AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bread Upma: ಚಳಿಗಾಲದಲ್ಲಿ ತ್ವರಿತ ಮತ್ತು ಸುಲಭವಾಗಿ ಬ್ರೆಡ್ ಉಪ್ಪಿಟ್ಟು ತಯಾರಿಸಿ

ಗಡಿಬಿಡಿ ಜೀವನಕ್ಕೆ ಒಗ್ಗಿಕೊಂಡಿರುವವರಿಗೂ ಈ ರೆಸಿಪಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಯಾಕೆಂದರೆ ಕೇವಲ 15 ನಿಮಿಷಗಳಲ್ಲಿ ತಯಾರಿಸಬಹುದಾಗಿದೆ.

Bread Upma: ಚಳಿಗಾಲದಲ್ಲಿ ತ್ವರಿತ ಮತ್ತು ಸುಲಭವಾಗಿ ಬ್ರೆಡ್ ಉಪ್ಪಿಟ್ಟು ತಯಾರಿಸಿ
Bread UpmaImage Credit source: NDTV FOOD
TV9 Web
| Edited By: |

Updated on: Nov 13, 2022 | 4:20 PM

Share

ಚಳಿಗಾಲ ಪ್ರಾರಂಭವಾಯಿತೆಂದರೆ ಸಾಕು ಕಂಬಳಿ ಹೊದ್ದು ಬೆಚ್ಚಗೆ ಮಲಗುವವರೇ ಹೆಚ್ಚು. ಈ ಚಳಿಗಾಲದ ಸಮಯದಲ್ಲಿ ಕೇವಲ 15 ನಿಮಿಷಗಳಲ್ಲಿ ತಯಾರಿಸಬಹುದಾದ ಬ್ರೆಡ್ ಉಪ್ಪಿಟ್ಟು ಬೆಚ್ಚಗೆ ಸವಿಯಿರಿ.

ಗಡಿಬಿಡಿ ಜೀವನಕ್ಕೆ ಒಗ್ಗಿಕೊಂಡಿರುವವರಿಗೂ ಈ ರೆಸಿಪಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಯಾಕೆಂದರೆ ಸಾಕಷ್ಟು ಜನರು ಬೆಳಗ್ಗಿನ ಉಪಹಾರಕ್ಕೆ ಸಾಕಷ್ಟು ಸಮಯ ತಗಲುತ್ತದೆ ಎಂದು ತಿಂಡಿಯನ್ನು ಬಿಡುವವರೇ ಹೆಚ್ಚು. ಊಟವನ್ನು ಬಿಟ್ಟುಬಿಡುವುದು, ವಿಶೇಷವಾಗಿ ಉಪಹಾರ, ನಿಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಬೇಕಾಗುವ ಪದಾರ್ಥಗಳು: ಸಣ್ಣ ಆಯತಗಳಾಗಿ ಕತ್ತರಿಸಿದ 4 ಬ್ರೆಡ್ ಸ್ಲೈಸ್‌ಗಳು 2 ಚಮಚ ಎಣ್ಣೆ ಸಣ್ಣಗೆ ಕತ್ತರಿಸಿದ 1 ಈರುಳ್ಳಿ 1/4 ಕಪ್ ಕತ್ತರಿಸಿದ ಬೀನ್ಸ್ ಕತ್ತರಿಸಿದ 1/4 ಕಪ್ ಕ್ಯಾರೆಟ್ 1/4 ಕಪ್ ಹಸಿರು ಬಟಾಣಿ ರುಚಿಗೆ ತಕ್ಕಷ್ಟು ಉಪ್ಪು 1 ಹಸಿರು ಮೆಣಸಿನಕಾಯಿ 1/4 ಚಮಚ ಅರಿಶಿನ ಪುಡಿ 9 -10 ಕರಿಬೇವಿನ ಎಲೆಗಳು 1/4 ಕಪ್ ಹುರಿದ ಕಡಲೆಕಾಯಿ 1 ನಿಂಬೆ

ಮಾಡುವ ವಿಧಾನ: 1. ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಿ, ನಂತರ ಈರುಳ್ಳಿ, ಕರಿಬೇವಿನ ಎಲೆಗಳು ಮತ್ತು ಹಸಿರು ಮೆಣಸಿನಕಾಯಿಯನ್ನು ಸೇರಿಸಿ. ಒಂದು ನಿಮಿಷ ಹುರಿಯಿರಿ ಮತ್ತು ನಂತರ ಕತ್ತರಿಸಿದ ತರಕಾರಿಗಳನ್ನು ಸೇರಿಸಿ. ಇದನ್ನು 2-3 ನಿಮಿಷ ಬೇಯಲು ಬಿಡಿ.

2.ಉಪ್ಪು ಮತ್ತು ಅರಿಶಿನ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಬ್ರೆಡ್ ತುಂಡುಗಳನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಲಘುವಾಗಿ ಗರಿಗರಿಯಾಗುವವರೆಗೆ 2-3 ನಿಮಿಷಗಳ ಕಾಲ ಫ್ರೈ ಮಾಡಿ.

3. ನಂತರ ಒಲೆಯಿಂದ ಕೆಳಗಿಳಿಸಿ ಮತ್ತು ಹುರಿದ ಬೀಜಗಳನ್ನು ಸೇರಿಸಿ ಮತ್ತು ನಿಂಬೆ ಹಿಂಡಿ. ಬಿಸಿ ಬಿಸಿಯಾದ ಬ್ರೆಡ್ ಉಪ್ಪಿಟ್ಟು ಸವಿಯಲು ಸಿದ್ದ.

ಇದನ್ನು ಓದಿ: ನಿಮ್ಮ ಆರೋಗ್ಯವನ್ನು ಕಾಪಾಡುವ ರಾಗಿಯ ಈ ರೆಸಿಪಿಯನ್ನೊಮ್ಮೆ ಪ್ರಯತ್ನಿಸಿ

ಜೀವನ ಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು