AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies : ಸೊಳ್ಳೆ ಕಚ್ಚಿ ವಿಪರೀತ ತುರಿಕೆ, ಊತ ಉಂಟಾದರೆ ತಕ್ಷಣ ಹೀಗೆ ಮಾಡಿ

ಬೇಸಿಗೆಗಿಂತ ಮಳೆಗಾಲದಲ್ಲಿ ಸೊಳ್ಳೆಗಳ ಕಾಟವೇ ಹೆಚ್ಚು. ಸೈಲೆಂಟ್ ಆಗಿ ಬಂದು ರಕ್ತ ಹೀರುವ ಈ ಸೊಳ್ಳೆಗಳನ್ನು ಓಡಿಸುವುದೇ ದೊಡ್ಡ ಕೆಲಸವಾಗಿರುತ್ತದೆ. ಸೊಳ್ಳೆ ಕಚ್ಚಿ ಬಿಟ್ಟರೆ ವಿಪರೀತ ತುರಿಕೆಯೊಂದಿಗೆ ಕೆಲವೊಮ್ಮೆ ಊತ ಕಾಣಿಸಿಕೊಳ್ಳುತ್ತವೆ. ಈ ಸೊಳ್ಳೆ ಕಡಿತದಿಂದಾಗುವ ಉಂಟಾಗುವ ವಿಪರೀತ ತುರಿಕೆಯನ್ನು ನಿವಾರಿಸಲು ಈ ಸರಳ ಮನೆ ಮದ್ದುಗಳು ಇಲ್ಲಿವೆ.

Home Remedies : ಸೊಳ್ಳೆ ಕಚ್ಚಿ ವಿಪರೀತ ತುರಿಕೆ, ಊತ ಉಂಟಾದರೆ ತಕ್ಷಣ ಹೀಗೆ ಮಾಡಿ
ಸಾಯಿನಂದಾ
| Edited By: |

Updated on: Jun 06, 2024 | 5:40 PM

Share

ಮಳೆಗಾಲ ಬಂತೆಂದರೆ ಸಾಕು, ಮನೆಯ ಸುತ್ತ ಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು. ಇಲ್ಲವಾದರೆ ಸೊಳ್ಳೆಗಳ ಕಾಟವೂ ಹೆಚ್ಚಾಗುತ್ತದೆ. ಸಂಜೆಯ ವೇಳೆ ಹೊರಗಡೆ ಕುಳಿತುಕೊಂಡರೆ ಸಾಕು, ಒಂದೊಂದೇ ಸೊಳ್ಳೆಗಳು ಬಂದು ಕಚ್ಚಿದ್ದೆ ತಿಳಿಯುವುದಿಲ್ಲ. ಕಚ್ಚಿದ ಜಾಗದಲ್ಲಿಯೇ ವಿಪರೀತ ತುರಿಕೆಯೊಂದಿಗೆ ದದ್ದು ಕಾಣಿಸಿಕೊಳ್ಳುತ್ತದೆ. ಸಣ್ಣ ಮಕ್ಕಳ ಮೈ ತುಂಬಾ ಸೊಳ್ಳೆ ಕಡಿತದಿಂದ ಕೆಂಪು ಗುಳ್ಳೆಗಳು ಬಂದಿರುತ್ತದೆ. ಹೀಗಾಗಿ ಆ ತಕ್ಷಣವೇ ಈ ಮನೆಯಲ್ಲಿರುವ ಈ ವಸ್ತುಗಳನ್ನು ಹಚ್ಚಿದರೆ ದದ್ದು ಹಾಗೂ ತುರಿಕೆಯಂತಹ ಸಮಸ್ಯೆಯನ್ನು ನಿವಾರಿಸಬಹುದು.

ಸೊಳ್ಳೆ ಕಡಿತದಿಂದ ಪಾರಾಗಲು ಸರಳ ಮನೆ ಮದ್ದುಗಳು

  • ಸೊಳ್ಳೆ ಕಡಿತದಿಂದ ತಪ್ಪಿಸಿಕೊಳ್ಳಲು ಮಾಡಬೇಕಾದ ಕೆಲಸವೆಂದರೆ ಸಂಜೆಯ ಕೈ ಕಾಲುಗಳಿಗೆ ಎಣ್ಣೆಯನ್ನು ಸವರುವುದು.
  • ಜೇನುತುಪ್ಪದಲ್ಲಿರುವ ಆಂಟಿ ಬ್ಯಾಕ್ಟೀರಿಯಲ್‌ ಹಾಗೂ ಆಂಟಿ ಇನ್‌ಫ್ಲಮೇಟರಿ ಗುಣಗಳಿದ್ದು, ಸೊಳ್ಳೆ ಕಚ್ಚಿದ್ದಲ್ಲಿ ಜೇನುತುಪ್ಪ ಹಚ್ಚಿದರೆ ಉರಿ ಹಾಗೂ ದದ್ದು ಕಡಿಮೆಯಾಗುತ್ತದೆ.
  • ಸೊಳ್ಳೆ ಕಚ್ಚಿದ ಜಾಗಕ್ಕೆ ಈರುಳ್ಳಿ ರಸವನ್ನು ಹಚ್ಚಿ ಸ್ವಲ್ಪ ಸಮಯ ಹಾಗೆ ಬಿಟ್ಟರೆ ಉರಿ ಹಾಗೂ ಊತವೂ ಶಮನವಾಗುತ್ತದೆ.
  • ಸೊಳ್ಳೆ ಕಚ್ಚಿದ ಜಾಗದಲ್ಲಿ ಊತವಾಗಿ ತುರಿಸುತ್ತಿದ್ದರೆ ತಕ್ಷಣವೇ ಐಸ್ ಕ್ಯೂಬ್ ಇಡುವುದರಿಂದ ಹತ್ತು ಹದಿನೈದು ನಿಮಿಷಗಳಲ್ಲಿ ಈ ಸಮಸ್ಯೆಯೂ ಕಡಿಮೆಯಾಗುತ್ತದೆ.
  • ನಿಂಬೆರಸ ಹಾಗೂ ತುಳಸಿಯನ್ನು ಚೆನ್ನಾಗಿ ಅರೆದು ಮಿಶ್ರಣ ಮಾಡಿಕೊಂಡು ಸೊಳ್ಳೆ ಕಚ್ಚಿದ್ದಲ್ಲಿ ಹಚ್ಚುವುದರಿಂದ ಸಹ ತುರಿಕೆ ಮತ್ತು ನೋವಿನಿಂದವಿನಿಂದ ಮುಕ್ತಿ ಹೊಂದಬಹುದು.
  • ಬೆಳ್ಳುಳ್ಳಿ ಹಾಗೂ ಈರುಳ್ಳಿ ಚೆನ್ನಾಗಿ ಅರೆದು ಕೈ ಕಾಲುಗಳಿಗೆ ಹಚ್ಚಿಕೊಳ್ಳುವುದರಿಂದ ಸೊಳ್ಳೆಗಳು ನಿಮ್ಮ ಹತ್ತಿರವೂ ಸುಳಿಯುವುದಿಲ್ಲ.
  • ಸೊಳ್ಳೆ ಕಚ್ಚಿ ತುರಿಕೆ ಹಾಗೂ ಊತ ಕಾಣಿಸಿಕೊಂಡ ಜಾಗಕ್ಕೆ ಆಲೋವೆರಾದ ಲೋಳೆಯನ್ನು ಹಚ್ಚಿ, ಸ್ವಲ್ಪ ಸಮಯ ಬಿಟ್ಟರೆ ಈ ಸಮಸ್ಯೆಯೂ ನಿವಾರಣೆಯಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ