AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naga Panchami 2024: ನಾಗರ ಪಂಚಮಿಗೆ ಉತ್ತರ ಕರ್ನಾಟಕ ಸಾಂಪ್ರದಾಯಿಕ ಸಿಹಿ ತಿನಿಸು ಅಳ್ಳಿಟ್ಟು ಉಂಡೆ, ಮಾಡೋದು ಹೇಗೆ?

ನಾಗರ ಪಂಚಮಿ ಹಬ್ಬದಿಂದ ಸಾಲು ಸಾಲು ಹಬ್ಬಗಳದ್ದೇ ಸಂಭ್ರಮವು ಆರಂಭವಾಗುತ್ತದೆ. ಈ ಹಬ್ಬಗಳಂದು ಮಾಡುವ ಅಡುಗೆಯೂ ಬಹಳ ವಿಶೇಷವಾಗಿದೆ. ಈ ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ಹಬ್ಬಕ್ಕೆ ಅಳ್ಳಿಟ್ಟು ಬಹಳ ಜನಪ್ರಿಯ. ಈ ರೆಸಿಪಿಯೂ ಇಲ್ಲದೇ ನಾಗರಪಂಚಮಿ ಹಬ್ಬವು ಪೂರ್ಣವಾಗುವುದೇ ಇಲ್ಲ. ಹಾಗಾದ್ರೆ ಈ ರೆಸಿಪಿಯನ್ನು ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Naga Panchami 2024: ನಾಗರ ಪಂಚಮಿಗೆ ಉತ್ತರ ಕರ್ನಾಟಕ ಸಾಂಪ್ರದಾಯಿಕ ಸಿಹಿ ತಿನಿಸು ಅಳ್ಳಿಟ್ಟು ಉಂಡೆ, ಮಾಡೋದು ಹೇಗೆ?
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Aug 05, 2024 | 6:11 PM

Share

ಶ್ರಾವಣ ಮಾಸ ಆರಂಭವಾಗುತ್ತಿದಂತೆ ಕರ್ನಾಟಕದಲ್ಲಿ ಹಬ್ಬಗಳ ಸಂಭ್ರಮವು ಮನೆ ಮಾಡುತ್ತದೆ. ಒಂದರ ಹಿಂದೆ ಒಂದರಂತೆ ಹಬ್ಬಗಳದ್ದೇ ಸಾಲು. ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ಒಂದೊಂದು ಭಾಗದಲ್ಲಿ ಒಂದೊಂದು ರೀತಿಯಲ್ಲಿ ಆಚರಿಸಲಾಗುತ್ತದೆ. ಈ ಬಾರಿ ನಾಗರ ಪಂಚಮಿ ಹಬ್ಬವನ್ನು ಆಗಸ್ಟ್ 9 ರಂದು ಆಚರಿಸಲಾಗುತ್ತಿದೆ. ಈ ದಿನದಂದು ಸಾಂಪ್ರದಾಯಿಕ ತಿಂಡಿ ತಿನಿಸುಗಳಾದ ಕಡುಬು,ಲಡ್ಡು, ಪಂಚಕಜ್ಜಾಯ ಹೀಗೆ ಅನೇಕ ಬಗೆಯ ಅಡುಗೆಯನ್ನು ಮಾಡಿ ದೇವರಿಗೆ ನೈವೇದ್ಯವಾಗಿ ಅರ್ಪಿಸಲಾಗುತ್ತದೆ. ಅದರಲ್ಲಿಯೂ ಉತ್ತರ ಕರ್ನಾಟಕದ ಭಾಗದಲ್ಲಿ ಅಳ್ಳಿಟ್ಟು ಉಂಡೆ ಸಿಕ್ಕಾಪಟ್ಟೆ ಜನಪ್ರಿಯವಾಗಿದ್ದು, ಮಾಡಲು ಸುಲಭ ಮಾತ್ರವಲ್ಲ ರುಚಿಕರವು ಆಗಿದೆ.

ಅಳ್ಳಿಟ್ಟು ಮಾಡಲು ಬೇಕಾಗುವ ಸಾಮಗ್ರಿಗಳು

* ಒಂದು ಕಪ್ ಜೋಳದ ಅರಳು

* ಒಂದು ಕಪ್ ಗೋದಿ ಹಿಟ್ಟು

* ಒಂದು ಕಪ್ ಬೆಲ್ಲದ ಪುಡಿ

* ಮೂರ್ನಾಲ್ಕು ಚಮಚ ತುಪ್ಪ

* ಒಂದು ಚಮಚ ಅಕ್ಕಿ

* ಅರ್ಧ ಚಮಚ ಗಸಗಸೆ

* ಏಲಕ್ಕಿ

* ಲವಂಗ

* ಜಾಯಿಕಾಯಿ ಪುಡಿ

* ನೀರು

ಅಳ್ಳಿಟ್ಟು ಮಾಡುವ ವಿಧಾನ

* ಮೊದಲಿಗೆ ಒಂದು ಚಮಚದಷ್ಟು ಅಕ್ಕಿಯನ್ನು ಹುರಿದುಕೊಂಡು ತಣ್ಣಗಾಗಲು ಬಿಡಿ.

* ಆ ಬಳಿಕ ಜೋಳದ ಅರಳು, ಹುರಿದಿಟ್ಟ ಅಕ್ಕಿ ಸೇರಿಸಿ ಮಿಕ್ಸಿ ಜಾರಿಗೆ ಹಾಕಿ ಚೆನ್ನಾಗಿ ಪುಡಿ ಮಾಡಿ.

* ಈ ಮಿಶ್ರಣಕ್ಕೆ ಗೋಧಿ ಹಿಟ್ಟು, ತುಪ್ಪ ಸೇರಿಸಿ ಚೆನ್ನಾಗಿ ಹುರಿದುಕೊಳ್ಳಿ.

* ಇನ್ನೊಂದು ಪಾತ್ರೆಯಲ್ಲಿ ನೀರು ಕಾಯಿಸಿ, ಅದಕ್ಕೆ ಪುಡಿ ಮಾಡಿದ ಬೆಲ್ಲ ಹಾಕಿ ಚೆನ್ನಾಗಿ ಕರಗಿಸಿ.

* ಈಗಾಗಲೇ ಪುಡಿ ಮಾಡಿದ ಹುರಿದ ಅರಳು, ಗೋಧಿ ಹಾಗೂ ಅಕ್ಕಿ ಹಿಟ್ಟಿನ ಮಿಶ್ರಣ ಹಾಕಿ ಕೈಯಾಡಸುತ್ತ ಇರಿ. ತಳ ಬಿಡುತ್ತಿದ್ದಂತೆ ಸ್ಟೌವ್ ಆಫ್ ಮಾಡಿ.

* ಇನ್ನೊಂದು ಕಡೆ ಏಲಕ್ಕಿ, ಲವಂಗ ಮತ್ತು ಗಸಗಸೆ, ಜಾಯಿಕಾಯಿ ಎಲ್ಲ ಸೇರಿಸಿ ಪುಡಿ ಮಾಡಿಕೊಳ್ಳಿ.

* ಈ ಮಿಶ್ರಣಕ್ಕೆ ಈ ಪುಡಿ ಮಾಡಿರುವುದನ್ನು ಸೇರಿಸಿ ಕೈಗೆ ತುಪ್ಪ ಸವರಿಕೊಂಡು ಉಂಡೆಗಳಾಗಿ ಕಟ್ಟಿದರೆ ಸಿಹಿಯಾದ ಅಳ್ಳಿಟ್ಟು ಸವಿಯಲು ಸಿದ್ಧ.

ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ