AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Touch Me Not Plant: ಮುಟ್ಟಿದರೆ ಮುನಿ ಸಸ್ಯದಲ್ಲಿದೆ ಆರೋಗ್ಯ, ಇಲ್ಲಿದೆ ಸರಳ ಮನೆ ಮದ್ದುಗಳು

ನಮ್ಮ ಸುತ್ತ ಮುತ್ತಲಿನಲ್ಲಿರುವ ಕೆಲವೊಂದು ಸಸ್ಯಗಳಲ್ಲಿ ನಂಬಲು ಸಾಧ್ಯವಾಗದಷ್ಟು ಔಷಧೀಯ ಗುಣಗಳನ್ನು ಹೊಂದಿರುತ್ತವೆ. ಆದರೆ ಹೆಚ್ಚಿನವರು ಈ ಕೆಲವು ಸಸ್ಯಗಳನ್ನು ಕಳೆ ಸಸ್ಯಗಳೆಂದರೆ ನಿರ್ಲಕ್ಷ್ಯ ಮಾಡುತ್ತಾರೆ. ಅಂತಹ ಸಸ್ಯಗಳಲ್ಲಿ ಮುಟ್ಟಿದರೆ ಮುನಿ ಸಸ್ಯ ಕೂಡ ಒಂದು. ಮುಟ್ಟಿದರೆ ಮುನಿ ಸಸ್ಯವನ್ನು ನಾಚಿಕೆ ಮುಳ್ಳು ಎಂದು ಕರೆಯುತ್ತಾರೆ. ಮುಟ್ಟಿದ ಕೂಡಲೇ ಎಲೆಗಳು ಮಡಚಿಕೊಳ್ಳುವ ಈ ಸಸ್ಯದ ಎಲೆ, ಕಾಂಡ, ಬೇರುಗಳಲ್ಲಿ ಔಷಧೀಯ ಗುಣಗಳು ಹೇರಳವಾಗಿದ್ದು, ಮನೆ ಮದ್ದಿನಲ್ಲಿ ಬಳಕೆ ಮಾಡುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದಾಗಿದೆ

Touch Me Not Plant: ಮುಟ್ಟಿದರೆ ಮುನಿ  ಸಸ್ಯದಲ್ಲಿದೆ ಆರೋಗ್ಯ, ಇಲ್ಲಿದೆ ಸರಳ ಮನೆ ಮದ್ದುಗಳು
ಸಾಯಿನಂದಾ
| Edited By: |

Updated on: Mar 29, 2024 | 2:49 PM

Share

ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರಕೃತಿ ಹಲವಾರು ಔಷಧೀಯ ಗುಣಗಳನ್ನು ಹೊಂದಿರುವ ಸಸ್ಯಗಳನ್ನು ನೀಡಿದೆ. ಆದರೆ ಹೆಚ್ಚಿನವರಿಗೆ ಇಂತಹ ಸಸ್ಯಗಳ ಬಗ್ಗೆ ಮಾಹಿತಿಯಿಲ್ಲ. ಹಳ್ಳಿಯ ಕಡೆಗಳಲ್ಲಿ ಎಲ್ಲೆಂದರಲ್ಲಿ ಹಬ್ಬಿಕೊಂಡಿರುವ ಕಳೆ ಜಾತಿಗೆ ಸೇರಿದ ಮುಟ್ಟಿದ ಮುನಿ ಸಸ್ಯದ ಪರಿಚಯವು ಎಲ್ಲರಿಗೂ ಇದ್ದೆ ಇರುತ್ತದೆ. ಈ ಗಿಡವು ಚಿಕ್ಕದಾಗಿದ್ದು ಇದು ಸಣ್ಣ ಸಣ್ಣ ಮುಳ್ಳುಗಳನ್ನು ಹೊಂದಿದ್ದು ತಿಳಿ ನೇರಳೆ ಬಣ್ಣದ ಸಣ್ಣ ಹೂವುಗಳನ್ನೂ ಹೊಂದಿರುತ್ತದೆ. ಆದರೆ ಈ ಹೂವುಗಳು ತುಂಬಾ ಆಕರ್ಷಕವಾಗಿರುತ್ತವೆ. ಈ ಗಿಡವು ಹಲವಾರು ಆರೋಗ್ಯ ಸಮಸ್ಯೆಗಳಿಗೆ ಔಷಧವಾಗಿ ಬಳಕೆ ಮಾಡಲಾಗುವ ಕಾರಣ ಇದರ ಆರೋಗ್ಯ ಪ್ರಯೋಜನಗಳು ಅಧಿಕವಾಗಿದೆ.

ಮುಟ್ಟಿದರೆ ಮುನಿ ಸಸ್ಯದ ಮನೆಮದ್ದುಗಳು

  • ಊತ ಉಂಟಾದಾಗ ಮುಟ್ಟಿದರೆ ಮುನಿ ಗಿಡವನ್ನು ಅರೆದು ಊತವಾದ ಜಾಗಕ್ಕೆ ಹಚ್ಚಿ, ಬಟ್ಟೆಯಿಂದ ಕಟ್ಟಿದರೆ ಬಾವು ಬೇಗನೆ ಕಡಿಮೆಯಾಗುತ್ತದೆ.
  • ಕಿಡ್ನಿನಲ್ಲಿ ಕಲ್ಲು ಹೊಂದಿರುವವರು ಈ ಗಿಡದ ಬೇರಿನ ಕಷಾಯ ಮಾಡಿ ಕುಡಿಯುವುದರಿಂದ ಈ ಸಮಸ್ಯೆಯು ದೂರವಾಗುತ್ತದೆ.
  • ಮಹಿಳೆಯರಲ್ಲಿ ಮುಟ್ಟಿನ ವೇಳೆಯಲ್ಲಿ ಅತ್ಯಧಿಕ ರಕ್ತಸ್ರಾವವಾಗುತ್ತಿದ್ದರೆ ಈ ಗಿಡವನ್ನು ಚೆನ್ನಾಗಿ ತೊಳೆದು ನೀರು ಸೇರಿಸಿ ಚೆನ್ನಾಗಿ ಕುದಿಸಬೇಕು. ಅದಕ್ಕೆ ಒಂದು ಚಿಟಿಕೆ ಸ್ಪಟಿಕ ಸೇರಿಸಿ, ದಿನಕ್ಕೆ ಎರಡರಿಂದ ಮೂರು ಬಾರಿ ಸೇವಿಸುತ್ತ ಬಂದರೆ ಈ ಸಮಸ್ಯೆಯು ಗುಣಮುಖವಾಗುತ್ತದೆ.
  • ಮಲಬದ್ಧತೆ ಸಮಸ್ಯೆಯಿರುವವರು ಮುಟ್ಟಿದರೆ ಮುನಿ ಗಿಡದ ಎಲೆ ಮತ್ತು ಬೇರನ್ನು ಚೆನ್ನಾಗಿ ಜಜ್ಜಿ ರಸ ತೆಗೆದು, ಈ ರಸವನ್ನು ಒಂದು ಲೋಟ ನೀರಿಗೆ ಹಾಕಿ ಕುಡಿಯುವುದು ಉತ್ತಮ.
  • ಬಾಣಂತಿಯರು ಹೊಟ್ಟೆ ಕರಗಿಸಲು ಈ ಮುಟ್ಟಿದರೆ ಮುನಿ ಗಿಡದ ಎಲೆಯ ರಸವನ್ನು ತೆಗೆದು ಹೊಟ್ಟೆಯ ಭಾಗಕ್ಕೆ ಹಚ್ಚಿ ಒಂದೆರೆಡು ನಿಮಿಷ ಮಸಾಜ್ ಮಾಡುವುದು ಒಳ್ಳೆಯದು.
  • ನಾಚಿಕೆ ಮುಳ್ಳು ಸಸ್ಯದ ರಸವನ್ನು ತೆಗೆದು ಮೊಡವೆಯಿರುವ ಜಾಗಕ್ಕೆ ಲೇಪಿಸುವುದರಿಂದ ಮೊಡವೆಗಳು ಮಾಯಾವಾಗಿ ಕಲೆಗಳು ಉಳಿಯುವುದಿಲ್ಲ.
  • ಗಾಯವಾಗಿ ರಕ್ತ ಸುರಿಯುತ್ತಿದ್ದರೆ, ಈ ಗಿಡದ ಎಲೆಯನ್ನು ಜಜ್ಜಿ, ಗಾಯಕ್ಕೆ ಹಚ್ಚಿದರೆ ರಕ್ತ ಸುರಿಯುವುದು ನಿಂತು, ಗಾಯವು ಬೇಗನೆ ವಾಸಿಯಾಗುತ್ತದೆ.
  • ಪುರುಷರಲ್ಲಿನ ಪ್ರೊಸ್ಟೇಟ್ ಗ್ರಂಥಿಯ ಸಮಸ್ಯೆಯಿದ್ದರೆ ಈ ಮುಟ್ಟಿದರೆ ಮುನಿಯ ಸೊಪ್ಪನ್ನು ಅರೆದು ಉಂಡೆ ಮಾಡಿ ನಲವತ್ತೈದು ದಿನಗಳ ಕಾಲ ಪ್ರತಿದಿನ ತೆಗೆದುಕೊಳ್ಳುವುದು ಉತ್ತಮ ಔಷಧಿ ಎನ್ನಬಹುದು.
  • ಪದೇ ಪದೇ ಮೂತ್ರ ವಿಸರ್ಜನೆಯಾಗುತ್ತಿದ್ದರೆ ಈ ಮುಟ್ಟಿದರೆ ಮುನಿ ಸಸ್ಯದ ಕಷಾಯ ಮಾಡಿ ಸೇವಿಸುವುದು ಪರಿಣಾಮಕಾರಿ ಮನೆ ಮದ್ದು.
  • ಮೂಲವ್ಯಾಧಿಯಿರುವವರು ಮುಟ್ಟಿದರೆ ಮುನಿ ಗಿಡವನ್ನು ಒಣಗಿಸಿ ಪುಡಿ ಮಾಡಿಟ್ಟುಕೊಂಡು, ಒಂದು ಲೋಟ ನೀರಿಗೆ ಈ ಪುಡಿಯನ್ನು ಸೇರಿಸಿ ಖಾಲಿ ಹೊಟ್ಟೆಗೆ ಕುಡಿಯುವುದರಿಂದ ಈ ಸಮಸ್ಯೆಯು ದೂರವಾಗುತ್ತದೆ.

ಈ ಮನೆ ಮದ್ದನ್ನೊಮ್ಮೆ ತಯಾರಿಸುವ ಮುನ್ನ ತಜ್ಞರ ಸಲಹೆಗಳನ್ನು ಪಡೆಯುವುದು ಉತ್ತಮ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್