AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eye Care Tips : ಗರಿಕೆಯ ಪೇಸ್ಟ್ ಮಾಡಿ ರಾತ್ರಿ ಮಲಗುವ ಮುನ್ನ ಕಣ್ಣಿನ ರೆಪ್ಪೆ ಮೇಲೆ ಹಚ್ಚಿಕೊಳ್ಳಿ ಕಣ್ಣು ಉರಿ ಮಾಯಾ

ಇತ್ತೀಚೆಗಿನ ದಿನಗಳಲ್ಲಿ ಕೂತರು ನಿಂತರೂ ಕಾಡುವ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಸಣ್ಣ ಪುಟ್ಟ ಕಾಯಿಲೆಗಳನ್ನು ನಿರ್ಲಕ್ಷ ಮಾಡಿದರೆ, ಆದರಿಂದಾಗುವ ಪರಿಣಾಮಗಳು ದೊಡ್ಡ ಮಟ್ಟದಾಗಬಹುದು. ಹೆಚ್ಚಿನವರಿಗೆ ಕಣ್ಣಿನ ಉರಿ ಸಮಸ್ಯೆಯು ಕಾಡುತ್ತದೆ. ಕಣ್ಣು ತೆರೆಯುವುದಕ್ಕೂ ಕಷ್ಟ ಎನ್ನುವಂತಾಗುತ್ತದೆ. ಈ ಸಣ್ಣ ಪುಟ್ಟ ಸಮಸ್ಯೆಗಳನ್ನು ಮನೆ ಮದ್ದಿನ ಮೂಲಕ ಗುಣಪಡಿಸಿಕೊಳ್ಳಬಹುದು.

Eye Care Tips : ಗರಿಕೆಯ ಪೇಸ್ಟ್ ಮಾಡಿ ರಾತ್ರಿ ಮಲಗುವ ಮುನ್ನ ಕಣ್ಣಿನ ರೆಪ್ಪೆ ಮೇಲೆ ಹಚ್ಚಿಕೊಳ್ಳಿ ಕಣ್ಣು ಉರಿ ಮಾಯಾ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 12, 2024 | 11:48 AM

Share

ಇತ್ತೀಚೆಗಿನ ದಿನಗಳಲ್ಲಿ ಲ್ಯಾಪ್‌ಟಾಪ್, ಕಂಪ್ಯೂಟರ್, ಮೊಬೈಲ್ ಬಳಕೆ ಮಾಡುತ್ತಿರುವವರ ಸಂಖ್ಯೆಯು ಹೆಚ್ಚಾಗುತ್ತಿದೆ. ಅದಲ್ಲದೇ ನಿದ್ದೆಯ ಕೊರತೆ ಹಾಗೂ ಒತ್ತಡ ಭರಿತ ಜೀವನ ಶೈಲಿಯ ಪರಿಣಾಮವಾಗಿ ಅನೇಕರಲ್ಲಿ ಕಣ್ಣು ಉರಿ ಅಥವಾ ಕಣ್ಣು ನೋವಿನ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಇಂತಹ ಸಮಸ್ಯೆಗೆ ಸಿಂಪಲ್ ಆಗಿ ಮನೆ ಮದ್ದಿನ ಮೂಲಕ ಈ ಪರಿಹಾರ ಕಂಡುಕೊಳ್ಳಬಹುದು.

ಕಣ್ಣು ಉರಿಯ ಸಮಸ್ಯೆ ಕಾಡುತ್ತಿದೆಯೇ, ಈ ರೀತಿ ಪರಿಹಾರ ಕಂಡುಕೊಳ್ಳಿ

  1. ವಿಪರೀತವಾಗಿ ಕಣ್ಣು ಉರಿಯುತ್ತಿದ್ದರೆ ಕಣ್ಣನ್ನು ನೀರಿನಿಂದ ತೊಳೆಯಬೇಕು. ಇಲ್ಲವಾದರೆ ಸ್ವಲ್ಪ ಹೊತ್ತು ಮುಖವನ್ನು ತಣ್ಣೀರಿನಲ್ಲಿ ಇಟ್ಟುಕೊಳ್ಳುವುದರಿಂದ ಆರಾಮವೆನಿಸುತ್ತದೆ.
  2. ರೋಸ್ ವಾಟರ್ ನಿಂದ ಕಣ್ಣುಗಳನ್ನು ತೊಳೆಯುವುದು, ಇಲ್ಲವಾದರೆ ರಾತ್ರಿ ಮಲಗುವ ಮುಂಚಿತವಾಗಿ ಕಣ್ಣಿನ ಹೊರ ಭಾಗಕ್ಕೆ ರೋಸ್ ವಾಟರ್ ಹಚ್ಚುವುದರಿಂದ ಪರಿಣಾಮಕಾರಿಯಾಗಿದೆ.
  3. ಗರಿಕೆಯನ್ನು ಪೇಸ್ಟ್ ಮಾಡಿ ಅದನ್ನು ರಾತ್ರಿ ಮಲಗುವ ಮುನ್ನ ಕಣ್ಣಿನ ರೆಪ್ಪೆ ಮೇಲೆ ಲೇಪಿಸಿ ಸ್ವಲ್ಪ ಸಮಯದ ನಂತರ ತೊಳೆಯುವುದರಿಂದ ಕಣ್ಣಿನ ಉರಿಯು ಗುಣಮುಖವಾಗುತ್ತದೆ.
  4. ಸೌತೆಕಾಯಿಯನ್ನು ಹೋಳುಗಳನ್ನಾಗಿ ಮಾಡಿ, ಅವುಗಳನ್ನು ಕಣ್ಣಿನ ಮೇಲೆ ಇಟ್ಟುಕೊಂಡರೆ ಕಣ್ಣು ಉರಿ ಕಡಿಮೆಯಾಗುತ್ತದೆ.
  5.  ದಾಳಿಂಬೆ ಗಿಡದ ಎಲೆಗಳನ್ನು ಪುಡಿ ಮಾಡಿ ನೀರು ಬೆರೆಸಿ ಪೇಸ್ಟ್ ತಯಾರಿಸಿ ಕಣ್ಣುಗಳ ಮೇಲೆ ಹಚ್ಚಿಕೊಂಡು ಸ್ವಲ್ಪ ಸಮಯದ ಬಳಿಕ ತೊಳೆದರೆ ಕಣ್ಣಿನ ಉರಿಯು ನಿವಾರಣೆಯಾಗುತ್ತದೆ.
  6. ತಣ್ಣನೆಯ ಹಾಲಿನಿಂದ ಕಣ್ಣುಗಳ ಭಾಗದಲ್ಲಿ ಮಸಾಜ್ ಮಾಡುವುದರಿಂದ ಕಣ್ಣು ಉರಿ ಕಡಿಮೆಯಾಗುತ್ತದೆ.
  7. ಹೆಸರು ಕಾಳಿನ ಪುಡಿಯನ್ನು ನೀರಲ್ಲಿ ಕಲಸಿ ಮುಖ ಮತ್ತು ರೆಪ್ಪೆಗೆ ಹಚ್ಚುತ್ತಿದ್ದರೆ ಕಣ್ಣುಗಳ ಉರಿ ಕಡಿಮೆಯಾಗುತ್ತದೆ.
  8. ಕೊತ್ತಂಬರಿ ಬೀಜದ ಕಷಾಯ ಮಾಡಿ, ಹತ್ತಿಯಲ್ಲಿ ನೆನೆಸಿ ಕಣ್ಣುಗಳ ಮೇಲೆ ಇಟ್ಟುಕೊಳ್ಳುವುದರಿಂದ ಕಣ್ಣಿನ ಉರಿಯು ಶಮನವಾಗುತ್ತದೆ.

ಈ ಮನೆಮದ್ದನ್ನು ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆಯನ್ನು ಪಡೆಯುವುದು ಉತ್ತಮ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?