AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ್ಣು-ತರಕಾರಿಗಳನ್ನು ಸ್ವಚ್ಛಗೊಳಿಸುವ ಸರಿಯಾದ ವಿಧಾನ ಯಾವುದು?

ಮಾರುಕಟ್ಟೆಯಿಂದ ಖರೀದಿಸುವಂತಹ ಹಣ್ಣು ತರಕಾರಿಗಳು ಹೆಚ್ಚಿನ ಪ್ರಮಾಣದ ರಾಸಾಯನಿಕಗಳನ್ನು ಹೊಂದಿರುತ್ತವೆ. ಮನೆಗೆ ತಂದು ನೀರಿನಿಂದ ಚೆನ್ನಾಗಿ ತೊಳೆದರೂ ರಾಸಾಯನಿಕ ಅವಶೇಷಗಳು ಹಣ್ಣು-ತರಕಾರಿಗಳಲ್ಲಿ ಹಾಗೆಯೇ ಉಳಿದುಬಿಡುತ್ತವೆ. ಇವುಗಳ ಸೇವನೆ ಆರೋಗ್ಯಕ್ಕೂ ತುಂಬಾನೇ ಡೇಂಜರ್.‌ ಹೀಗಿರುವಾಗ ಹಣ್ಣುಗಳನ್ನು ಸರಿಯಾದ ರೀತಿಯಲ್ಲಿ ತೊಳೆಯುವ ಮೂಲಕ ಅವುಗಳ ಮೇಲೆ ಅಂಟಿರುವ ರಾಸಾಯನಿಕಗಳನ್ನು ಸಂಪೂರ್ಣವಾಗಿ ತೆಗೆದುಹಾಕಬಹುದು. ಹಣ್ಣುತರಕಾರಿಗಳನ್ನು ಸರಿಯಾಗಿ ಸ್ವಚ್ಛಗೊಳಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಣ್ಣು-ತರಕಾರಿಗಳನ್ನು ಸ್ವಚ್ಛಗೊಳಿಸುವ ಸರಿಯಾದ ವಿಧಾನ ಯಾವುದು?
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jun 27, 2026 | 8:16 PM

Share

ಈ ಆಧುನಿಕ ಯುಗದಲ್ಲಿ ಎಲ್ಲವೂ ರಾಸಾಯನಿಕಯಮವಾಗಿದೆ. ಅದರಲ್ಲೂ ಹಣ್ಣು ತರಕಾರಿಗಳಲ್ಲಿ ಹೆಚ್ಚಿನ ಪ್ರಮಾಣದ ರಾಸಾಯನಿಕ ಅಂಶಗಳಿರುತ್ತವೆ. ಹೌದು ತರಕಾರಿಗಳನ್ನು (vegetables) ಬೆಳೆಯುವಾಗ ಅವುಗಳಲ್ಲಿ ಹುಳ, ಕೀಟಗಳು ಆವರಿಸಬಾರದು ಎಂಬ ಕಾರಣಕ್ಕೆ ಕೀಟನಾಶಗಳನ್ನು ಸಿಂಪಡಿಸಲಾಗುತ್ತದೆ. ಅದೇ ರೀತಿ ಈ ಹಣ್ಣುಗಳು ಮತ್ತು ತರಕಾರಿಗಳು ಹೊಲಗಳಿಂದ ಮಾರುಕಟ್ಟೆಗೆ ತಲುಪುವವರೆಗೆ ಫ್ರೆಶ್‌ ಆಗಿ ಕಾಣಿಸಬೇಕೆಂದು ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತದೆ. ಹೀಗಿರುವಾಗ ಹಣ್ಣು-ತರಕಾರಿಗಳನ್ನು ಸರಿಯಾದ ರೀತಿಯಲ್ಲಿ ಸ್ವಚ್ಛಗೊಳಿಸುವುದು ತುಂಬಾನೇ ಮುಖ್ಯ. ಬರೀ ನೀರಿನಿಂದ ತೊಳೆದರೆ ಅವುಗಳಲ್ಲಿ ಉಳಿದಿರುವ ರಾಸಾಯನಿಕ ಅವಶೇಷಗಳು ದೇಹವನ್ನು ಪ್ರವೇಶಿಸಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತವೆ. ಹಾಗಾಗಿ ಹಣ್ಣು ತರಕಾರಿಗಳ ಮೇಲಿನ ಹಾನಿಕಾರಕ ಸೂಕ್ಷ್ಮಜೀವಿಗಳು, ರಾಸಾಯನಿಕಗಳನ್ನು ಸಂಪೂರ್ಣವಾಗಿ ತೆಗೆದುಹಾಕಲು ಈ ಕ್ಲೀನಿಂಗ್‌ ಟಿಪ್ಸ್‌ ಪಾಲಿಸಿ.

ಹಣ್ಣುಗಳು ಮತ್ತು ತರಕಾರಿಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ವಿನೆಗರ್‌ನಿಂದ ಸ್ವಚ್ಛಗೊಳಿಸಿ: ಮಾರುಕಟ್ಟೆಯಿಂದ ತಂದ ಹಣ್ಣುಗಳು ಮತ್ತು ತರಕಾರಿಗಳನ್ನು ಸ್ವಚ್ಛಗೊಳಿಸಲು ಸುಲಭವಾದ ಮಾರ್ಗವೆಂದರೆ ಮೊದಲು ಅವುಗಳನ್ನು ಶುದ್ಧ ನೀರಿನಿಂದ ಚೆನ್ನಾಗಿ ತೊಳೆಯುವುದು. ಈಗ  1 ಭಾಗ ವಿನೆಗರ್ ಮತ್ತು 3-4 ಭಾಗ ನೀರು ತೆಗೆದುಕೊಂಡು ದ್ರಾವಣವನ್ನು ತಯಾರಿಸಿ. ಆ ನೀರಿಗೆ ಹಣ್ಣುಗಳು ಮತ್ತು ತರಕಾರಿಗಳನ್ನು ಹಾಕಿ ಸುಮಾರು 15 ನಿಮಿಷಗಳ ಕಾಲ ನೆನೆಸಿಡಿ, ಬಳಿಕ ಮತ್ತೊಮ್ಮೆ ಶುದ್ಧ ನೀರಿನಿಂದ ಹಣ್ಣುಗಳನ್ನು ತೊಳೆಯಿರಿ.

ಅಡಿಗೆ ಸೋಡಾ ಬಳಸಿ: ಹಣ್ಣು ತರಕಾರಿಗಳನ್ನು ಒಂದು ಬಾರಿ ನೀರಿನಿಂದ ತೊಳೆದ ಬಳಿಕ, ನೀವು ಅವುಗಳನ್ನು ಅಡಿಗೆ ಸೋಡಾದಿಂದಲೂ ಕ್ಲೀನ್‌ ಮಾಡಬಹುದು. ಇದಕ್ಕಾಗಿ, 2-3 ಕಪ್ ನೀರಿನಲ್ಲಿ 1 ಟೀಚಮಚ ಅಡಿಗೆ ಸೋಡಾವನ್ನು ಮಿಶ್ರಣ ಮಾಡಿ. ಹಣ್ಣುಗಳು ಮತ್ತು ತರಕಾರಿಗಳನ್ನು ಆ ನೀರಿಗೆ ಸೇರಿಸಿ ಮತ್ತು 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ಅದನ್ನು ಶುದ್ಧ ನೀರಿನಿಂದ ತೊಳೆಯಿರಿ ಮತ್ತು  ಒಣಗಿಸಿ ಹಣ್ಣು ಮತ್ತು ತರಕಾರಿಗಳನ್ನು ಫ್ರಿಡ್ಜ್‌ನಲ್ಲಿ ಸಂಗ್ರಹಿಸಿಡಿ.

ಇದನ್ನೂ ಓದಿ: ಮನೆಯಲ್ಲಿಯೇ ತಯಾರಿಸಬಹುದು ಶುದ್ಧ ಕೊಬ್ಬರಿ ಎಣ್ಣೆ; ಅದು ಹೇಗೆ ಅಂತೀರಾ?

ಉಪ್ಪು ಮತ್ತು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ: ತರಕಾರಿಗಳು ಮತ್ತು ಹಣ್ಣುಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲು ನೀವು ಬಯಸಿದರೆ, ಉಗುರು ಬೆಚ್ಚಗಿನ ನೀರಿಗೆ ಒಂದು ಚಿಟಿಕೆ ಉಪ್ಪು ಸೇರಿಸಿ ಮತ್ತು ತರಕಾರಿಗಳು, ಹಣ್ಣುಗಳನ್ನು ಅದರಲ್ಲಿ 10 ರಿಂದ 15 ನಿಮಿಷಗಳ ಕಾಲ ನೆನೆಸಿಡಿ. ನಂತರ ಶುದ್ಧ ನೀರಿನಿಂದ ಸ್ವಚ್ಛಗೊಳಿಸಿ. ಈ ದ್ರಾವಣವು ತರಕಾರಿಗಳಿಂದ ಬ್ಯಾಕ್ಟೀರಿಯಾ ಮತ್ತು ಸೂಕ್ಷ್ಮಜೀವಿಗಳನ್ನು ತೆಗೆದುಹಾಕಲು  ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿರಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ