AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Onam Special Recipe: ಓಣಂ ಹಬ್ಬದಂದು ಪ್ರಾಧನ ಪಾಯಸಂ ಮಾಡಿ, ಇಲ್ಲಿದೆ ಸುಲಭ ಪಾಕವಿಧಾನ

ಯಾವುದೇ ಹಬ್ಬವಾದರೂ ಸರಿ, ಹೆಚ್ಚಿನವರು ಹಬ್ಬದ ಊಟವನ್ನು ಸವಿಯಲು ಕಾಯುತ್ತಿರುತ್ತಾರೆ. ಇಂದು ಓಣಂ ಹಬ್ಬ, ಈ ಹಬ್ಬದ ದಿನ ಕೇರಳದಲ್ಲಿನ ಜನರು ತಮ್ಮ ಮನೆಗಳಲ್ಲಿ ಹಲವಾರು ಸಾಂಪ್ರದಾಯಿಕ ಭಕ್ಷ್ಯಗಳನ್ನು ತಯಾರಿಸುತ್ತಾರೆ. ಅದರಲ್ಲಿ ಪ್ರಾಧನ ಪಾಯಸಂ (ಅದಾ ಪ್ರಧಾನನ್) ಕೂಡಾ ಒಂದು. ನೀವು ಕೂಡಾ ಈ ದಿನ ಏನಾದರೂ ಸಿಹಿ ಅಡುಗೆ ಮಾಡಬೇಕೆಂದು ಬಯಸುತ್ತಿರಾ. ಹಾಗಿದ್ದರೆ ಬಹಳ ಸುಲಭವಾಗಿ ತಯಾರಿಸಬಹುದಾದ ಪ್ರಾಧನ ಪಾಯಸಂ ಮಾಡಿ. ಈ ಒಂದು ವಿಶೇಷ ರೆಸಿಪಿಯ ಪಾಕವಿಧಾನದ ಮಾಹಿತಿ ಇಲ್ಲಿದೆ.

Onam Special Recipe: ಓಣಂ ಹಬ್ಬದಂದು ಪ್ರಾಧನ ಪಾಯಸಂ ಮಾಡಿ, ಇಲ್ಲಿದೆ ಸುಲಭ ಪಾಕವಿಧಾನ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Aug 29, 2023 | 2:56 PM

Share

ನಮ್ಮ ಕರ್ನಾಟಕದಲ್ಲಿ ನವರಾತ್ರಿ ಹಬ್ಬ, ದೀಪಾವಳಿ ಹಬ್ಬವನ್ನು ಬಹಳ ವಿಜೃಂಭನೆಯಿಂದ ಆಚರಿಸುವ ಹಾಗೆ ಕೇರಳದಲ್ಲಿ ಓಣಂ (Onam) ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಹಬ್ಬದ ದಿನ ಹಲವಾರು ಸಂಪ್ರದಾಯಿಯ ಆಚರಣೆಗಳನ್ನು ಆಚರಿಸುವ ಪದ್ಧತಿ ರೂಡಿಯಲ್ಲಿದೆ. ಅದರಲ್ಲೂ ಈ ದಿನ ವಿಶೇಷ ಜನರು ತಮ್ಮ ಮನೆಗಳಲ್ಲಿ ಹಲವಾರು ಬಗೆಯ ಸಾಂಪ್ರದಾಯಿಕ ಭಕ್ಷ್ಯಗಳನ್ನು ತಯಾರಿಸುತ್ತಾರೆ. ಯಾವುದೇ ಹಬ್ಬವಾದರೂ ಸರಿ, ನಾವು ಆ ದಿನ ಮನೆಯಲ್ಲಿ ಹತ್ತು ಹಲವು ಬಗೆಯ ಖಾದ್ಯಗಳ ಜೊತೆಗೆ ಒಂದು ಸಿಹಿಯನ್ನು ತಯಾರಿಸುತ್ತೇವೆ. ಅದೇ ರೀತಿ ಓಣಂ ಹಬ್ಬದಲ್ಲಿ ‘ಪ್ರಧಾನ ಪಾಯಸಂ’(ಅದಾ ಪ್ರಧಾನನ್) ಎಂಬ ಸಿಹಿಯನ್ನು ಮಾಡುತ್ತಾರೆ. ಸುಲಭವಾಗಿ ಮಾಡಬಹುದಾದ ಈ ಒಂದು ಪ್ರಧಾನ ಪಾಯಸಂ ರೆಸಿಪಿಯ ಪಾಕವಿಧಾನ ಇಲ್ಲಿದೆ.

ಅದಾ ಪ್ರಧಾನನ್ ಪಾಯಸ ಮಾಡಲು ಬೇಕಾಗುವ ಸಾಮಗ್ರಿಗಳು:

• 1 ಕಪ್ ಅಕ್ಕಿ

• 2 ಕಪ್ ಬೆಲ್ಲ

• 1 ಕಪ್ ದಪ್ಪ ತೆಂಗಿನಕಾಯಿ ಹಾಲು

• 1 1/2 ಕಪ್ ತೆಳುವಾದ ತೆಂಗಿನಕಾಯಿ ಹಾಲು

• ಗೋಡಂಬಿ

• ಒಣದ್ರಾಕ್ಷಿ

• ಏಲಕ್ಕಿ ಪುಡಿ

• ತುಪ್ಪ

• ಒಣಕೊಬ್ಬರಿ ತುಂಡುಗಳು

ಇದನ್ನೂ ಓದಿ: ಓಣಂ ಹಬ್ಬಕ್ಕೆ ಆರೋಗ್ಯಕರ ತಿಂಡಿ ಅವಿಯಲ್ ಮಾಡುವ ವಿಧಾನ ಹೇಗೆ? ಇಲ್ಲಿದೆ ಪಾಕವಿಧಾನ

ತಯಾರಿಸುವ ವಿಧಾನ:

ಅದಾ ಪ್ರಧಾನನ್ ಪಾಯಸ ಮಾಡಲು ಮೊದಲಿಗೆ ಅಕ್ಕಿಯನ್ನು ತೊಳೆದು 10 ನಿಮಿಷಗಳ ಕಾಲ ನೀರಿನಲ್ಲಿ ಹಾಕಿ ನೆನೆಯಲು ಬಿಡಿ. ಬಳಿಕ ಒಂದು ಕುಕ್ಕರ್​​ನಲ್ಲಿ ಆ ಅಕ್ಕಿಯನ್ನು ಬೇಯಿಸಿಕೊಳ್ಳಿ. ಈಗ ಒಂದು ಬಾಣಲೆಯಲ್ಲಿ ನೀರು ಮತ್ತು ಬೆಲ್ಲವನ್ನು ಹಾಕಿ ಬೆಲ್ಲ ಕರಗುವವರೆಗೆ ಅದನ್ನು ಕುದಿಯಲು ಬಿಡಿ. ಬೆಲ್ಲ ಚೆನ್ನಾಗಿ ಕರಗಿದ ಬಳಿಕ ಅದಕ್ಕೆ ಬೇಯಿಸಿಟ್ಟ ಅಕ್ಕಿ ಮತ್ತು ತುಪ್ಪವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಂಡು ಕಡಿಮೆ ಉರಿಯಲ್ಲಿ ಬೇಯಿಸಿ. ನಂತರ ಈ ಮಿಶ್ರಣಕ್ಕೆ ತೆಳುವಾದ ತೆಂಗಿನ ಹಾಲನ್ನು ಸೇರಿಸಿ ಕಡಿಮೆ ಉರಿಯಲ್ಲಿ ಬೇಯಿಸಿಕೊಳ್ಳಿ. ಈ ಮಧ್ಯೆ ಒಂದು ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ ಅದಕ್ಕೆ ಕತ್ತರಿಸಿದ ಒಣ ಕೊಬ್ಬರಿ ತುಂಡು ಹಾಕಿ ಹುರಿಯಿರಿ. ಅದು ಕಂದು ಬಣ್ಣಕ್ಕೆ ತಿರುಗಲು ಪ್ರಾರಂಭಿಸಿದಾಗ ಅದಕ್ಕೆ ಗೋಡಂಬಿ ಮತ್ತು ಒಣದ್ರಾಕ್ಷಿಯನ್ನು ಸೇರಿಸಿ ಹುರಿಯಿರಿ ನಂತರ ಅದನ್ನು ಪಕ್ಕಕ್ಕೆ ಇಟ್ಟು ಬಿಡಿ. ಈಗ ತಯಾರಾಗುತ್ತಿರುವ ಪಾಯಸಕ್ಕೆ ದಪ್ಪ ತೆಂಗಿನ ಹಾಲನ್ನು ಸೇರಿಸಿ ಬೇಯಿಸಿಕೊಳ್ಳಿ. ಈ ಮಿಶ್ರಣ ದಪ್ಪ ಪಾಯಸದ ಹದಕ್ಕೆ ಬಂದ ನಂತರ ಗ್ಯಾಸ್ ಸ್ಟವ್ ಆಫ್ ಮಾಡಿ, ಅದಕ್ಕೆ ಹುರಿದಿಟ್ಟ ಕೊಬ್ಬರಿ ತುಂಡು, ಒಣದ್ರಾಕ್ಷಿ ಮತ್ತು ಗೋಡಂಬಿ ಹಾಗೂ ಏಲಕ್ಕಿ ಪುಡಿಯನ್ನು ಸೇರಿಸಿ ಮಿಶ್ರಣ ಮಾಡಿಕೊಂಡರೆ ಪ್ರಾಧನ ಪಾಯಸಂ ಸವಿಯಲು ಸಿದ್ಧ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!