗೆ ಸರಳ ಮನೆ ಮದ್ದುಗಳು

  • ಬೇವಿನ ಹೂವುಗಳಿಗೆ ಕಲ್ಲುಸಕ್ಕರೆ ಬೆರೆಸಿ, ಒಂದು ತಿಂಗಳ ಕಾಲ ಒಣಗಿಸಿ ಅದನ್ನು ದಿನನಿತ್ಯ ಒಂದು ಚಮಚದಷ್ಟು ಖಾಲಿ ಹೊಟ್ಟೆಯಲ್ಲಿ ಸೇವಿಸುತ್ತಿದ್ದರೆ ಮೂಲವ್ಯಾಧಿಯಿಂದ ನಿವಾರಣೆಯಾಗುತ್ತದೆ.
  • ಅಳಲೆಕಾಯಿ ಚೂರ್ಣವನ್ನು ಹಳೆಯ ಬೆಲ್ಲದೊಂದಿಗೆ ಪ್ರತಿದಿನವೂ ಊಟ ಮಾಡುವ ಮೊದಲು ಸೇವಿಸುವುದು ಪರಿಣಾಮಕಾರಿಯಾಗಿದೆ.
  • ಒಂದು ಟೀ ಚಮಚ ಹಸಿ ಶುಂಠಿ ರಸ, ಎರಡು ಚಮಚ ನಿಂಬೆಯ ರಸ, ಎರಡು ಚಮಚ ಪುದೀನಾರಸ, ಇದರ ನಾಲ್ಕರಷ್ಟು ಜೇನುತುಪ್ಪ ಬೆರೆಸಿ, ದಿನವೂ ಮೂರು ಬಾರಿ ಸೇವಿಸುವುದು ಫೈಲ್ಸ್ ಗುಣ ಮುಖವಾಗುತ್ತದೆ.
  • ಹುಣುಸೆ ಚಿಗುರು ಮತ್ತು ಕಾಳು ಮೆಣಸು ಪುಡಿಯೊಂದಿಗೆ ಮಾವಿನ ಕಾಯಿಯನ್ನು ಬೆರೆಸಿ ತಿನ್ನುವುದರಿಂದ ಈ ಸಮಸ್ಯೆಯು ದೂರವಾಗುತ್ತದೆ.
  • ಬಾಳೆಕಾಯಿಯ ತಿರುಳನ್ನು ಬೇಯಿಸಿ ಸೇವನೆ ಮಾಡುವುದರಿಂದ ಈ ರೋಗದಿಂದ ಪಾರಾಗಬಹುದು.
  • ಮೂಲವ್ಯಾಧಿಯಿಂದ ಬಲಳುತ್ತಿರುವವರಿಗೆ ಪರಂಗಿಹಣ್ಣಿನ ಸೇವನೆ ಉತ್ತಮ ಔಷಧಿ.
  • ಅರಿಶಿನ ಕೊಂಬನ್ನು ಚೆನ್ನಾಗಿ ಅರೆದು, ಮಜ್ಜಿಗೆಯಲ್ಲಿ ಬೆರೆಸಿ ಒಂದೆರಡು ವಾರಗಳ ಕಾಲ ನಿಯಮಿತವಾಗಿ ಸೇವಿಸುವುದು ಉತ್ತಮ.
  • ಈರುಳ್ಳಿ ಹೂವನ್ನು ತಿನ್ನುತ್ತಿದ್ದರೆ ಮೂಲವ್ಯಾಧಿಯಿಂದ ಪಾರಾಗಬಹುದು.
  • ಅಮೃತಬಳ್ಳಿಯ ರಸಕ್ಕೆ ತುಪ್ಪ, ಸಕ್ಕರೆಯನ್ನು ಬೆರೆಸಿ ಪ್ರತಿದಿನ ದಿನಕ್ಕೆರಡು ಸಲ ಸೇವಿಸಿದರೆ ಫೈಲ್ಸ್ ಸಮಸ್ಯೆಯು ಗುಣಮುಖ ಕಾಣುತ್ತದೆ.
  • ಹಿಪ್ಪಲಿಯ ಸುಟ್ಟು ಅದರ ಬೂದಿಯನ್ನು ಬೆಲ್ಲದೊಡನೆ ಸೇವಿಸಿದರೆ ಮೂಲವ್ಯಾಧಿಯ ನೋವು ಕಡಿಮೆಯಾಗುತ್ತದೆ.
  • ಈರುಳ್ಳಿಯನ್ನು ತುರಿದು ಮೊಸರಿನಲ್ಲಿ ಪ್ರತಿನಿತ್ಯ ಒಂದೆರಡು ಬಾರಿ ತಿನ್ನುವುದರಿಂದ ರಕ್ತ ಮೂಲವ್ಯಾಧಿ ಕ್ರಮೇಣ ಗುಣ ಮುಖ ಕಾಣುತ್ತದೆ.
  • ಹಸಿಮೂಲಂಗಿಯನ್ನು ಜ್ಯೂಸ್ ಮಾಡಿ ಕುಡಿಯುವುದರಿಂದ ಮೂಲವ್ಯಾಧಿಯು ಶಮನವಾಗುತ್ತದೆ.
  • ಹಾಗಲಕಾಯಿಯ ಪಲ್ಯವನ್ನು ಮಾಡಿ ತಿನ್ನುವುದರಿಂದ ಮೂಲವ್ಯಾಧಿಯು ದೂರವಾಗುತ್ತದೆ.
  • ಕರಿಬೇವಿನ ಸೊಪ್ಪಿನ ಎಳೆಯ ಚಿಗುರನ್ನು ಜೇನುತುಪ್ಪದಲ್ಲಿ ಬೆರೆಸಿ ಸೇವನೆ ಮಾಡುವುದು ಉತ್ತಮ ಔಷಧವಾಗಿದೆ.

ಈ ಮನೆಮದ್ದನ್ನು ಉಪಯೋಗಿಸುವ ಮುನ್ನ ತಜ್ಞರ ಸಲಹೆಯನ್ನು ಪಡೆಯುವುದು ಉತ್ತಮ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ