AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bad Breath: ಬಾಯಿಯ ದುರ್ವಾಸನೆಯಿಂದ ಮುಕ್ತಿ ಹೊಂದಬೇಕೇ? ಈ ಸಲಹೆಗಳನ್ನು ಫಾಲೋ ಮಾಡಿ

ಒಂದೊಮ್ಮೆ ನಿಮ್ಮ ಬಾಯಿಯಿಂದ ದುರ್ವಾಸನೆ ಬರುತ್ತಿದ್ದರೆ ನೀವು ಬೇರೆಯವರೊಂದಿಗೆ ಹತ್ತಿರ ನಿಂತು ಮಾತನಾಡಲು ಹಿಂಜರಿಯುತ್ತೀರಿ ಅಥವಾ ಈ ಕಾರಣದಿಂದಾಗಿಯೇ ಜನರು ನಿಮ್ಮೊಂದಿಗೆ ಬೆರೆಯಲು ಹಿಂದೇಟು ಹಾಕಬಹುದು.

Bad Breath: ಬಾಯಿಯ ದುರ್ವಾಸನೆಯಿಂದ ಮುಕ್ತಿ ಹೊಂದಬೇಕೇ? ಈ ಸಲಹೆಗಳನ್ನು ಫಾಲೋ ಮಾಡಿ
Bad Breath
TV9 Web
| Edited By: |

Updated on: Jun 11, 2022 | 2:48 PM

Share

ಒಂದೊಮ್ಮೆ ನಿಮ್ಮ ಬಾಯಿಯಿಂದ ದುರ್ವಾಸನೆ ಬರುತ್ತಿದ್ದರೆ ನೀವು ಬೇರೆಯವರೊಂದಿಗೆ ಹತ್ತಿರ ನಿಂತು ಮಾತನಾಡಲು ಹಿಂಜರಿಯುತ್ತೀರಿ ಅಥವಾ ಈ ಕಾರಣದಿಂದಾಗಿಯೇ ಜನರು ನಿಮ್ಮೊಂದಿಗೆ ಬೆರೆಯಲು ಹಿಂದೇಟು ಹಾಕಬಹುದು. ನಿಮ್ಮ ಬಾಯಿಯಿಂದ ದುರ್ವಾಸನೆ ಬರುತ್ತಿದೆ ಎಂದಾದರೆ ಒಂದು ನಿಮ್ಮ ಹಲ್ಲು ಹುಳುಕಾಗಿರಬೇಕು, ಅಸಿಡಿಟಿ ಸಮಸ್ಯೆಯೂ ಇರಬಹುದು, ಮಧುಮೇಹ, ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳೂ ನಿಮಗಿರಬಹುದು.

ನಿಮ್ಮ ಬಾಯಿಯಿಂದ ಬರುತ್ತಿರುವ ದುರ್ವಾಸನೆ ಹೋಗಲಾಡಿಸಲು ನೀವು ಚಾಕೊಲೇಟ್ ತಿನ್ನಬಹುದು, ಚ್ಯೂಯಿಂಗಮ್ ಬಾಯಲ್ಲಿಟ್ಟುಕೊಳ್ಳಬಹುದು ಆದರೆ ಅದ್ಯಾವುದೂ ಶಾಶ್ವತ ಪರಿಹಾರವಲ್ಲ. ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸಲು ಪರಿಹಾರ ಇಲ್ಲಿದೆ.

ಹೆಚ್ಚೆಚ್ಚು ನೀರು ಕುಡಿಯಿರಿ: ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸಲು ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಿರಿ, ತರಕಾರಿ ಹಾಗೂ ಹಣ್ಣುಗಳನ್ನು ತಿನ್ನಿ. ಸಕ್ಕರೆಯಿರುವ ಪದಾರ್ಥಗಳನ್ನು ಕಡಿಮೆ ಮಾಡಿ ಎಂದು ಆಯುರ್ವೇದವು ಸಲಹೆ ನೀಡುತ್ತದೆ.

ನಿತ್ಯ ಎರಡು ಬಾರಿ ಹಲ್ಲುಜ್ಜಿ: ನಿತ್ಯ ಎರಡು ಬಾರಿ ಹಲ್ಲುಗಳನ್ನು ಉಜ್ಜಿ, ಬೆಳಗ್ಗೆ ಹಲ್ಲುಜ್ಜುವುದರಿಂದ ರಾತ್ರಿಯಿಂದ ಬಾಯಿಯಲ್ಲಿ ಸಂಗ್ರಹವಾದ ಟಾಕ್ಸಿನ್ಸ್ ಹೊರ ಹೋಗುತ್ತದೆ. ರಾತ್ರಿಯೂ ಕೂಡ ಹಲ್ಲುಗಳ ಜತೆ ನಿಮ್ಮ ನಾಲಿಕೆಯನ್ನು ಕೂಡ ಉಜ್ಜಬೇಕು. ಹಾಗೆಯೇ ಮಲಗುವ ಸಂದರ್ಭದಲ್ಲಿ ಬಾಯಿಯನ್ನು ನೀರಿನಿಂದ ಅಥವಾ ಮೌತ್​ವಾಶ ಮೂಲಕ ತೊಳೆಯುವುದರಿಂದ ನಿಮ್ಮ ಕರುಳಿನ ಆರೋಗ್ಯವೂ ಚೆನ್ನಾಗಿರುತ್ತದೆ.

ಪ್ರತಿ ಬಾರಿ ತಿಂದಾಗಲೂ ಬಾಯಿ ಮುಕ್ಕಳಿಸಿ: ಪ್ರತಿ ಬಾರಿ ಆಹಾರವನ್ನು ಸೇವಿಸಿದಾಗಲೂ ಬಾಯಿ ಮುಕ್ಕಳಿಸುವುದನ್ನು ಮರೆಯಬೇಡಿ. ಆಯುರ್ವೇದವು ಊಟವಾದ ಬಳಿಕ ನೀರು ಕುಡಿಯಿರಿ ಎಂದು ಹೇಳುವುದಿಲ್ಲ, ಊಟದ ಬಳಿಕ ಬಾಯಿ ಮುಕ್ಕಳಿಸುವುದರಿಂದ ಹಲ್ಲಿನಲ್ಲಿ ಸಿಲುಕಿರುವ ಆಹಾರ ಪದಾರ್ಥಗಳು ನೀರಿನೊಂದಿಗೆ ಹೊರಹೋಗುತ್ತದೆ, ಬಾಯಿ ಶುದ್ಧವಾಗುತ್ತದೆ.

ತಿನ್ನುತ್ತಲೇ ಇರಬೇಡಿ: ಒಂದೇ ಸಮನೆ ತಿನ್ನುವುದು ಒಳ್ಳೆಯದಲ್ಲ, ಅಂತರವಿರಲಿ, ಒಮ್ಮೆ ತಿಂದಮೇಲೆ ಕನಿಷ್ಠ 4 ಗಂಟೆಯಾದರೂ ಅಂತರವಿರುವಂತೆ ನೋಡಿಕೊಳ್ಳಿ.

ದಿನಕ್ಕೆ ಎಷ್ಟು ನೀರು ಕುಡಿಯಬೇಕು: ಮೂತ್ರವು ಬಿಳಿ ಬಣ್ಣದಲ್ಲಿರುವಂತೆ ನೋಡಿಕೊಳ್ಳಿ, ಅದು ಹಳದಿ ಬಣ್ಣಕ್ಕೆ ತಿರುಗಿದರೆ ನಿಮ್ಮ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ ಎಂದರ್ಥ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?