AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ್ಣು-ತರಕಾರಿಗಳನ್ನು ಸ್ವಚ್ಛಗೊಳಿಸುವ ಸರಿಯಾದ ವಿಧಾನ ಯಾವುದು?

ಮಾರುಕಟ್ಟೆಯಿಂದ ಖರೀದಿಸುವಂತಹ ಹಣ್ಣು ತರಕಾರಿಗಳು ಹೆಚ್ಚಿನ ಪ್ರಮಾಣದ ರಾಸಾಯನಿಕಗಳನ್ನು ಹೊಂದಿರುತ್ತವೆ. ಮನೆಗೆ ತಂದು ನೀರಿನಿಂದ ಚೆನ್ನಾಗಿ ತೊಳೆದರೂ ರಾಸಾಯನಿಕ ಅವಶೇಷಗಳು ಹಣ್ಣು-ತರಕಾರಿಗಳಲ್ಲಿ ಹಾಗೆಯೇ ಉಳಿದುಬಿಡುತ್ತವೆ. ಇವುಗಳ ಸೇವನೆ ಆರೋಗ್ಯಕ್ಕೂ ತುಂಬಾನೇ ಡೇಂಜರ್.‌ ಹೀಗಿರುವಾಗ ಹಣ್ಣುಗಳನ್ನು ಸರಿಯಾದ ರೀತಿಯಲ್ಲಿ ತೊಳೆಯುವ ಮೂಲಕ ಅವುಗಳ ಮೇಲೆ ಅಂಟಿರುವ ರಾಸಾಯನಿಕಗಳನ್ನು ಸಂಪೂರ್ಣವಾಗಿ ತೆಗೆದುಹಾಕಬಹುದು. ಹಣ್ಣುತರಕಾರಿಗಳನ್ನು ಸರಿಯಾಗಿ ಸ್ವಚ್ಛಗೊಳಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಣ್ಣು-ತರಕಾರಿಗಳನ್ನು ಸ್ವಚ್ಛಗೊಳಿಸುವ ಸರಿಯಾದ ವಿಧಾನ ಯಾವುದು?
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jun 27, 2026 | 8:16 PM

Share

ಈ ಆಧುನಿಕ ಯುಗದಲ್ಲಿ ಎಲ್ಲವೂ ರಾಸಾಯನಿಕಯಮವಾಗಿದೆ. ಅದರಲ್ಲೂ ಹಣ್ಣು ತರಕಾರಿಗಳಲ್ಲಿ ಹೆಚ್ಚಿನ ಪ್ರಮಾಣದ ರಾಸಾಯನಿಕ ಅಂಶಗಳಿರುತ್ತವೆ. ಹೌದು ತರಕಾರಿಗಳನ್ನು (vegetables) ಬೆಳೆಯುವಾಗ ಅವುಗಳಲ್ಲಿ ಹುಳ, ಕೀಟಗಳು ಆವರಿಸಬಾರದು ಎಂಬ ಕಾರಣಕ್ಕೆ ಕೀಟನಾಶಗಳನ್ನು ಸಿಂಪಡಿಸಲಾಗುತ್ತದೆ. ಅದೇ ರೀತಿ ಈ ಹಣ್ಣುಗಳು ಮತ್ತು ತರಕಾರಿಗಳು ಹೊಲಗಳಿಂದ ಮಾರುಕಟ್ಟೆಗೆ ತಲುಪುವವರೆಗೆ ಫ್ರೆಶ್‌ ಆಗಿ ಕಾಣಿಸಬೇಕೆಂದು ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತದೆ. ಹೀಗಿರುವಾಗ ಹಣ್ಣು-ತರಕಾರಿಗಳನ್ನು ಸರಿಯಾದ ರೀತಿಯಲ್ಲಿ ಸ್ವಚ್ಛಗೊಳಿಸುವುದು ತುಂಬಾನೇ ಮುಖ್ಯ. ಬರೀ ನೀರಿನಿಂದ ತೊಳೆದರೆ ಅವುಗಳಲ್ಲಿ ಉಳಿದಿರುವ ರಾಸಾಯನಿಕ ಅವಶೇಷಗಳು ದೇಹವನ್ನು ಪ್ರವೇಶಿಸಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತವೆ. ಹಾಗಾಗಿ ಹಣ್ಣು ತರಕಾರಿಗಳ ಮೇಲಿನ ಹಾನಿಕಾರಕ ಸೂಕ್ಷ್ಮಜೀವಿಗಳು, ರಾಸಾಯನಿಕಗಳನ್ನು ಸಂಪೂರ್ಣವಾಗಿ ತೆಗೆದುಹಾಕಲು ಈ ಕ್ಲೀನಿಂಗ್‌ ಟಿಪ್ಸ್‌ ಪಾಲಿಸಿ.

ಹಣ್ಣುಗಳು ಮತ್ತು ತರಕಾರಿಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ವಿನೆಗರ್‌ನಿಂದ ಸ್ವಚ್ಛಗೊಳಿಸಿ: ಮಾರುಕಟ್ಟೆಯಿಂದ ತಂದ ಹಣ್ಣುಗಳು ಮತ್ತು ತರಕಾರಿಗಳನ್ನು ಸ್ವಚ್ಛಗೊಳಿಸಲು ಸುಲಭವಾದ ಮಾರ್ಗವೆಂದರೆ ಮೊದಲು ಅವುಗಳನ್ನು ಶುದ್ಧ ನೀರಿನಿಂದ ಚೆನ್ನಾಗಿ ತೊಳೆಯುವುದು. ಈಗ  1 ಭಾಗ ವಿನೆಗರ್ ಮತ್ತು 3-4 ಭಾಗ ನೀರು ತೆಗೆದುಕೊಂಡು ದ್ರಾವಣವನ್ನು ತಯಾರಿಸಿ. ಆ ನೀರಿಗೆ ಹಣ್ಣುಗಳು ಮತ್ತು ತರಕಾರಿಗಳನ್ನು ಹಾಕಿ ಸುಮಾರು 15 ನಿಮಿಷಗಳ ಕಾಲ ನೆನೆಸಿಡಿ, ಬಳಿಕ ಮತ್ತೊಮ್ಮೆ ಶುದ್ಧ ನೀರಿನಿಂದ ಹಣ್ಣುಗಳನ್ನು ತೊಳೆಯಿರಿ.

ಅಡಿಗೆ ಸೋಡಾ ಬಳಸಿ: ಹಣ್ಣು ತರಕಾರಿಗಳನ್ನು ಒಂದು ಬಾರಿ ನೀರಿನಿಂದ ತೊಳೆದ ಬಳಿಕ, ನೀವು ಅವುಗಳನ್ನು ಅಡಿಗೆ ಸೋಡಾದಿಂದಲೂ ಕ್ಲೀನ್‌ ಮಾಡಬಹುದು. ಇದಕ್ಕಾಗಿ, 2-3 ಕಪ್ ನೀರಿನಲ್ಲಿ 1 ಟೀಚಮಚ ಅಡಿಗೆ ಸೋಡಾವನ್ನು ಮಿಶ್ರಣ ಮಾಡಿ. ಹಣ್ಣುಗಳು ಮತ್ತು ತರಕಾರಿಗಳನ್ನು ಆ ನೀರಿಗೆ ಸೇರಿಸಿ ಮತ್ತು 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ಅದನ್ನು ಶುದ್ಧ ನೀರಿನಿಂದ ತೊಳೆಯಿರಿ ಮತ್ತು  ಒಣಗಿಸಿ ಹಣ್ಣು ಮತ್ತು ತರಕಾರಿಗಳನ್ನು ಫ್ರಿಡ್ಜ್‌ನಲ್ಲಿ ಸಂಗ್ರಹಿಸಿಡಿ.

ಇದನ್ನೂ ಓದಿ: ಮನೆಯಲ್ಲಿಯೇ ತಯಾರಿಸಬಹುದು ಶುದ್ಧ ಕೊಬ್ಬರಿ ಎಣ್ಣೆ; ಅದು ಹೇಗೆ ಅಂತೀರಾ?

ಉಪ್ಪು ಮತ್ತು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ: ತರಕಾರಿಗಳು ಮತ್ತು ಹಣ್ಣುಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲು ನೀವು ಬಯಸಿದರೆ, ಉಗುರು ಬೆಚ್ಚಗಿನ ನೀರಿಗೆ ಒಂದು ಚಿಟಿಕೆ ಉಪ್ಪು ಸೇರಿಸಿ ಮತ್ತು ತರಕಾರಿಗಳು, ಹಣ್ಣುಗಳನ್ನು ಅದರಲ್ಲಿ 10 ರಿಂದ 15 ನಿಮಿಷಗಳ ಕಾಲ ನೆನೆಸಿಡಿ. ನಂತರ ಶುದ್ಧ ನೀರಿನಿಂದ ಸ್ವಚ್ಛಗೊಳಿಸಿ. ಈ ದ್ರಾವಣವು ತರಕಾರಿಗಳಿಂದ ಬ್ಯಾಕ್ಟೀರಿಯಾ ಮತ್ತು ಸೂಕ್ಷ್ಮಜೀವಿಗಳನ್ನು ತೆಗೆದುಹಾಕಲು  ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿರಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ