AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Touch Me Not Plant: ಮುಟ್ಟಿದರೆ ಮುನಿ ಸಸ್ಯದಲ್ಲಿದೆ ಆರೋಗ್ಯ, ಇಲ್ಲಿದೆ ಸರಳ ಮನೆ ಮದ್ದುಗಳು

ನಮ್ಮ ಸುತ್ತ ಮುತ್ತಲಿನಲ್ಲಿರುವ ಕೆಲವೊಂದು ಸಸ್ಯಗಳಲ್ಲಿ ನಂಬಲು ಸಾಧ್ಯವಾಗದಷ್ಟು ಔಷಧೀಯ ಗುಣಗಳನ್ನು ಹೊಂದಿರುತ್ತವೆ. ಆದರೆ ಹೆಚ್ಚಿನವರು ಈ ಕೆಲವು ಸಸ್ಯಗಳನ್ನು ಕಳೆ ಸಸ್ಯಗಳೆಂದರೆ ನಿರ್ಲಕ್ಷ್ಯ ಮಾಡುತ್ತಾರೆ. ಅಂತಹ ಸಸ್ಯಗಳಲ್ಲಿ ಮುಟ್ಟಿದರೆ ಮುನಿ ಸಸ್ಯ ಕೂಡ ಒಂದು. ಮುಟ್ಟಿದರೆ ಮುನಿ ಸಸ್ಯವನ್ನು ನಾಚಿಕೆ ಮುಳ್ಳು ಎಂದು ಕರೆಯುತ್ತಾರೆ. ಮುಟ್ಟಿದ ಕೂಡಲೇ ಎಲೆಗಳು ಮಡಚಿಕೊಳ್ಳುವ ಈ ಸಸ್ಯದ ಎಲೆ, ಕಾಂಡ, ಬೇರುಗಳಲ್ಲಿ ಔಷಧೀಯ ಗುಣಗಳು ಹೇರಳವಾಗಿದ್ದು, ಮನೆ ಮದ್ದಿನಲ್ಲಿ ಬಳಕೆ ಮಾಡುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದಾಗಿದೆ

Touch Me Not Plant: ಮುಟ್ಟಿದರೆ ಮುನಿ  ಸಸ್ಯದಲ್ಲಿದೆ ಆರೋಗ್ಯ, ಇಲ್ಲಿದೆ ಸರಳ ಮನೆ ಮದ್ದುಗಳು
ಸಾಯಿನಂದಾ
| Edited By: |

Updated on: Mar 29, 2024 | 2:49 PM

Share

ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರಕೃತಿ ಹಲವಾರು ಔಷಧೀಯ ಗುಣಗಳನ್ನು ಹೊಂದಿರುವ ಸಸ್ಯಗಳನ್ನು ನೀಡಿದೆ. ಆದರೆ ಹೆಚ್ಚಿನವರಿಗೆ ಇಂತಹ ಸಸ್ಯಗಳ ಬಗ್ಗೆ ಮಾಹಿತಿಯಿಲ್ಲ. ಹಳ್ಳಿಯ ಕಡೆಗಳಲ್ಲಿ ಎಲ್ಲೆಂದರಲ್ಲಿ ಹಬ್ಬಿಕೊಂಡಿರುವ ಕಳೆ ಜಾತಿಗೆ ಸೇರಿದ ಮುಟ್ಟಿದ ಮುನಿ ಸಸ್ಯದ ಪರಿಚಯವು ಎಲ್ಲರಿಗೂ ಇದ್ದೆ ಇರುತ್ತದೆ. ಈ ಗಿಡವು ಚಿಕ್ಕದಾಗಿದ್ದು ಇದು ಸಣ್ಣ ಸಣ್ಣ ಮುಳ್ಳುಗಳನ್ನು ಹೊಂದಿದ್ದು ತಿಳಿ ನೇರಳೆ ಬಣ್ಣದ ಸಣ್ಣ ಹೂವುಗಳನ್ನೂ ಹೊಂದಿರುತ್ತದೆ. ಆದರೆ ಈ ಹೂವುಗಳು ತುಂಬಾ ಆಕರ್ಷಕವಾಗಿರುತ್ತವೆ. ಈ ಗಿಡವು ಹಲವಾರು ಆರೋಗ್ಯ ಸಮಸ್ಯೆಗಳಿಗೆ ಔಷಧವಾಗಿ ಬಳಕೆ ಮಾಡಲಾಗುವ ಕಾರಣ ಇದರ ಆರೋಗ್ಯ ಪ್ರಯೋಜನಗಳು ಅಧಿಕವಾಗಿದೆ.

ಮುಟ್ಟಿದರೆ ಮುನಿ ಸಸ್ಯದ ಮನೆಮದ್ದುಗಳು

  • ಊತ ಉಂಟಾದಾಗ ಮುಟ್ಟಿದರೆ ಮುನಿ ಗಿಡವನ್ನು ಅರೆದು ಊತವಾದ ಜಾಗಕ್ಕೆ ಹಚ್ಚಿ, ಬಟ್ಟೆಯಿಂದ ಕಟ್ಟಿದರೆ ಬಾವು ಬೇಗನೆ ಕಡಿಮೆಯಾಗುತ್ತದೆ.
  • ಕಿಡ್ನಿನಲ್ಲಿ ಕಲ್ಲು ಹೊಂದಿರುವವರು ಈ ಗಿಡದ ಬೇರಿನ ಕಷಾಯ ಮಾಡಿ ಕುಡಿಯುವುದರಿಂದ ಈ ಸಮಸ್ಯೆಯು ದೂರವಾಗುತ್ತದೆ.
  • ಮಹಿಳೆಯರಲ್ಲಿ ಮುಟ್ಟಿನ ವೇಳೆಯಲ್ಲಿ ಅತ್ಯಧಿಕ ರಕ್ತಸ್ರಾವವಾಗುತ್ತಿದ್ದರೆ ಈ ಗಿಡವನ್ನು ಚೆನ್ನಾಗಿ ತೊಳೆದು ನೀರು ಸೇರಿಸಿ ಚೆನ್ನಾಗಿ ಕುದಿಸಬೇಕು. ಅದಕ್ಕೆ ಒಂದು ಚಿಟಿಕೆ ಸ್ಪಟಿಕ ಸೇರಿಸಿ, ದಿನಕ್ಕೆ ಎರಡರಿಂದ ಮೂರು ಬಾರಿ ಸೇವಿಸುತ್ತ ಬಂದರೆ ಈ ಸಮಸ್ಯೆಯು ಗುಣಮುಖವಾಗುತ್ತದೆ.
  • ಮಲಬದ್ಧತೆ ಸಮಸ್ಯೆಯಿರುವವರು ಮುಟ್ಟಿದರೆ ಮುನಿ ಗಿಡದ ಎಲೆ ಮತ್ತು ಬೇರನ್ನು ಚೆನ್ನಾಗಿ ಜಜ್ಜಿ ರಸ ತೆಗೆದು, ಈ ರಸವನ್ನು ಒಂದು ಲೋಟ ನೀರಿಗೆ ಹಾಕಿ ಕುಡಿಯುವುದು ಉತ್ತಮ.
  • ಬಾಣಂತಿಯರು ಹೊಟ್ಟೆ ಕರಗಿಸಲು ಈ ಮುಟ್ಟಿದರೆ ಮುನಿ ಗಿಡದ ಎಲೆಯ ರಸವನ್ನು ತೆಗೆದು ಹೊಟ್ಟೆಯ ಭಾಗಕ್ಕೆ ಹಚ್ಚಿ ಒಂದೆರೆಡು ನಿಮಿಷ ಮಸಾಜ್ ಮಾಡುವುದು ಒಳ್ಳೆಯದು.
  • ನಾಚಿಕೆ ಮುಳ್ಳು ಸಸ್ಯದ ರಸವನ್ನು ತೆಗೆದು ಮೊಡವೆಯಿರುವ ಜಾಗಕ್ಕೆ ಲೇಪಿಸುವುದರಿಂದ ಮೊಡವೆಗಳು ಮಾಯಾವಾಗಿ ಕಲೆಗಳು ಉಳಿಯುವುದಿಲ್ಲ.
  • ಗಾಯವಾಗಿ ರಕ್ತ ಸುರಿಯುತ್ತಿದ್ದರೆ, ಈ ಗಿಡದ ಎಲೆಯನ್ನು ಜಜ್ಜಿ, ಗಾಯಕ್ಕೆ ಹಚ್ಚಿದರೆ ರಕ್ತ ಸುರಿಯುವುದು ನಿಂತು, ಗಾಯವು ಬೇಗನೆ ವಾಸಿಯಾಗುತ್ತದೆ.
  • ಪುರುಷರಲ್ಲಿನ ಪ್ರೊಸ್ಟೇಟ್ ಗ್ರಂಥಿಯ ಸಮಸ್ಯೆಯಿದ್ದರೆ ಈ ಮುಟ್ಟಿದರೆ ಮುನಿಯ ಸೊಪ್ಪನ್ನು ಅರೆದು ಉಂಡೆ ಮಾಡಿ ನಲವತ್ತೈದು ದಿನಗಳ ಕಾಲ ಪ್ರತಿದಿನ ತೆಗೆದುಕೊಳ್ಳುವುದು ಉತ್ತಮ ಔಷಧಿ ಎನ್ನಬಹುದು.
  • ಪದೇ ಪದೇ ಮೂತ್ರ ವಿಸರ್ಜನೆಯಾಗುತ್ತಿದ್ದರೆ ಈ ಮುಟ್ಟಿದರೆ ಮುನಿ ಸಸ್ಯದ ಕಷಾಯ ಮಾಡಿ ಸೇವಿಸುವುದು ಪರಿಣಾಮಕಾರಿ ಮನೆ ಮದ್ದು.
  • ಮೂಲವ್ಯಾಧಿಯಿರುವವರು ಮುಟ್ಟಿದರೆ ಮುನಿ ಗಿಡವನ್ನು ಒಣಗಿಸಿ ಪುಡಿ ಮಾಡಿಟ್ಟುಕೊಂಡು, ಒಂದು ಲೋಟ ನೀರಿಗೆ ಈ ಪುಡಿಯನ್ನು ಸೇರಿಸಿ ಖಾಲಿ ಹೊಟ್ಟೆಗೆ ಕುಡಿಯುವುದರಿಂದ ಈ ಸಮಸ್ಯೆಯು ದೂರವಾಗುತ್ತದೆ.

ಈ ಮನೆ ಮದ್ದನ್ನೊಮ್ಮೆ ತಯಾರಿಸುವ ಮುನ್ನ ತಜ್ಞರ ಸಲಹೆಗಳನ್ನು ಪಡೆಯುವುದು ಉತ್ತಮ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು