AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon Recipe: ಮಳೆಗಾಲಕ್ಕೆ ಹೇಳಿ ಮಾಡಿಸಿದ ಘರಂ ಕಾಳುಮೆಣಸಿನ ಸಾರು; ರೆಸಿಪಿ ಇಲ್ಲಿದೆ

ಕೇವಲ 5 ನಿಮಿಷಗಳಲ್ಲಿ ಕಡಿಮೆ ಪದಾರ್ಥಗಳೊಂದಿಗೆ ನೀವು ಈ ರುಚಿಕರ ಹಾಗೂ ಆರೋಗ್ಯಕರ ಘರಂ ಕಾಳುಮೆಣಸಿನ ಸಾರನ್ನು ತಯಾರಿಸಬಹುದು. ಪಾಕ ವಿಧಾನ ಇಲ್ಲಿದೆ.

Monsoon Recipe: ಮಳೆಗಾಲಕ್ಕೆ ಹೇಳಿ ಮಾಡಿಸಿದ ಘರಂ ಕಾಳುಮೆಣಸಿನ ಸಾರು; ರೆಸಿಪಿ ಇಲ್ಲಿದೆ
ಕಾಳುಮೆಣಸಿನ ಸಾರುImage Credit source: instagram/Bhat‘n'Bhat
ಅಕ್ಷತಾ ವರ್ಕಾಡಿ
|

Updated on: Jul 25, 2023 | 6:08 PM

Share

ಮಳೆಗಾಲ ಪ್ರಾರಂಭವಾಯಿತೆಂದರೆ  ಸಾಕು, ಜೊತೆಗೆ ಶೀತ, ಕೆಮ್ಮು, ನೆಗಡಿ ಮುಂತಾದ ಸಾಕಷ್ಟು ಸೋಂಕುಗಳು ಬಂದು ಬಿಡುತ್ತದೆ. ಆದ್ದರಿಂದ ಮಳೆಗಾಲದಲ್ಲಿ ಈ ಎಲ್ಲಾ ಸಮಸ್ಯೆಗಳಿಂದ ನಿಮ್ಮನ್ನು ಕಾಪಾಡಲು ಮನೆಯಲ್ಲಿಯೇ ರುಚಿಕರ ಕಾಳುಮೆಣಸಿನ ಸಾರು ತಯಾರಿಸಿ. ಕೇವಲ 5 ನಿಮಿಷಗಳಲ್ಲಿ ಕಡಿಮೆ ಪದಾರ್ಥಗಳೊಂದಿಗೆ ನೀವು ಈ ರುಚಿಕರ ಹಾಗೂ ಆರೋಗ್ಯಕರ ಘರಂ ಕಾಳುಮೆಣಸಿನ ಸಾರನ್ನು ತಯಾರಿಸಬಹುದು. ಯಾವ ರೀತಿ ತಯಾರಿಸುವುದು ಎಂಬುದರ ಕುರಿತು ಭಟ್​​ ಆ್ಯಂಡ್​​​ ಭಟ್​​​ ಇನ್ಟ್ಸಾಗ್ರಾಮ್​​​ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗಿದೆ. ಕೇವಲ 5 ನಿಮಿಷಗಳಲ್ಲಿ ಈ ಆರೋಗ್ಯಕರ ಸಾರು ತಯಾರಿಸಿ. ಬಿಸಿ ಬಿಸಿ ಅನ್ನದೊಂದಿಗೆ ಸವಿಯಿರಿ.

ಘರಂ ಕಾಳುಮೆಣಸಿನ ಸಾರು:

ಬೇಕಾಗುವ ಪದಾರ್ಥಗಳು:

  • ಕಾಳು ಮೆಣಸು
  • ಜೀರಿಗೆ
  • ಉಪ್ಪು
  • ಬೆಲ್ಲ
  • ಹುಳಿ
  • ಸಾಸಿವೆ
  • ಒಗ್ಗರಣೆ ಸೊಪ್ಪು(ಕರಿಬೇವು)

ಇದನ್ನೂ ಓದಿ: ಮಕ್ಕಳಿಗೆ ಮಾತ್ರವಲ್ಲ ಹಿರಿಯರ ಬಾಯಲ್ಲೂ ನೀರು ಬರಿಸುತ್ತದೆ ಈ ಲೌಕಿ ಚಿಲ್ಲಾ! ಮಾಡುವ ವಿಧಾನ ಇಲ್ಲಿದೆ

ಘರಂ ಕಾಳುಮೆಣಸಿನ ಸಾರು ಮಾಡುವ ವಿಧಾನ:

  • ಮೊದಲಿಗೆ ಕಾಳುಮೆಣಸು, ಜೀರಿಗೆಯಲ್ಲಿ ಬೇರೆ ಬೇರೆಯಾಗಿ ಹುರಿದುಕೊಳ್ಳಿ. ಇದಾದ ಬಳಿಕ ಇವೆರಡನ್ನು ಕುಟ್ಟಾನಿಯಲ್ಲಿ ಹಾಕಿ ಚೆನ್ನಾಗಿ ಪುಡಿ ಮಾಡಿ.
  • ನಂತರ ಒಂದು ಪಾತ್ರೆಯಲ್ಲಿ ಸಾರಿಗೆ ಬೇಕಾದಷ್ಟು ನೀರು ಹಾಕಿ, ನೀರನ್ನು ಕುದಿಯಲು ಬಿಡಿ. ನೀರು ಕುದಿ ಬರುತ್ತಿದ್ದಂತೆ ಅದಕ್ಕೆ ರುಚಿಗೆ ಬೇಕಾದಷ್ಟು ಉಪ್ಪು, ಹುಳಿ, ಬೆಲ್ಲ ಸೇರಿಸಿ. ನಂತರ ಈಗಾಗಲೇ ಪುಡಿ ಮಾಡಿ ಇಟ್ಟ ಕಾಳುಮೆಣಸು, ಜೀರಿಗೆಯ ಪುಡಿಯನ್ನು ಹಾಕಿ. ಇವೆಲ್ಲವನ್ನು ಚೆನ್ನಾಗಿ ಮಿಶ್ರಣ ಮಾಡಿ. 5 ನಿಮಿಷಗಳ ಕಾಲ ಚೆನ್ನಾಗಿ ಕುದಿಯಲು ಬಿಡಿ.
  • ಇದೀಗಾ ಘರಂ ಕಾಳುಮೆಣಸಿನ ಸಾರು ರೆಡಿಯಾಗಿದೆ. ಕೊನೆಯಲ್ಲಿ ಇದಕ್ಕೆ ಸಾಸಿವೆ, ಒಣ ಮೆಣಸು ಹಾಗೂ ಕರಿಬೇವು ಎಲೆಗಳ ಒಗ್ಗರಣೆ ಹಾಕಿ.

ಮಳೆಗಾಲದಲ್ಲಿ ಬಿಸಿ ಬಿಸಿ ಅನ್ನದೊಂದಿಗೆ ಹೇಳಿ ಮಾಡಿಸಿದ ಜೋಡಿ. ರುಚಿಯ ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಈ ಘರಂ ಕಾಳುಮೆಣಸಿನ ಸಾರನ್ನು ನೀವು ನಿಮ್ಮ ಮನೆಯಲ್ಲಿ ಪ್ರಯತ್ನಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್