Bread Upma: ಚಳಿಗಾಲದಲ್ಲಿ ತ್ವರಿತ ಮತ್ತು ಸುಲಭವಾಗಿ ಬ್ರೆಡ್ ಉಪ್ಪಿಟ್ಟು ತಯಾರಿಸಿ

ಗಡಿಬಿಡಿ ಜೀವನಕ್ಕೆ ಒಗ್ಗಿಕೊಂಡಿರುವವರಿಗೂ ಈ ರೆಸಿಪಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಯಾಕೆಂದರೆ ಕೇವಲ 15 ನಿಮಿಷಗಳಲ್ಲಿ ತಯಾರಿಸಬಹುದಾಗಿದೆ.

Bread Upma: ಚಳಿಗಾಲದಲ್ಲಿ ತ್ವರಿತ ಮತ್ತು ಸುಲಭವಾಗಿ ಬ್ರೆಡ್ ಉಪ್ಪಿಟ್ಟು ತಯಾರಿಸಿ
Bread UpmaImage Credit source: NDTV FOOD
Follow us
| Updated By: ಅಕ್ಷತಾ ವರ್ಕಾಡಿ

Updated on: Nov 13, 2022 | 4:20 PM

ಚಳಿಗಾಲ ಪ್ರಾರಂಭವಾಯಿತೆಂದರೆ ಸಾಕು ಕಂಬಳಿ ಹೊದ್ದು ಬೆಚ್ಚಗೆ ಮಲಗುವವರೇ ಹೆಚ್ಚು. ಈ ಚಳಿಗಾಲದ ಸಮಯದಲ್ಲಿ ಕೇವಲ 15 ನಿಮಿಷಗಳಲ್ಲಿ ತಯಾರಿಸಬಹುದಾದ ಬ್ರೆಡ್ ಉಪ್ಪಿಟ್ಟು ಬೆಚ್ಚಗೆ ಸವಿಯಿರಿ.

ಗಡಿಬಿಡಿ ಜೀವನಕ್ಕೆ ಒಗ್ಗಿಕೊಂಡಿರುವವರಿಗೂ ಈ ರೆಸಿಪಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಯಾಕೆಂದರೆ ಸಾಕಷ್ಟು ಜನರು ಬೆಳಗ್ಗಿನ ಉಪಹಾರಕ್ಕೆ ಸಾಕಷ್ಟು ಸಮಯ ತಗಲುತ್ತದೆ ಎಂದು ತಿಂಡಿಯನ್ನು ಬಿಡುವವರೇ ಹೆಚ್ಚು. ಊಟವನ್ನು ಬಿಟ್ಟುಬಿಡುವುದು, ವಿಶೇಷವಾಗಿ ಉಪಹಾರ, ನಿಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಬೇಕಾಗುವ ಪದಾರ್ಥಗಳು: ಸಣ್ಣ ಆಯತಗಳಾಗಿ ಕತ್ತರಿಸಿದ 4 ಬ್ರೆಡ್ ಸ್ಲೈಸ್‌ಗಳು 2 ಚಮಚ ಎಣ್ಣೆ ಸಣ್ಣಗೆ ಕತ್ತರಿಸಿದ 1 ಈರುಳ್ಳಿ 1/4 ಕಪ್ ಕತ್ತರಿಸಿದ ಬೀನ್ಸ್ ಕತ್ತರಿಸಿದ 1/4 ಕಪ್ ಕ್ಯಾರೆಟ್ 1/4 ಕಪ್ ಹಸಿರು ಬಟಾಣಿ ರುಚಿಗೆ ತಕ್ಕಷ್ಟು ಉಪ್ಪು 1 ಹಸಿರು ಮೆಣಸಿನಕಾಯಿ 1/4 ಚಮಚ ಅರಿಶಿನ ಪುಡಿ 9 -10 ಕರಿಬೇವಿನ ಎಲೆಗಳು 1/4 ಕಪ್ ಹುರಿದ ಕಡಲೆಕಾಯಿ 1 ನಿಂಬೆ

ಮಾಡುವ ವಿಧಾನ: 1. ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಿ, ನಂತರ ಈರುಳ್ಳಿ, ಕರಿಬೇವಿನ ಎಲೆಗಳು ಮತ್ತು ಹಸಿರು ಮೆಣಸಿನಕಾಯಿಯನ್ನು ಸೇರಿಸಿ. ಒಂದು ನಿಮಿಷ ಹುರಿಯಿರಿ ಮತ್ತು ನಂತರ ಕತ್ತರಿಸಿದ ತರಕಾರಿಗಳನ್ನು ಸೇರಿಸಿ. ಇದನ್ನು 2-3 ನಿಮಿಷ ಬೇಯಲು ಬಿಡಿ.

2.ಉಪ್ಪು ಮತ್ತು ಅರಿಶಿನ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಬ್ರೆಡ್ ತುಂಡುಗಳನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಲಘುವಾಗಿ ಗರಿಗರಿಯಾಗುವವರೆಗೆ 2-3 ನಿಮಿಷಗಳ ಕಾಲ ಫ್ರೈ ಮಾಡಿ.

3. ನಂತರ ಒಲೆಯಿಂದ ಕೆಳಗಿಳಿಸಿ ಮತ್ತು ಹುರಿದ ಬೀಜಗಳನ್ನು ಸೇರಿಸಿ ಮತ್ತು ನಿಂಬೆ ಹಿಂಡಿ. ಬಿಸಿ ಬಿಸಿಯಾದ ಬ್ರೆಡ್ ಉಪ್ಪಿಟ್ಟು ಸವಿಯಲು ಸಿದ್ದ.

ಇದನ್ನು ಓದಿ: ನಿಮ್ಮ ಆರೋಗ್ಯವನ್ನು ಕಾಪಾಡುವ ರಾಗಿಯ ಈ ರೆಸಿಪಿಯನ್ನೊಮ್ಮೆ ಪ್ರಯತ್ನಿಸಿ

ಜೀವನ ಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು