AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips: ಊಟ ಮಾಡಿದ ತಕ್ಷಣ ಮಲಗುವುದು ಎಷ್ಟು ಅಪಾಯಕಾರಿ ಎಂದು ತಿಳಿದಿದೆಯೇ?

ತಜ್ಞರ ಪ್ರಕಾರ ರಾತ್ರಿ ಊಟವಾದ ಕೂಡಲೇ ನಿದ್ದೆ ಮಾಡುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಹಾಗಾಗಿಯೇ ಊಟ ಮಾಡಿದ ತಕ್ಷಣ ನಿದ್ದೆ ಮಾಡಬಾರದು ಅಂತಾರೆ ಆರೋಗ್ಯ ತಜ್ಞರು. ಅದರಲ್ಲೂ ಊಟವಾದ ಮೇಲೆ ಮಲಗಲು 2ರಿಂದ 3 ಗಂಟೆ ಅಂತರ ಇರಬೇಕು.

Health Care Tips: ಊಟ ಮಾಡಿದ ತಕ್ಷಣ ಮಲಗುವುದು ಎಷ್ಟು ಅಪಾಯಕಾರಿ ಎಂದು ತಿಳಿದಿದೆಯೇ?
ಅಕ್ಷತಾ ವರ್ಕಾಡಿ
|

Updated on: Apr 04, 2024 | 8:13 PM

Share

ಊಟದ ನಂತರ ನೇರವಾಗಿ ಹೋಗಿ ಮಲಗುವ ಅಭ್ಯಾಸ ನಿಮಗೂ ಇದ್ದರೆ ಇಂದಿನಿಂದಲೇ ಇದನ್ನು ನಿಲ್ಲಿಸಿ ಎಂದು ತಜ್ಞರು ಸಲಹೆ ನೀಡುತ್ತಾರೆ. ಏಕೆಂದರೆ ಇದು ಜೀರ್ಣಾಂಗ ವ್ಯವಸ್ಥೆಗೆ ಬಹಳಷ್ಟು ತೊಂದರೆ ಉಂಟುಮಾಡುತ್ತದೆ. ತಿಂದ ತಕ್ಷಣ ನಿದ್ದೆ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಬರಬಹುದು. ವೈದ್ಯಕೀಯ ತಜ್ಞರ ಪ್ರಕಾರ ರಾತ್ರಿ ಊಟವಾದ ಕೂಡಲೇ ನಿದ್ದೆ ಮಾಡುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಹಾಗಾಗಿಯೇ ಊಟ ಮಾಡಿದ ತಕ್ಷಣ ನಿದ್ದೆ ಮಾಡಬಾರದು ಅಂತಾರೆ ಆರೋಗ್ಯ ತಜ್ಞರು. ಅದರಲ್ಲೂ ಊಟವಾದ ಮೇಲೆ ಮಲಗಲು 2ರಿಂದ 3 ಗಂಟೆ ಅಂತರ ಇರಬೇಕು.

ತಿಂದ ತಕ್ಷಣ ಮಲಗುವುದರಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು:

ಮಧುಮೇಹ:

ರಾತ್ರಿ ಊಟವಾದ ತಕ್ಷಣ ಮಲಗುವುದು ಮಧುಮೇಹದಂತಹ ಗಂಭೀರ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಈ ಅಭ್ಯಾಸವು ದೇಹದಲ್ಲಿ ಗ್ಲೂಕೋಸ್ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗಾಗಿ ತಿಂದ ತಕ್ಷಣ ಮಲಗಬೇಡಿ. ಇದನ್ನು ಮಾಡುವುದರಿಂದ ಮಧುಮೇಹ ಮತ್ತು ಬೊಜ್ಜು ಮುಂತಾದ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ.

ಜೀರ್ಣಕ್ರಿಯೆಯ ಸಮಸ್ಯೆಗಳು:

ರಾತ್ರಿ ಊಟವಾದ ಕೂಡಲೇ ನಿದ್ದೆ ಮಾಡುವುದರಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳು ಬರಬಹುದು. ತಿಂದ ತಕ್ಷಣ ಮಲಗುವುದು ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅದೇ ಸಮಯದಲ್ಲಿ ಜೀರ್ಣಕ್ರಿಯೆಯು ನಿಧಾನವಾಗಿರುತ್ತದೆ. ಆಹಾರ ಸರಿಯಾಗಿ ಜೀರ್ಣವಾಗದೆ ಹೊಟ್ಟೆಯಲ್ಲಿ ಊತ ಮತ್ತು ಅಜೀರ್ಣದಂತಹ ಸಮಸ್ಯೆಗಳು ಉಂಟಾಗುತ್ತವೆ.

ಇದನ್ನೂ ಓದಿ: ಭೂ ಗರ್ಭದ ಸ್ಫೋಟ, ಜನರ ಜೀವಕ್ಕೆ ಆಪತ್ತು ಖಚಿತ!

ಎದೆಯುರಿ:

ತಿಂದ ತಕ್ಷಣ ಮಲಗುವುದರಿಂದ ಎದೆಯುರಿ ಉಂಟಾಗುತ್ತದೆ. ಅಸಿಡಿಟಿ, ಹೊಟ್ಟೆ ಉರಿ, ಹೊಟ್ಟೆ ಉರಿ ಮುಂತಾದ ದೂರುಗಳೂ ಬರುತ್ತವೆ. ನೀವು ಈಗಾಗಲೇ ಅಸಿಡಿಟಿಯಿಂದ ಬಳಲುತ್ತಿದ್ದರೆ, ನೀವು ತಿಂದ ತಕ್ಷಣ ಮಲಗಬಾರದು.

ಚಯಾಪಚಯ ಸಮಸ್ಯೆಗಳಿರಬಹುದು:

ತಿಂದ ತಕ್ಷಣ ಮಲಗುವುದು ಚಯಾಪಚಯ ಸಮಸ್ಯೆಗಳನ್ನು ಉಂಟುಮಾಡಬಹುದು. ಅಲ್ಲದೆ, ಇದು ಬೊಜ್ಜು, ನಿದ್ರೆ ಮತ್ತು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಉಂಟುಮಾಡಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!