AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Herpes : ಸರ್ಪಸುತ್ತು ಬಗ್ಗೆ ಆತಂಕ ಬೇಡ, ಇಲ್ಲಿದೆ ಸರಳ ಮನೆ ಮದ್ದುಗಳು

ಬೇಸಿಗೆಯ ಕಾಲದಲ್ಲಿ ಅನೇಕ ಚರ್ಮರೋಗಗಳು ಕಾಣಿಸಿಕೊಳ್ಳುತ್ತವೆ. ಉಷ್ಣಕಾಲದಲ್ಲಿ ವೈರಸ್‌ಗಳಿಂದ ಬಾಧಿಸುವ ಸಮಸ್ಯೆಗಳಲ್ಲಿ ಸರ್ಪ ಸುತ್ತು ಕೂಡ ಒಂದು. ಸಣ್ಣಸಣ್ಣ ಗುಳ್ಳೆಗಳು ಹಾವಿನ ಆಕಾರದಂತೆ ಮತ್ತು ಹಾವಿನ ಚಲನೆ ಮಾದರಿಯಲ್ಲೇ ಇರುವುದರಿಂದ ಇದನ್ನು ಸರ್ಪಸುತ್ತು ಎಂದು ಕರೆಯುತ್ತಾರೆ. ಸರ್ಪ ಸುತ್ತಿನ ನೋವು ತೀವ್ರತರಹದ್ದಾಗಿರುತ್ತದೆ. ಕುಳಿತುಕೊಳ್ಳುವುದಕ್ಕೂ ಸಾಧ್ಯವಾಗದೇ ಎಲ್ಲಿ ನೋವಾಗುತ್ತಿದೆ ಎಂದು ಹೇಳುವುದೇ ಕಷ್ಟ. ಈ ಸರ್ಪಸುತ್ತು ಕಡಿಮೆಯಾಗಬೇಕಾದರೆ ಆಹಾರ ಪಥ್ಯದೊಂದಿಗೆ ಮನೆ ಔಷಧಿಗಳು ಇರಲೇಬೇಕು. ಈ ಸರ್ಪಸುತ್ತಿಗೆ ಮನೆಯಲ್ಲೇ ಮನೆ ಮದ್ದು ಮಾಡಿ ಹಚ್ಚುವುದರಿಂದ ಈ ಸಮಸ್ಯೆಯಿಂದ ಗುಣ ಮುಖರಾಗಬಹುದು.

Herpes : ಸರ್ಪಸುತ್ತು ಬಗ್ಗೆ ಆತಂಕ ಬೇಡ, ಇಲ್ಲಿದೆ ಸರಳ ಮನೆ ಮದ್ದುಗಳು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Mar 25, 2024 | 4:47 PM

Share

ಬೇಸಿಗೆಯಲ್ಲಿ ಹೆಚ್ಚಿನವರಲ್ಲಿ ಕಾಡುವ ಈ ಸರ್ಪ ಸುತ್ತು ಕಾಯಿಲೆಯು ವೈರಸ್ ನಿಂದ ಉಂಟಾಗುವ ಸೋಂಕಾಗಿದೆ. ದೇಹದ ರೋಗನಿರೋಧಕ ಶಕ್ತಿ ಕಡಿಮೆ ಇರುವಾಗ, ಈ ರೋಗದ ವೈರಾಣು ದೇಹ ಪ್ರವೇಶಿಸಿ ಈ ಕಾಯಿಲೆಗೆ ಕಾರಣವಾಗುತ್ತದೆ. ತ್ವಚೆ ಮೇಲೆ ಕೆಂಪಾಗಿರುವ ಚಿಕ್ಕಚಿಕ್ಕ ನೀರು ಗುಳ್ಳೆಗಳು ಪಟ್ಟೆಯಾಕಾರದಲ್ಲಿ ದೇಹದ ಒಂದು ಪಾರ್ಶ್ವದಲ್ಲಿ ಕಂಡುಬರುತ್ತವೆ. ಈ ಗುಳ್ಳೆಗಳು ನರತಂತುಗಳನ್ನು ಬಾಧಿಸುವುದರಿಂದ ಉರಿ ಹಾಗೂ ತುರಿಕೆಯು ವಿಪರೀತವಾಗಿರುತ್ತದೆ. ಹಳ್ಳಿ ಮದ್ದಿನಿಂದ ಈ ಕಾಯಿಲೆಯನ್ನು ಗುಣ ಪಡಿಸಿಕೊಳ್ಳಬಹುದು.

  • ಹಳೆ ಅಕ್ಕಿ ಗಂಜಿ, ಬೇಯಿಸಿದ ಹೆಸರು ನೀರು, ಕೊತ್ತಂಬರಿಯ ನೀರು, ಎಳನೀರು ಸೇವಿಸುವುದು ದೇಹವನ್ನು ತಂಪಾಗಿಸುತ್ತದೆ.
  • ಗರಿಕೆ ಹುಲ್ಲನ್ನು ಬೇರು ಸಮೇತ ಕಿತ್ತು ಚೆನ್ನಾಗಿ ನೀರಿನಲ್ಲಿ ತೊಳೆದು ಪೇಸ್ಟ್ ಮಾಡಿ ಸರ್ಪ ಸುತ್ತು ಆದ ಜಾಗಕ್ಕೆಲ್ಲಾ ಹಚ್ಚುವುದರಿಂದ ಗಾಯವು ಒಣಗುತ್ತವೆ.
  • ಗೋಟು ಅಡಿಕೆಯನ್ನು ಅಕ್ಕಿ ತೊಳೆದ ನೀರಿನಲ್ಲಿ ಅರೆದು ದಿನಕ್ಕೆ ನಾಲ್ಕು ಬಾರಿ ಗುಳ್ಳೆಗಳಿಗೆ ಲೇಪಿಸುವುದರಿಂದ ಗುಣಮುಖ ಕಾಣುತ್ತದೆ.
  • ಬೇವಿನ ಎಲೆಯ ರಸವನ್ನು ಮೈಗೆಲ್ಲಾ ಹಚ್ಚುವುದರಿಂದ ಉರಿ ಹಾಗೂ ನವೆಯು ಕಡಿಮೆಯಾಗುತ್ತದೆ.
  • ಕೆಂಪು ಅಥವಾ ಬಿಳಿ ಅಗಸೆ ಸೊಪ್ಪನ್ನು ತಣ್ಣೀರಿನಲ್ಲಿ ನುಣ್ಣಗೆ ಅರೆದು ಹಚ್ಚುವುದು ಪರಿಣಾಮಕಾರಿಯಾಗಿದೆ.
  • ನೆಲ್ಲಿ ಪುಡಿ, ಲಾವಂಚ, ಸೊಗದೆ ಬೇರು ಈ ಮೂರನ್ನು ಹತ್ತರಿಂದ ಹದಿನೈದು ಗ್ರಾಂನಷ್ಟು ತೆಗೆದುಕೊಂಡು ಬೇರೆ ಬೇರೆಯಾಗಿ ಪುಡಿ ಮಾಡಿಕೊಳ್ಳಬೇಕು. ಇದಕ್ಕೆ ನೀರು ಬೇರೆಸಿ ಕುದಿಸಿ ದಿನಕ್ಕೆ ಎರಡು ಬಾರಿ ಎರಡು ಚಮಚದಷ್ಟು ಸೇವಿಸುವುದರಿಂದ ಬೇಗನೇ ಸರ್ಪಸುತ್ತು ನಿವಾರಣೆಯಾಗುತ್ತದೆ.
  • ಅಗಸೆ ಸೊಪ್ಪನ್ನು ಅರೆದು ಲೇಪಿಸುವುದರಿಂದ ಮೈ ಮೇಲಿರುವ ಗಾಯವು ಮಾಗುತ್ತದೆ.
  • ಶ್ರೀಗಂಧವನ್ನು ಅರೆದು ಸರ್ಪಸುತ್ತು ಇರುವಲ್ಲಿ ಹಚ್ಚುತ್ತಿದ್ದರೆ ಬೇಗನೇ ಗುಣ ಮುಖವಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ