AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2023: ಶ್ರೀ ಕೃಷ್ಣನಿಗೆ ಪ್ರಿಯವಾದ ಬಿಳಿ ಬೆಣ್ಣೆಯನ್ನು ಮನೆಯಲ್ಲಿಯೇ ತಯಾರಿಸುವುದು ಹೇಗೆ? ಪಾಕವಿಧಾನ ಇಲ್ಲಿದೆ

ಶ್ರೀ ಕೃಷ್ಣನಿಗೆ ಬಿಳಿ ಬೆಣ್ಣೆಯು ಅತ್ಯಂತ ಪ್ರಿಯವಾದದ್ದು, ಈ ಕಾರಣದಿಂದಲೇ ಕೃಷ್ಣ ಜನ್ಮಾಷ್ಟಮಿಯ ದಿನದಂದು ಭಕ್ತರು ಬೆಣ್ಣೆಯ ಜೊತೆಗೆ ಕೃಷ್ಣನಿಗೆ ಪ್ರಿಯವಾದ ಖಾದ್ಯಗಳನ್ನು ಮನೆಯಲ್ಲಿಯೇ ತಯಾರಿಸಿ ಅದನ್ನು ಗೋಪಾಲನಿಗೆ ನೈವೇದ್ಯ ರೂಪದಲ್ಲಿ ಅರ್ಪಿಸುತ್ತಾರೆ. ಅನೇಕರಿಗೆ ಬಿಳಿ ಬೆಣ್ಣೆಯನ್ನು ಹೇಗೆ ತಯಾರಿಸಬೇಕೆಂದು ತಿಳಿದಿಲ್ಲ. ಆದರೆ ಇದನ್ನು ಸುಲಭವಾಗಿ ಮಾಡಬಹುದು. ನೀವು ಕೂಡಾ ಮನೆಯಲ್ಲಿ ಬೆಣ್ಣೆ ತಯಾರಿಸಿ ದೇವರಿಗೆ ಅರ್ಪಿಸಲು ಬಯಸುತ್ತೀರಾ, ಇಲ್ಲಿದೆ ಬೆಣ್ಣೆ ತೆಗೆಯುವ ಸುಲಭ ವಿಧಾನ.

Krishna Janmashtami 2023: ಶ್ರೀ ಕೃಷ್ಣನಿಗೆ ಪ್ರಿಯವಾದ ಬಿಳಿ ಬೆಣ್ಣೆಯನ್ನು ಮನೆಯಲ್ಲಿಯೇ ತಯಾರಿಸುವುದು ಹೇಗೆ? ಪಾಕವಿಧಾನ ಇಲ್ಲಿದೆ
Sri Krishna's Favorite white butter Image Credit source: Pinterest
ಮಾಲಾಶ್ರೀ ಅಂಚನ್​
| Edited By: |

Updated on: Sep 02, 2023 | 6:39 PM

Share

ಇನ್ನೇನು ಜನ್ಮಾಷ್ಟಮಿ ಹಬ್ಬ ಬಂದೇ ಬಿಟ್ಟಿತ್ತು. ಭಾದ್ರಪದ ಮಾಸದ ಅಷ್ಟಮಿಯ ದಿನದಂದು ಜನ್ಮಾಷ್ಟಮಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ದಿನ ಭಕ್ತರು ತಮ್ಮ ಮನೆಯಲ್ಲಿ ಕೃಷ್ಣನಿಗೆ ಪ್ರಿಯವಾದ ಖಾದ್ಯಗಳನ್ನು ತಯಾರಿಸಿ ಅದನ್ನು ನೈವೇದ್ಯ ರೂಪದಲ್ಲಿ ಅರ್ಪಿಸುತ್ತಾರೆ. ಶ್ರೀ ಕೃಷ್ಣನಿಗೆ ಪ್ರಿಯವಾದ ವಸ್ತುಗಳು ಎಂದಾಕ್ಷಣ ನೆನಪಿಗೆ ಬರುವಂತಹದ್ದೇ ಬೆಣ್ಣೆ. ಆದರೆ ಅನೇಕರಿಗೆ ಬಿಳಿ ಬೆಣ್ಣೆಯನ್ನು ಹೇಗೆ ತಯಾರಿಸಬೇಕೆಂದು ತಿಳಿದಿಲ್ಲ. ಅದಕ್ಕಾಗಿಯೇ ಈ ದಿನ ಬೆಣ್ಣೆಯನ್ನು ಮಾರುಕಟ್ಟೆಯಿಂದ ಖರೀದಿ ಮಾಡುತ್ತಾರೆ. ಆದರೆ ಬೆಣ್ಣೆಯನ್ನು ಸುಲಭವಾಗಿ ತಯಾರಿಸಬಹುದು. ನೀವು ಕೂಡಾ ಮನೆಯಲ್ಲಿ ಶುದ್ಧ ಬೆಣ್ಣೆ ತಯಾರಿಸಿ ದೇವರಿಗೆ ನೈವೇದ್ಯ ರೂಪದಲ್ಲಿ ಅರ್ಪಿಸಲು ಬಯಸುತ್ತೀರಾ, ಇಲ್ಲಿದೆ ಬೆಣ್ಣೆ ತೆಗೆಯುವ ಸುಲಭ ವಿಧಾನ.

ಬಿಳಿ ಬೆಣ್ಣೆ ತಯಾರಿಸುವುದು ಹೇಗೆ?

ನೀವು ಐದಾರು ದಿನಗಳ ಮುಂಚೆಯೇ ಪ್ರತಿದಿನ ಹಾಲು ಕುದಿಸಿ ನಂತರ ಅದರ ಮೇಲೆ ಹೊಂದಿಕೊಳ್ಳುವ ಕೆನೆಗಳನ್ನು ಒಂದು ಪಾತ್ರೆಯಲ್ಲಿ ಸಂಗ್ರಹಿಸಿಟ್ಟು ಅದನ್ನು ರೆಫ್ರಿಜರೇಟರ್ನಲ್ಲಿಡಿ. ನೀವು ಬೆಣ್ಣೆ ಮಾಡಲು ಬಯಸುವ ದಿನ ರೆಫ್ರಿಜರೇಟರ್ ನಲ್ಲಿ ಇರಿಸಲಾದ ಕೆನೆಯನ್ನು ಹೊರತೆಗೆದು, ಕೋಣೆಯ ಉಷ್ಣಾಂಶಕ್ಕೆ ಬರುವವರೆಗೆ ಅದನ್ನು ಹಾಗೇನೆ ಇಡಿ. ಈಗ ಒಂದು ಮಿಕ್ಸಿ ಜಾರ್ ತೆಗೆದುಕೊಂಡು ಅದಕ್ಕೆ ಸಂಗ್ರಹಿಸಿಟ್ಟ ಹಾಲಿನ ಕೆನೆ ಮತ್ತು ಸ್ಪಲ್ಪ ನೀರನ್ನು ಸೇರಿಸಿ ಚೆನ್ನಾಗಿ ಬ್ಲೆಂಡ್ ಮಾಡಿ. (ನೀವು ಕಡುಗೋಲು ಬಳಸಿ ಕೈಯಲ್ಲಿಯೇ ಬೆಣ್ಣೆಯನ್ನು ಕಡೆಯಬಹುದು) ಈಗ ಮತ್ತೊಮ್ಮೆ ಸ್ವಲ್ಪ ನೀರು ಸೇರಿಸಿ ಇನ್ನೊಂದು ಬಾರಿ ಬ್ಲೆಂಡ್ ಮಾಡಿ. ಆಗ ಬೆಣ್ಣೆಯು ಮೇಲ್ಭಾಗದಲ್ಲಿ ಹೊಂದಿಕೊಳ್ಳಲು ಪ್ರಾರಂಭವಾಗುತ್ತದೆ. ಈಗ ಸಂಪೂರ್ಣವಾಗಿ ಬೆಣ್ಣೆ ತಯಾರಾಗಿದೆ. ಹೀಗೆ ತಯಾರಾದ ಬೆಣ್ಣೆಯನ್ನು ಪುಟಾಣಿ ಮಣ್ಣಿನ ಮಡಕೆಯಲ್ಲಿಟ್ಟು ಗೋಕುಲಾಷ್ಟಮಿಯ ದಿನ ಶ್ರೀ ಕೃಷ್ಣನಿಗೆ ನೈವೇದ್ಯ ರೂಪದಲ್ಲಿ ಅರ್ಪಿಸಿ.

ಇದನ್ನೂ ಓದಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಪೂಜಾ ವಿಧಿ ವಿಧಾನಗಳ ಬಗ್ಗೆ ತಿಳಿದಿದೆಯಾ? ಸಂಪೂರ್ಣ ಮಾಹಿತಿ ಇಲ್ಲಿದೆ

ಬಿಳಿ ಬೆಣ್ಣೆಯ ಆರೋಗ್ಯ ಪ್ರಯೋಜನಗಳು:

ಕೃಷ್ಣನಿಗೆ ಪ್ರಿಯವಾದ ಬಿಳಿ ಬೆಣ್ಣೆಯು ಹಲವಾರು ಆರೋಗ್ಯ ಪ್ರಯೋಜನಗಳನ್ನು ಕೂಡಾ ಹೊಂದಿದೆ. ಈ ಬೆಣ್ಣೆಯು ಮಾರುಕಟ್ಟೆಯಲ್ಲಿ ಲಭ್ಯವಿರುವ ಹಳದಿ ಬೆಣ್ಣೆಗಿಂತ ಆರೋಗ್ಯಕರವಾಗಿದೆ. ಹಳದಿ ಬೆಣ್ಣೆಯಲ್ಲಿ ಕೊಬ್ಬಿನಾಂಶ ಹೆಚ್ಚಿರುತ್ತದೆ. ಬಿಳಿ ಬೆಣ್ಣೆಯನ್ನು ತಾಜಾ ಹಾಲಿ ಕೆನೆ ಮಂಥನದಿಂದ ತಯಾರಿಸಲಾಗುತ್ತದೆ ಮತ್ತು ಇದು ನೈಸರ್ಗಿಕ ಹಾಗೂ ಸಂಸ್ಕರಿಸದ ಕಾರಣ ಹಳದಿ ಬೆಣ್ಣೆಗಿಂತ ಹೆಚ್ಚು ಪೌಷ್ಟಿಕವಾಗಿದೆ.

  • ಬಿಳಿ ಬೆಣ್ಣೆಯು ಗಂಟಲಿನ ಊತವನ್ನು ಕಡಿಮೆ ಮಾಡುತ್ತದೆ.
  • ಹೃದಯದ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ.
  • ಕೀಲು ನೋವನ್ನು ನಿವಾರಿಸುತ್ತದೆ.
  • ತೂಕ ನಿಯಂತ್ರಣಕ್ಕೆ ಸಹಕಾರಿ.
  • ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ.
  • ಚರ್ಮದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
  • ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
  • ಮಕ್ಕಳ ಮೆದುಳು ಮತ್ತು ನರಮಂಡಲದ ಬೆಳವಣಿಗೆಗೆ ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!