AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vitamin D in Monsoon: ಮಳೆಗಾಲದಲ್ಲಿ ವಿಟಮಿನ್ ಡಿ ಪೋಷಕಾಂಶ ಪಡೆಯುವುದು ಹೇಗೆ? ಇಲ್ಲಿವೆ ಸಲಹೆ

ಮಳೆಗಾಲದಲ್ಲಿ ಆಕಾಶದಲ್ಲಿ ದಟ್ಟವಾಗಿ ಮೋಡಗಳು ಆವರಿಸುವ ಕಾರಣ ಸೂರ್ಯನ ಬೆಳಕು ಭೂಮಿಯ ಮೇಲೆ ಬೀಳುವುದು ತೀರಾ ವಿರಳ. ಅಂತಹ ಪರಿಸ್ಥಿತಿಯಲ್ಲಿ ನಮ್ಮ ದೇಹವು ಸೂರ್ಯನ ಬೆಳಕಿನಿಂದ ಪಡೆಯುವ ನೈಸರ್ಗಿಕ ವಿಟಮಿನ್ ಡಿ ಪೋಷಕಾಂಶದ ಪ್ರಮಾಣವು ಕಡಿಮೆಯಾಗುತ್ತದೆ. ಹೀಗಿರುವಾಗ ಮಳೆಗಾಲದಲ್ಲಿ ವಿಟಮಿನ್ ಡಿ ಪೋಷಕಾಂಶವನ್ನು ಹೇಗೆ ಪಡೆಯುವುದು ಎಂದು ಚಿಂತೆಗಿಡಾಗಿದ್ದೀರಾ? ಯೋಚಿಸಬೇಡಿ ಇಲ್ಲಿವೆ ಕೆಲವು ಪರಿಹಾರಗಳು.

Vitamin D in Monsoon: ಮಳೆಗಾಲದಲ್ಲಿ ವಿಟಮಿನ್ ಡಿ ಪೋಷಕಾಂಶ ಪಡೆಯುವುದು ಹೇಗೆ? ಇಲ್ಲಿವೆ ಸಲಹೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 21, 2023 | 4:25 PM

Share

ವಿಟಮಿನ್ ಡಿ ನಮ್ಮ ದೇಹಕ್ಕೆ ಬೇಕಾಗಿರುವ ಅಗತ್ಯ ಪೋಷಕಾಂಶಗಳಲ್ಲಿ ಒಂದಾಗಿದೆ. ಇದು ಕ್ಯಾಲ್ಸಿಯಂ ನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಇದಲ್ಲದೆ ಸ್ನಾಯುಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡಲು ಸಹಕಾರಿಯಾಗಿದೆ. ಅಷ್ಟೇ ಅಲ್ಲ, ಮೆದುಳಿನಿಂದ ನರಗಳ ಮೂಲಕ ದೇಹಕ್ಕೆ ಸಂದೇಶವನ್ನು ರವಾನಿಸಲು ವಿಟಮಿನ್ ಡಿ ಸಹಾಯ ಮಾಡುತ್ತದೆ. ಹಾಗೂ ಬಲವಾದ ರೋಗನಿರೋಧಕ ಶಕ್ತಿಗಾಗಿ ವಿಟಮಿನ್ ಡಿ ಪೋಷಕಾಂಶವು ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾಗಿದೆ. ಬೆಳಗ್ಗಿನ ಸಮಯದಲ್ಲಿ ಸೂರ್ಯನ ಬೆಳಕಿಗೆ ದೇಹವನ್ನು ಒಡ್ಡಿಕೊಳ್ಳುವ ಮೂಲಕ ವಿಟಮಿನ್ ಡಿ ಪೋಷಕಾಂಶನ್ನು ನೈಸರ್ಗಿಕವಾಗಿ ಪಡೆಯಬಹುದು. ಆದರೆ ಮಳೆಗಾಲದಲ್ಲಿ ನಿರಂತರವಾಗಿ ಮೋಡಕವಿದ ವಾತಾವರಣ ಇರುವ ಕಾರಣ ಸೂರ್ಯನ ಕಿರಣಗಳು ಭೂಮಿಗೆ ಅಷ್ಟೊಂದು ಬೀಳುವುದಿಲ್ಲ. ಅಂತಹ ಸಮಯದಲ್ಲಿ ನಾವು ನೈಸರ್ಗಿಕವಾಗಿ ವಿಟಮಿನ್ ಡಿ ಪೋಷಕಾಂಶವನ್ನು ಪಡೆಯಲು ಕಷ್ಟಕರವಾಗುತ್ತದೆ. ಹೀಗಿರುವಾಗ ಕೆಲವು ಪರ್ಯಾಯ ಮಾರ್ಗಗಳ ಮೂಲಕ ವಿಟಮಿನ್ ಡಿ ಪೋಷಕಾಂಶವನ್ನು ಪಡೆಯಬಹುದು. ಮಳೆಗಾಲದಲ್ಲಿ ವಿಟಮಿನ್ ಡಿ ಕೊರತೆಯನ್ನು ನೀಗಿಸಲು ಇಲ್ಲಿವೆ ಕೆಲವು ಪರಿಹಾರಗಳು.

ಮಳೆಗಾಲದಲ್ಲಿ ವಿಟಮಿನ್ ಡಿ ಕೊರತೆಯನ್ನು ನೀಗಿಸುವುದು ಹೇಗೆ:

ಪ್ರಸ್ತುತ ಭಾರತದಲ್ಲಿ ಮಳೆಗಾಲ ನಡೆಯುತ್ತಿದೆ. ಇಂತಹ ಸಮಯದಲ್ಲಿ ಮೋಡಕವಿದ ವಾತಾವರಣದ ಕಾರಣ ಸೂರ್ಯನ ಕಿರಣಗಳು ಭೂಮಿಗೆ ಬೀಳುವುದೇ ಅಪರೂಪವಾಗಿಬಿಟ್ಟಿದೆ. ಹಾಗಾಗಿ ಈ ಸಮಯದಲ್ಲಿ ಸೂರ್ಯನ ಕಿರಣಗಳಿಂದ ಲಭಿಸುವ ನೈಸರ್ಗಿಕ ವಿಟಮಿನ್ ಡಿ ಪೋಷಕಾಂಶವನ್ನು ಪಡೆಯುವುದು ಕಷ್ಟಸಾಧ್ಯವಾಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಕೆಲವು ಪರ್ಯಾಯ ಮಾರ್ಗಗಳ ಮೂಲಕ ವಿಟಮಿನ್ ಡಿ ಕೊರತೆಯನ್ನು ನೀಗಿಸಬಹುದಾಗಿದೆ:

ಆಹಾರ ಪದ್ಧತಿ:

ಕೆಲವೊಂದು ಆಹಾರಗಳನ್ನು ಸೇವನೆ ಮಾಡುವ ಮೂಲಕ ಈ ಮಳೆಗಾಲದಲ್ಲಿ ವಿಟಮಿನ್ ಡಿ ಪೋಷಕಾಂಶವನ್ನು ಪಡೆಯಬಹುದು. ಇದಕ್ಕಾಗಿ ಮೀನು ಅಥವಾ ಮೀನಿನ ಎಣ್ಣೆಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ. ಇದಲ್ಲದೆ ಮೊಟ್ಟೆಯ ಹಳದಿ ಭಾಗ, ಅಣಬೆ, ಚೀಸ್ ನಂತಹ ಕೆಲವು ಆಹಾರಗಳನ್ನು ತಿನ್ನುವ ಮೂಲಕ ವಿಟಮಿನ್ ಡಿ ಪೋಷಕಾಂಶವನ್ನು ಪಡೆದುಕೊಳ್ಳಬಹುದು.

ಪೂರಕಗಳು:

ನಿಮ್ಮ ಆಹಾರದಲ್ಲಿ ವಿಟಮಿನ್ ಡಿ ಯಿಂದ ಸಮೃದ್ಧವಾಗಿರುವ ಆಹಾರವನ್ನು ಸೇರಿಸಲು ಸಾಧ್ಯವಾಗದಿದ್ದರೆ, ಅಂತಹ ಜನರು ವೈದ್ಯರ ಸಲಹೆಯೊಂದಿಗೆ ವಿಟಮಿನ್ ಡಿ ಮಾತ್ರೆಗಳನ್ನು ತೆಗೆದುಕೊಳ್ಳಬಹುದು.

ಪೂರಕಗಳನ್ನು ಯಾವಾಗ ತೆಗೆದುಕೊಳ್ಳಬೇಕು: ಅನೇಕ ಜನರು ಈಗಲೇ ಪೂರಕಗಳು ಅಗತ್ಯವಿದೆಯೇ ಅಥವಾ ಇಲ್ಲವೇ ಎಂದು ತಿಳಿಯದೆ ಪೂರಕಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸುತ್ತಾರೆ. ಹೀಗೆ ಮಾಡುವುದು ತಪ್ಪು. ನೀವು ವಿಟಮಿನ್ ಡಿ ಕೊರತೆಯನ್ನು ಹೊಂದಿದ್ದೀರಾ ಅಥವಾ ಇಲ್ಲವೇ ಎಂಬುದನ್ನು ವೈದ್ಯರ ಬಳಿ ಹೋಗಿ ಪರೀಕ್ಷಿಸುವುದು ಬಹಳ ಮುಖ್ಯ. ರಕ್ತ ಪರೀಕ್ಷೆಯಲ್ಲಿ ವಿಟಮಿನ್ ಡಿ ಕೊರತೆಯ ಮಟ್ಟವನ್ನು ಪರಿಶೀಲಿಸಿದ ಬಳಿಕ ವೈದ್ಯರ ಸಲಹೆಯ ಮೇರೆಗೆ ಪೂರಕಗಳನ್ನು ತೆಗೆದುಕೊಳ್ಳಿ.

ಇದನ್ನೂ ಓದಿ: ದೇಹದಲ್ಲಿ ವಿಟಮಿನ್ ಡಿ ಕೊರತೆಯುಂಟಾಗಲು ಕಾರಣಗಳೇನು? ಇಲ್ಲಿದೆ ಮಾಹಿತಿ

ನಾವು ಹೆಚ್ಚು ವಿಟಮಿನ್ ಡಿ ಪೂರಕಗಳನ್ನು ತೆಗೆದುಕೊಂಡರೆ ಏನಾಗುತ್ತದೆ:

ಹೆಚ್ಚು ವಿಟಮಿನ್ ಡಿ ಪೂರಕಗಳನ್ನು ತೆಗೆದುಕೊಳ್ಳುವುದು ಸಹ ಹಾನಿಕಾರಕವಾಗಿದೆ. ರಕ್ತದಲ್ಲಿನ ಹೆಚ್ಚಿನ ಮಟ್ಟದ ವಿಟಮಿನ್ ಸಹ ವಾಕರಿಕೆ, ವಾಂತಿ, ಸ್ನಾಯು ದೌರ್ಬಲ್ಯ, ಹಸಿವಿನ ಕೊರತೆ, ನಿರ್ಜಲೀಕರಣ, ಅತಿಯಾದ ಮೂತ್ರ ವಿಸರ್ಜನೆ, ಬಾಯಾರಿಕೆ ಮತ್ತು ಮೂತ್ರ ಪಿಂಡದ ಕಲ್ಲುಗಳಂತ ಸಮಸ್ಯೆಗಳಿಗೆ ಕಾರಣವಾಗಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!