AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Herpes : ಸರ್ಪಸುತ್ತು ಬಗ್ಗೆ ಆತಂಕ ಬೇಡ, ಇಲ್ಲಿದೆ ಸರಳ ಮನೆ ಮದ್ದುಗಳು

ಬೇಸಿಗೆಯ ಕಾಲದಲ್ಲಿ ಅನೇಕ ಚರ್ಮರೋಗಗಳು ಕಾಣಿಸಿಕೊಳ್ಳುತ್ತವೆ. ಉಷ್ಣಕಾಲದಲ್ಲಿ ವೈರಸ್‌ಗಳಿಂದ ಬಾಧಿಸುವ ಸಮಸ್ಯೆಗಳಲ್ಲಿ ಸರ್ಪ ಸುತ್ತು ಕೂಡ ಒಂದು. ಸಣ್ಣಸಣ್ಣ ಗುಳ್ಳೆಗಳು ಹಾವಿನ ಆಕಾರದಂತೆ ಮತ್ತು ಹಾವಿನ ಚಲನೆ ಮಾದರಿಯಲ್ಲೇ ಇರುವುದರಿಂದ ಇದನ್ನು ಸರ್ಪಸುತ್ತು ಎಂದು ಕರೆಯುತ್ತಾರೆ. ಸರ್ಪ ಸುತ್ತಿನ ನೋವು ತೀವ್ರತರಹದ್ದಾಗಿರುತ್ತದೆ. ಕುಳಿತುಕೊಳ್ಳುವುದಕ್ಕೂ ಸಾಧ್ಯವಾಗದೇ ಎಲ್ಲಿ ನೋವಾಗುತ್ತಿದೆ ಎಂದು ಹೇಳುವುದೇ ಕಷ್ಟ. ಈ ಸರ್ಪಸುತ್ತು ಕಡಿಮೆಯಾಗಬೇಕಾದರೆ ಆಹಾರ ಪಥ್ಯದೊಂದಿಗೆ ಮನೆ ಔಷಧಿಗಳು ಇರಲೇಬೇಕು. ಈ ಸರ್ಪಸುತ್ತಿಗೆ ಮನೆಯಲ್ಲೇ ಮನೆ ಮದ್ದು ಮಾಡಿ ಹಚ್ಚುವುದರಿಂದ ಈ ಸಮಸ್ಯೆಯಿಂದ ಗುಣ ಮುಖರಾಗಬಹುದು.

Herpes : ಸರ್ಪಸುತ್ತು ಬಗ್ಗೆ ಆತಂಕ ಬೇಡ, ಇಲ್ಲಿದೆ ಸರಳ ಮನೆ ಮದ್ದುಗಳು
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 25, 2024 | 4:47 PM

ಬೇಸಿಗೆಯಲ್ಲಿ ಹೆಚ್ಚಿನವರಲ್ಲಿ ಕಾಡುವ ಈ ಸರ್ಪ ಸುತ್ತು ಕಾಯಿಲೆಯು ವೈರಸ್ ನಿಂದ ಉಂಟಾಗುವ ಸೋಂಕಾಗಿದೆ. ದೇಹದ ರೋಗನಿರೋಧಕ ಶಕ್ತಿ ಕಡಿಮೆ ಇರುವಾಗ, ಈ ರೋಗದ ವೈರಾಣು ದೇಹ ಪ್ರವೇಶಿಸಿ ಈ ಕಾಯಿಲೆಗೆ ಕಾರಣವಾಗುತ್ತದೆ. ತ್ವಚೆ ಮೇಲೆ ಕೆಂಪಾಗಿರುವ ಚಿಕ್ಕಚಿಕ್ಕ ನೀರು ಗುಳ್ಳೆಗಳು ಪಟ್ಟೆಯಾಕಾರದಲ್ಲಿ ದೇಹದ ಒಂದು ಪಾರ್ಶ್ವದಲ್ಲಿ ಕಂಡುಬರುತ್ತವೆ. ಈ ಗುಳ್ಳೆಗಳು ನರತಂತುಗಳನ್ನು ಬಾಧಿಸುವುದರಿಂದ ಉರಿ ಹಾಗೂ ತುರಿಕೆಯು ವಿಪರೀತವಾಗಿರುತ್ತದೆ. ಹಳ್ಳಿ ಮದ್ದಿನಿಂದ ಈ ಕಾಯಿಲೆಯನ್ನು ಗುಣ ಪಡಿಸಿಕೊಳ್ಳಬಹುದು.

  • ಹಳೆ ಅಕ್ಕಿ ಗಂಜಿ, ಬೇಯಿಸಿದ ಹೆಸರು ನೀರು, ಕೊತ್ತಂಬರಿಯ ನೀರು, ಎಳನೀರು ಸೇವಿಸುವುದು ದೇಹವನ್ನು ತಂಪಾಗಿಸುತ್ತದೆ.
  • ಗರಿಕೆ ಹುಲ್ಲನ್ನು ಬೇರು ಸಮೇತ ಕಿತ್ತು ಚೆನ್ನಾಗಿ ನೀರಿನಲ್ಲಿ ತೊಳೆದು ಪೇಸ್ಟ್ ಮಾಡಿ ಸರ್ಪ ಸುತ್ತು ಆದ ಜಾಗಕ್ಕೆಲ್ಲಾ ಹಚ್ಚುವುದರಿಂದ ಗಾಯವು ಒಣಗುತ್ತವೆ.
  • ಗೋಟು ಅಡಿಕೆಯನ್ನು ಅಕ್ಕಿ ತೊಳೆದ ನೀರಿನಲ್ಲಿ ಅರೆದು ದಿನಕ್ಕೆ ನಾಲ್ಕು ಬಾರಿ ಗುಳ್ಳೆಗಳಿಗೆ ಲೇಪಿಸುವುದರಿಂದ ಗುಣಮುಖ ಕಾಣುತ್ತದೆ.
  • ಬೇವಿನ ಎಲೆಯ ರಸವನ್ನು ಮೈಗೆಲ್ಲಾ ಹಚ್ಚುವುದರಿಂದ ಉರಿ ಹಾಗೂ ನವೆಯು ಕಡಿಮೆಯಾಗುತ್ತದೆ.
  • ಕೆಂಪು ಅಥವಾ ಬಿಳಿ ಅಗಸೆ ಸೊಪ್ಪನ್ನು ತಣ್ಣೀರಿನಲ್ಲಿ ನುಣ್ಣಗೆ ಅರೆದು ಹಚ್ಚುವುದು ಪರಿಣಾಮಕಾರಿಯಾಗಿದೆ.
  • ನೆಲ್ಲಿ ಪುಡಿ, ಲಾವಂಚ, ಸೊಗದೆ ಬೇರು ಈ ಮೂರನ್ನು ಹತ್ತರಿಂದ ಹದಿನೈದು ಗ್ರಾಂನಷ್ಟು ತೆಗೆದುಕೊಂಡು ಬೇರೆ ಬೇರೆಯಾಗಿ ಪುಡಿ ಮಾಡಿಕೊಳ್ಳಬೇಕು. ಇದಕ್ಕೆ ನೀರು ಬೇರೆಸಿ ಕುದಿಸಿ ದಿನಕ್ಕೆ ಎರಡು ಬಾರಿ ಎರಡು ಚಮಚದಷ್ಟು ಸೇವಿಸುವುದರಿಂದ ಬೇಗನೇ ಸರ್ಪಸುತ್ತು ನಿವಾರಣೆಯಾಗುತ್ತದೆ.
  • ಅಗಸೆ ಸೊಪ್ಪನ್ನು ಅರೆದು ಲೇಪಿಸುವುದರಿಂದ ಮೈ ಮೇಲಿರುವ ಗಾಯವು ಮಾಗುತ್ತದೆ.
  • ಶ್ರೀಗಂಧವನ್ನು ಅರೆದು ಸರ್ಪಸುತ್ತು ಇರುವಲ್ಲಿ ಹಚ್ಚುತ್ತಿದ್ದರೆ ಬೇಗನೇ ಗುಣ ಮುಖವಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ