AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗೆ ಹಚ್ಚಿದ ಮೆಹಂದಿಯ ಬಣ್ಣವು ಮಸುಕಾಗಿದೆಯೇ? ಬಣ್ಣ ತೆಗೆದು ಹಾಕಲು ಈ ಟಿಪ್ಸ್ ಪಾಲಿಸಿ

ಭಾರತೀಯ ಸಂಸ್ಕೃತಿಯಲ್ಲಿ ಮೆಹಂದಿಗೆ ಬಹಳಷ್ಟು ಪ್ರಾಮುಖ್ಯತೆಯಿದೆ. ಮದುವೆ, ಶುಭ ಕಾರ್ಯ ಹಾಗೂ ಹಬ್ಬಹರಿದಿನಗಳಲ್ಲಿ ಮೆಹಂದಿಯೂ ಹೆಣ್ಣು ಮಕ್ಕಳ ಕೈಯನ್ನು ಅಂದವನ್ನು ಹೆಚ್ಚಿಸುತ್ತದೆ. ಮೆಹಂದಿಯನ್ನು ಹಚ್ಚಿದ ಒಂದೆರಡು ದಿನಗಳ ಆಕರ್ಷಕವಾಗಿ ಕಂಡರೂ ತದನಂತರದಲ್ಲಿ ಮಸುಕಾಗಲು ಪ್ರಾರಂಭಿಸುತ್ತದೆ. ಹೀಗಾದಾಗ ಕೈಗೆ ಹಚ್ಚಿದ ಮೆಹಂದಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಟಿಪ್ಸ್ ಇಲ್ಲಿದೆ.

ಕೈಗೆ ಹಚ್ಚಿದ ಮೆಹಂದಿಯ ಬಣ್ಣವು ಮಸುಕಾಗಿದೆಯೇ? ಬಣ್ಣ ತೆಗೆದು ಹಾಕಲು ಈ ಟಿಪ್ಸ್ ಪಾಲಿಸಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Oct 19, 2024 | 5:12 PM

Share

ಬಹುತೇಕ ಹೆಣ್ಣು ಮಕ್ಕಳಿಗೆ ಕೈಗೆ ಮೆಹಂದಿ ಹಚ್ಚೋದಂದ್ರೆ ತುಂಬಾನೇ ಇಷ್ಟ. ಹೀಗಾಗಿ ಹಬ್ಬಗಳು ಬಂತೆಂದರೆ ಸಾಕು ಕೈ ತುಂಬಾ ಗೋರಂಟಿಯ ರಂಗು ಕೈಯ ಅಂದವನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲದೇ, ಮದುವೆ ಸೇರಿದಂತೆ ಇನ್ನಿತ್ತರ ಶುಭ ಕಾರ್ಯಗಳಿಗೆ ಮೆಹಂದಿ ಹಚ್ಚಲೇ ಬೇಕು. ಆದರೆ ಇದನ್ನು ಹಚ್ಚಿದ ನಂತರ ನಾಲ್ಕು ದಿನಗಳವರೆಗೆ ಬಣ್ಣವು ಉತ್ತಮವಾಗಿರುತ್ತದೆ. ತದನಂತರದಲ್ಲಿ ಮಸುಕಾಗಲು ಪ್ರಾರಂಭಿಸುತ್ತದೆ. ಆಗ ಕೈ ನೋಡಲು ಅಷ್ಟು ಸುಂದರವಾಗಿ ಕಾಣುವುದಿಲ್ಲ. ಒಂದು ವೇಳೆ ನಿಮ್ಮ ಕೈಗೆ ಹಚ್ಚಿದ ಮೆಹಂದಿ ಬಣ್ಣ ಮಾಸಿದರೆ ಅಥವಾ ಮೆಹಂದಿ ವಿನ್ಯಾಸ ಚೆನ್ನಾಗಿ ಕಾಣುತ್ತಿಲ್ಲ ಎಂದಾದಲ್ಲಿ ಇದನ್ನು ಹೋಗಲಾಡಿಸಲು ಈ ಸಲಹೆಗಳು ಇಲ್ಲಿವೆ.

* ಮೊದಲು ಕೈಗಳಿಗೆ ಟೂತ್ ಪೇಸ್ಟ್ ಹಚ್ಚಿ ಮತ್ತು ಮೇಲೆ ಒಂದು ಚಿಟಿಕೆ ಸಕ್ಕರೆ ಹಾಕಿಕೊಂಡು ಕೈಗಳಿಂದ ಸ್ಕ್ರಬ್ ಮಾಡಿಕೊಳ್ಳಬೇಕು. ಈ ಟೂತ್‌ಪೇಸ್ಟ್ ಸಂಪೂರ್ಣವಾಗಿ ಒಣಗಿದ ಬಳಿಕ ಸ್ವಲ್ಪ ನೀರು ಹಾಕಿ ಐದು ನಿಮಿಷಗಳ ಕಾಲ ಉಜ್ಜುವುದರಿಂದ ಬಣ್ಣಗಳು ಹೋಗಿ, ಕೈಗಳು ಸಂಪೂರ್ಣವಾಗಿ ಸ್ವಚ್ಛವಾಗುತ್ತದೆ.

* ಮೆಹಂದಿಯ ಬಣ್ಣವನ್ನು ತೆಗೆದುಹಾಕಲು, ನಿಂಬೆ ರಸದೊಂದಿಗೆ ಬೇಕಿಂಗ್ ಸೋಡಾವನ್ನು ಬೆರೆಸಿ ಪೇಸ್ಟ್ ಮಾಡಿಕೊಳ್ಳಿ. ಈ ಪೇಸ್ಟ್ ಅನ್ನು ಅಂಗೈಗೆ ಹಚ್ಚಿ ಐದು ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರದಲ್ಲಿ ಕೈಯನ್ನು ಉಜ್ಜಿಕೊಂಡರೆ ಮೆಹಂದಿ ವಿನ್ಯಾಸ ಅಥವಾ ಮೆಹಂದಿ ಬಣ್ಣವು ಇಲ್ಲದಂತಾಗುತ್ತದೆ.

ಮೆಹಂದಿ ಕೈಗೆ ಹಚ್ಚುವ ಮುನ್ನ ಈ ವಿಷಯ ತಿಳಿದಿರಲಿ

ಕಳಪೆ ಗುಣಮಟ್ಟದ ಮೆಹಂದಿಯನ್ನು ತರಬೇಡಿ. ಪ್ಯಾಕ್‌ ಮಾಡಿದ ದಿನಾಂಕವನ್ನು ಪರಿಶೀಲಿಸಿಕೊಳ್ಳಿ. ಸಾಧ್ಯವಾದಲ್ಲಿ ಮನೆಯಲ್ಲಿಯೇ ತಯಾರು ಮಾಡಿರುವ ಮೆಹಂದಿ ಆಯ್ಕೆ ಮಾಡಿಕೊಂಡರೆ ಉತ್ತಮ. ಮಾರುಕಟ್ಟೆಯಲ್ಲಿ ಸಿಗುವ ಕೋನ್ ಗಳಲ್ಲಿ ರಾಸಾಯನಿಕಗಳ ಬಳಕೆ ಮಾಡಿರುವುದರಿಂದ ಚರ್ಮಕ್ಕೆ ಹಾನಿಕಾರಕವಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!