AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies : ಸೊಳ್ಳೆ ಕಚ್ಚಿ ವಿಪರೀತ ತುರಿಕೆ, ಊತ ಉಂಟಾದರೆ ತಕ್ಷಣ ಹೀಗೆ ಮಾಡಿ

ಬೇಸಿಗೆಗಿಂತ ಮಳೆಗಾಲದಲ್ಲಿ ಸೊಳ್ಳೆಗಳ ಕಾಟವೇ ಹೆಚ್ಚು. ಸೈಲೆಂಟ್ ಆಗಿ ಬಂದು ರಕ್ತ ಹೀರುವ ಈ ಸೊಳ್ಳೆಗಳನ್ನು ಓಡಿಸುವುದೇ ದೊಡ್ಡ ಕೆಲಸವಾಗಿರುತ್ತದೆ. ಸೊಳ್ಳೆ ಕಚ್ಚಿ ಬಿಟ್ಟರೆ ವಿಪರೀತ ತುರಿಕೆಯೊಂದಿಗೆ ಕೆಲವೊಮ್ಮೆ ಊತ ಕಾಣಿಸಿಕೊಳ್ಳುತ್ತವೆ. ಈ ಸೊಳ್ಳೆ ಕಡಿತದಿಂದಾಗುವ ಉಂಟಾಗುವ ವಿಪರೀತ ತುರಿಕೆಯನ್ನು ನಿವಾರಿಸಲು ಈ ಸರಳ ಮನೆ ಮದ್ದುಗಳು ಇಲ್ಲಿವೆ.

Home Remedies : ಸೊಳ್ಳೆ ಕಚ್ಚಿ ವಿಪರೀತ ತುರಿಕೆ, ಊತ ಉಂಟಾದರೆ ತಕ್ಷಣ ಹೀಗೆ ಮಾಡಿ
ಸಾಯಿನಂದಾ
| Edited By: |

Updated on: Jun 06, 2024 | 5:40 PM

Share

ಮಳೆಗಾಲ ಬಂತೆಂದರೆ ಸಾಕು, ಮನೆಯ ಸುತ್ತ ಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು. ಇಲ್ಲವಾದರೆ ಸೊಳ್ಳೆಗಳ ಕಾಟವೂ ಹೆಚ್ಚಾಗುತ್ತದೆ. ಸಂಜೆಯ ವೇಳೆ ಹೊರಗಡೆ ಕುಳಿತುಕೊಂಡರೆ ಸಾಕು, ಒಂದೊಂದೇ ಸೊಳ್ಳೆಗಳು ಬಂದು ಕಚ್ಚಿದ್ದೆ ತಿಳಿಯುವುದಿಲ್ಲ. ಕಚ್ಚಿದ ಜಾಗದಲ್ಲಿಯೇ ವಿಪರೀತ ತುರಿಕೆಯೊಂದಿಗೆ ದದ್ದು ಕಾಣಿಸಿಕೊಳ್ಳುತ್ತದೆ. ಸಣ್ಣ ಮಕ್ಕಳ ಮೈ ತುಂಬಾ ಸೊಳ್ಳೆ ಕಡಿತದಿಂದ ಕೆಂಪು ಗುಳ್ಳೆಗಳು ಬಂದಿರುತ್ತದೆ. ಹೀಗಾಗಿ ಆ ತಕ್ಷಣವೇ ಈ ಮನೆಯಲ್ಲಿರುವ ಈ ವಸ್ತುಗಳನ್ನು ಹಚ್ಚಿದರೆ ದದ್ದು ಹಾಗೂ ತುರಿಕೆಯಂತಹ ಸಮಸ್ಯೆಯನ್ನು ನಿವಾರಿಸಬಹುದು.

ಸೊಳ್ಳೆ ಕಡಿತದಿಂದ ಪಾರಾಗಲು ಸರಳ ಮನೆ ಮದ್ದುಗಳು

  • ಸೊಳ್ಳೆ ಕಡಿತದಿಂದ ತಪ್ಪಿಸಿಕೊಳ್ಳಲು ಮಾಡಬೇಕಾದ ಕೆಲಸವೆಂದರೆ ಸಂಜೆಯ ಕೈ ಕಾಲುಗಳಿಗೆ ಎಣ್ಣೆಯನ್ನು ಸವರುವುದು.
  • ಜೇನುತುಪ್ಪದಲ್ಲಿರುವ ಆಂಟಿ ಬ್ಯಾಕ್ಟೀರಿಯಲ್‌ ಹಾಗೂ ಆಂಟಿ ಇನ್‌ಫ್ಲಮೇಟರಿ ಗುಣಗಳಿದ್ದು, ಸೊಳ್ಳೆ ಕಚ್ಚಿದ್ದಲ್ಲಿ ಜೇನುತುಪ್ಪ ಹಚ್ಚಿದರೆ ಉರಿ ಹಾಗೂ ದದ್ದು ಕಡಿಮೆಯಾಗುತ್ತದೆ.
  • ಸೊಳ್ಳೆ ಕಚ್ಚಿದ ಜಾಗಕ್ಕೆ ಈರುಳ್ಳಿ ರಸವನ್ನು ಹಚ್ಚಿ ಸ್ವಲ್ಪ ಸಮಯ ಹಾಗೆ ಬಿಟ್ಟರೆ ಉರಿ ಹಾಗೂ ಊತವೂ ಶಮನವಾಗುತ್ತದೆ.
  • ಸೊಳ್ಳೆ ಕಚ್ಚಿದ ಜಾಗದಲ್ಲಿ ಊತವಾಗಿ ತುರಿಸುತ್ತಿದ್ದರೆ ತಕ್ಷಣವೇ ಐಸ್ ಕ್ಯೂಬ್ ಇಡುವುದರಿಂದ ಹತ್ತು ಹದಿನೈದು ನಿಮಿಷಗಳಲ್ಲಿ ಈ ಸಮಸ್ಯೆಯೂ ಕಡಿಮೆಯಾಗುತ್ತದೆ.
  • ನಿಂಬೆರಸ ಹಾಗೂ ತುಳಸಿಯನ್ನು ಚೆನ್ನಾಗಿ ಅರೆದು ಮಿಶ್ರಣ ಮಾಡಿಕೊಂಡು ಸೊಳ್ಳೆ ಕಚ್ಚಿದ್ದಲ್ಲಿ ಹಚ್ಚುವುದರಿಂದ ಸಹ ತುರಿಕೆ ಮತ್ತು ನೋವಿನಿಂದವಿನಿಂದ ಮುಕ್ತಿ ಹೊಂದಬಹುದು.
  • ಬೆಳ್ಳುಳ್ಳಿ ಹಾಗೂ ಈರುಳ್ಳಿ ಚೆನ್ನಾಗಿ ಅರೆದು ಕೈ ಕಾಲುಗಳಿಗೆ ಹಚ್ಚಿಕೊಳ್ಳುವುದರಿಂದ ಸೊಳ್ಳೆಗಳು ನಿಮ್ಮ ಹತ್ತಿರವೂ ಸುಳಿಯುವುದಿಲ್ಲ.
  • ಸೊಳ್ಳೆ ಕಚ್ಚಿ ತುರಿಕೆ ಹಾಗೂ ಊತ ಕಾಣಿಸಿಕೊಂಡ ಜಾಗಕ್ಕೆ ಆಲೋವೆರಾದ ಲೋಳೆಯನ್ನು ಹಚ್ಚಿ, ಸ್ವಲ್ಪ ಸಮಯ ಬಿಟ್ಟರೆ ಈ ಸಮಸ್ಯೆಯೂ ನಿವಾರಣೆಯಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು