AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips : ದಾಂಪತ್ಯ ಜೀವನ ಖುಷಿಯಾಗಿರಬೇಕಾದ್ರೆ ಈ ವಿಷಯಗಳತ್ತ ಗಮನ ಕೊಡಿ

ಯಾವ ಸಂಸಾರದಲ್ಲಿ ಜಗಳವಿಲ್ಲ ಹೇಳಿ, ಪ್ರೀತಿಯಿದ್ದ ಮೇಲೆ ಜಗಳಗಳು ಹುಸಿಮುನಿಸು ಸರ್ವೇ ಸಾಮಾನ್ಯ. ಆದರೆ ದಾಂಪತ್ಯ ಜೀವನದಲ್ಲಿ ಜಗಳವೇ ಹೆಚ್ಚಾದರೆ ನೆಮ್ಮದಿಯು ಹಾಳಾಗುತ್ತದೆ. ಹೀಗಾಗಿ ಸಾಂಸಾರಿಕ ಜೀವನವು ಖುಷಿಯಾಗಿರಬೇಕಾದರೆ ಸಂಗಾತಿಗಳಿಬ್ಬರೂ ಈ ಕೆಲವು ವಿಷಯಗಳನ್ನು ದೊಡ್ಡದು ಮಾಡದೇ ಹೊಂದಾಣಿಕೆ ಮಾಡಿಕೊಂಡರೆ ಉತ್ತಮ ಅದಲ್ಲದೇ ಈ ಕೆಲವು ಸಲಹೆಗಳನ್ನು ಅನುಸರಿಸಿಕೊಂಡರೆ ವೈವಾಹಿಕ ಜೀವನವು ಸುಮಧುರವಾಗಿರಲು ಸಾಧ್ಯ.

Relationship Tips : ದಾಂಪತ್ಯ ಜೀವನ ಖುಷಿಯಾಗಿರಬೇಕಾದ್ರೆ ಈ ವಿಷಯಗಳತ್ತ ಗಮನ ಕೊಡಿ
ಸಾಯಿನಂದಾ
| Edited By: |

Updated on: Jul 16, 2024 | 6:19 PM

Share

ಸಂಸಾರವೆಂದ ಮೇಲೆ ಒಂದು ಮಾತು ಬರುತ್ತದೆ, ಒಂದು ಮಾತು ಹೋಗುತ್ತದೆ. ಅದನ್ನೇ ದೊಡ್ಡದು ಮಾಡುತ್ತಿದ್ದರೆ ಇಂದು ಸಂಗಾತಿಗಳಿಬ್ಬರೂ ಜೊತೆಯಾಗಿ ಬದುಕಲು ಸಾಧ್ಯವಾಗುತ್ತಿರಲಿಲ್ಲ. ಸಂಗಾತಿಗಳಿಬ್ಬರ ನಡುವೆ ಪ್ರೀತಿ ಹಾಗೂ ನಂಬಿಕೆಯೇ ಸಂಬಂಧದ ತಳಹದಿಯಾದರೆ, ಕೋಪಿಸಿಕೊಳ್ಳುವುದು ಪ್ರೀತಿಯನ್ನು ವ್ಯಕ್ತಪಡಿಸುವ ಇನ್ನೊಂದು ರೀತಿಯಾಗಿದೆ. ಕೆಲವರು ಎಷ್ಟೇ ಹೊಂದಾಣಿಕೆ ಮಾಡಿಕೊಂಡರೂ ವೈವಾಹಿಕ ಜೀವನದಲ್ಲಿ ಖುಷಿಯೇ ಇರುವುದಿಲ್ಲ. ಅಂತಹವರು ಈ ಕೆಲವು ವಿಷಯಗಳ ಬಗ್ಗೆ ಹೆಚ್ಚು ಗಮನ ಕೊಡುವುದು ಒಳಿತು.

  • ಸಂಗಾತಿಯ ಜೊತೆಗಿನ ಮಾತುಕತೆ ಕೆಲವೊಮ್ಮೆ ಕಿರಿಕಿರಿ ಅನಿಸಬಹುದು. ಆದರೆ ಈ ವೇಳೆ ಕೋಪದಿಂದ ಪ್ರತಿಕ್ರಿಯಿಸದೇ ಶಾಂತವಾಗಿಯೇ ಮರು ಉತ್ತರ ನೀಡುವುದು ಒಳ್ಳೆಯ ಅಭ್ಯಾಸ. ಇದರಿಂದ ಇಬ್ಬರ ನಡುವಿನ ಸಂಬಂಧವು ಗಟ್ಟಿಯಾಗಿರುತ್ತದೆ. ಮಾತು ಮಾತಿಗೂ ಸಿಟ್ಟುಮಾಡಿಕೊಂಡರೆ ಎದುರುಗಿರುವ ವ್ಯಕ್ತಿಯು ಅತಿರೇಕವಾಗಿ ವರ್ತಿಸುವ ಸಾಧ್ಯತೆಯಿರುತ್ತದೆ. ಹೀಗಾಗಿ ಆದಷ್ಟು ಮನಸ್ಸನ್ನು ಶಾಂತವಾಗಿರಿಸುವುದು ಒಳ್ಳೆಯದು.
  • ಎದುರಿಗಿರುವ ವ್ಯಕ್ತಿಯ ಮಾತನ್ನು ಆಲಿಸುವುದು ಕೂಡ ಒಂದು ಕಲೆ. ಹೀಗಾಗಿ ಸಂಗಾತಿಗಳಿಬ್ಬರಲ್ಲಿ ಒಬ್ಬರು ಮಾತನಾಡಿದಾಗ ಇನ್ನೊಬ್ಬರು ಆಲಿಸುವುದನ್ನು ಕಲಿತುಕೊಳ್ಳಬೇಕು. ಇದು ಸಂಸಾರದಲ್ಲಿ ಜಗಳವಾಗುವುದನ್ನು ತಪ್ಪಿಸುತ್ತದೆ. ಅದಲ್ಲದೇ, ತಪ್ಪಾಗಿ ಅರ್ಥೈಸಿಕೊಳ್ಳುವುದು ತಪ್ಪುತ್ತದೆ. ಇದರಿಂದ ಸಂಸಾರದಲ್ಲಿ ಸದಾ ಪ್ರೀತಿ ನೆಲೆಸಲು ಸಾಧ್ಯ.
  • ವೈವಾಹಿಕ ಜೀವನದಲ್ಲಿ ಸಂಗಾತಿಗಳಿಬ್ಬರ ನಡುವೆ ಸಿಹಿಯಾದ ಮಾತುಕತೆಯಿರಲೇಬೇಕು. ಆಗಿದ್ದರೆ ಮಾತ್ರ ಪ್ರೀತಿ ಹೆಚ್ಚಾಗಿ ಸಂಬಂಧವು ಗಟ್ಟಿಯಾಗುವುದು. ಮನಸ್ಸಿಗೆ ಹಿತವೆನಿಸುವ ಸಿಹಿ ಸಿಹಿಯಾದ ಮಾತುಗಳನ್ನೆ ಆಡುವುದನ್ನು ಕಲಿತರೆ ಸಂಗಾತಿಗಳಿಬ್ಬರೂ ಖುಷಿಯಿಂದಿರಬಹುದು.
  • ಸಂಬಂಧವು ಗಟ್ಟಿಯಾಗಿರಬೇಕಾದರೆ ನಂಬಿಕೆಯೆನ್ನುವುದು ಗಟ್ಟಿಯಾಗಿರಬೇಕು. ಹೀಗಾಗಿ ಪತಿ ಪತ್ನಿಯರಿಬ್ಬರೂ ಮಾತನಾಡುವಾಗ ನಂಬಿಕೆಯನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಅದಲ್ಲದೇ, ಸಂಗಾತಿ ಜೊತೆಗೆ ತುಂಬಾ ನಯ ವಿನಯದಿಂದ ಗೌರವದಿಂದ ಇರುವುದು ಕೂಡ ಸಂಗಾತಿಗೆ ನಿಮ್ಮ ಮೇಲಿನ ನಂಬಿಕೆಯನ್ನು ಹೆಚ್ಚಿಸುತ್ತದೆ.
  • ಜೀವನವು ಸುಲಲಿತವಾಗಿ ಸಾಗಬೇಕಾದರೆ ಆರ್ಥಿಕ ಸ್ಥಿತಿಯು ಚೆನ್ನಾಗಿರಬೇಕು. ಎಷ್ಟೋ ಸಂಸಾರಗಳಲ್ಲಿ ಇದೇ ವಿಚಾರವಾಗಿ ಮನಸ್ತಾಪಗಳಾಗುತ್ತದೆ. ಹಣದ ವಿಚಾರವಾಗಿ ಸಂಗಾತಿಗಳಿಬ್ಬರೂ ಪರಸ್ಪರ ಮಾತನಾಡಿಕೊಳ್ಳಬೇಕು. ಇಬ್ಬರೂ ಉದ್ಯೋಗದಲ್ಲಿದ್ದರೆ ಆರ್ಥಿಕವಾಗಿ ಕೆಲವು ಜವಾಬ್ದಾರಿಗಳನ್ನು ಹಂಚಿಕೊಳ್ಳುವುದು ಒಳ್ಳೆಯದು. ಇದರಿಂದ ಒಬ್ಬರ ಮೇಲಿರುವ ಭಾರವು ಕಡಿಮೆಯಾಗಿ ದಾಂಪತ್ಯ ಜೀವನವು ಸಂತೋಷದಿಂದ ಕೂಡಿರಲು ಸಾಧ್ಯ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು