AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Hacks: ಬೇಸಿಗೆಯಲ್ಲಿ ಶುಂಠಿ-ಬೆಳ್ಳುಳ್ಳಿ ಹೆಚ್ಚು ದಿನಗಳವರೆಗೆ ಸಂಗ್ರಹಿಸಿಡಲು ಈ ಸಲಹೆಗಳನ್ನು ಅನುಸರಿಸಿ ಸಾಕು!

ಶುಂಠಿಯನ್ನು ಕತ್ತರಿಸಿ ಅಥವಾ ಸಿಪ್ಪೆ ಸುಲಿದು ಬಳಸುವುದು ಬೇಡಾ, ಹಾಗೆಯೇ ಇಡಿಯಾಗಿರಲಿ ಎಂದುಕೊಳ್ಳುವುದಿದ್ದರೆ, ಶುಂಠಿ ವ್ಯರ್ಥವಾಗುವುದನ್ನು ತಡೆಯಲು ಶುಂಠಿಯನ್ನು ಪ್ಲಾಸ್ಟಿಕ್ ಕವರ್​​ನಲ್ಲಿ ಸುತ್ತಿ ಫ್ರಿಡ್ಜ್ ನಲ್ಲಿಡಿ.

Kitchen Hacks: ಬೇಸಿಗೆಯಲ್ಲಿ ಶುಂಠಿ-ಬೆಳ್ಳುಳ್ಳಿ ಹೆಚ್ಚು ದಿನಗಳವರೆಗೆ ಸಂಗ್ರಹಿಸಿಡಲು ಈ ಸಲಹೆಗಳನ್ನು ಅನುಸರಿಸಿ ಸಾಕು!
ಬೇಸಿಗೆಯಲ್ಲಿ ಶುಂಠಿ-ಬೆಳ್ಳುಳ್ಳಿ ಹೆಚ್ಚು ದಿನಗಳವರೆಗೆ ಸಂಗ್ರಹಿಸಿಡಲು ಸಲಹೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 24, 2023 | 11:23 AM

Share

ಭಾರತೀಯ ಅಡುಗೆ ಮನೆಯಲ್ಲಿ ಶುಂಠಿ-ಬೆಳ್ಳುಳ್ಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ, ಶುಂಠಿ-ಬೆಳ್ಳುಳ್ಳಿ ಇಲ್ಲದ ಭಾರತೀಯ ತಿನಿಸು ಇಲ್ಲ. ಇದನ್ನು ಬಹುತೇಕ ಅಡುಗೆಗಳಲ್ಲಿ ಬಳಸಲಾಗುತ್ತದೆ. ಮಾಂಸದಲ್ಲಿ ಶುಂಠಿ (ginger) ಮತ್ತು ಬೆಳ್ಳುಳ್ಳಿ (garlic) ಇಲ್ಲದಿದ್ದರೆ ರುಚಿ ಇರುವುದಿಲ್ಲ. ಶುಂಠಿ ಮತ್ತು ಬೆಳ್ಳುಳ್ಳಿ ಇಲ್ಲದ ಭಕ್ಷ್ಯಗಳನ್ನು ನಿಜವಾಗಿಯೂ ಊಹಿಸಲು ಸಾಧ್ಯವಿಲ್ಲ. ಸಾಮಾನ್ಯವಾಗಿ ಶುಂಠಿ ಬೆಳ್ಳುಳ್ಳಿಯನ್ನು ಕೆಲವು ಪಾಕ ವಿಧಾನಗಳಲ್ಲಿ ಊಟದಿಂದ ರಾತ್ರಿಯ ಊಟದವರೆಗೆ ಬಳಸಲಾಗುತ್ತದೆ. ಇವೆರಡೂ ಆರೋಗ್ಯಕ್ಕೆ ಒಳ್ಳೆಯದು. ಅವುಗಳ ಸೇವನೆಯು ಆರೋಗ್ಯದ (health) ಮೇಲೆ ಸಕಾರಾತ್ಮಕ ಪರಿಣಾಮ ಬೀರುವುದಲ್ಲದೆ, ಆಹಾರದ ರುಚಿಯನ್ನು ಹೆಚ್ಚಿಸುತ್ತದೆ (Kitchen Hacks). ಆದರೆ ಹೆಚ್ಚಿನ ಒಣ ಹವೆ, ಶಾಖವು ಶುಂಠಿ ಬೆಳ್ಳುಳ್ಳಿ ಹಾಳಾಗಲು ಅಥವಾ ಒಣಗಲು ಕಾರಣವಾಗಬಹುದು. ಇಂತಹ ಸಂದರ್ಭಗಳಲ್ಲಿ ಮಹಿಳೆಯರು ಅದನ್ನು ಮತ್ತೆ ಮತ್ತೆ ಖರೀದಿ ಮಾಡಿ, ದುಂದುವೆಚ್ಚ ಮಾಡುವುದನ್ನು ತಪ್ಪಿಸಲು ಶುಂಠಿ, ಬೆಳ್ಳುಳ್ಳಿಯನ್ನು ಎಷ್ಟು ಬೇಕೋ ಅಷ್ಟು ಖರೀದಿಸಬೇಕಾಗುತ್ತದೆ. ಮತ್ತೊಂದೆಡೆ, ನೀವು ಬಹಳಷ್ಟು ಶುಂಠಿ ಬೆಳ್ಳುಳ್ಳಿಯನ್ನು ಸಂಗ್ರಹಿಸುತ್ತಿದ್ದರೆ (preservation), ಅದನ್ನು ಕೆಡದಂತೆ ಹೆಚ್ಚು ಕಾಲ ಸಂಗ್ರಹಿಸಬಹುದು ಎಂದು ತಿಳಿದು ತಾಜಾವಾಗಿರಲು ಕೆಲವು ಸಲಹೆಗಳು ಇಲ್ಲಿವೆ. ಬೇಸಿಗೆಯಲ್ಲಿ ಶುಂಠಿ ಬೆಳ್ಳುಳ್ಳಿ ಹಾಳಾಗುವುದನ್ನು ತಪ್ಪಿಸಲು ಕೆಲ ಶೇಖರಣಾ ವಿಧಾನಗಳ ಬಗ್ಗೆ ತಿಳಿಯೋಣ.

– ಸಿಪ್ಪೆ ಸುಲಿದ ಶುಂಠಿಯನ್ನು ಗಾಳಿಯಾಡದ ಚೀಲದಲ್ಲಿ ಇರಿಸಿ ಅಥವಾ ರೆಫ್ರಿಜರೇಟರ್​ನಲ್ಲಿ ಇರಿಸಿ. ಗಾಳಿಯಾಡದ ಚೀಲವು ತೇವಾಂಶ ಮತ್ತು ಆಮ್ಲಜನಕವನ್ನು ಶುಂಠಿಗೆ ಪ್ರವೇಶಿಸುವುದನ್ನು ತಡೆಯುತ್ತದೆ. ಹಾಗಾಗಿ ಶುಂಠಿ ಕೆಡುವುದಿಲ್ಲ. ಬೇಸಿಗೆಯಲ್ಲಿ ಶುಂಠಿಗೆ ಬೂಜು ಬರುವುದುಂಟು. ಹಾಗಾಗಿ ಶುಂಠಿಯನ್ನು ಗಾಳಿಯಾಡದ ಚೀಲದಲ್ಲಿ ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸಿದರೆ ಎರಡು ತಿಂಗಳವರೆಗೆ ಇರುತ್ತದೆ.

– ಶುಂಠಿಯನ್ನು ಕತ್ತರಿಸಿ ಅಥವಾ ಸಿಪ್ಪೆ ಸುಲಿದು ಬಳಸುವುದು ಬೇಡಾ, ಹಾಗೆಯೇ ಇಡಿಯಾಗಿರಲಿ ಎಂದುಕೊಳ್ಳುವುದಿದ್ದರೆ, ಶುಂಠಿ ವ್ಯರ್ಥವಾಗುವುದನ್ನು ತಡೆಯಲು ಶುಂಠಿಯನ್ನು ಪ್ಲಾಸ್ಟಿಕ್ ಕವರ್​​ನಲ್ಲಿ ಸುತ್ತಿ ಫ್ರಿಡ್ಜ್ ನಲ್ಲಿಡಿ. ನೀವು ಕತ್ತರಿಸಿದ ಶುಂಠಿಯನ್ನು ಗಾಳಿಯಾಡದ ಕಂಟೇನರ್‌ನಲ್ಲಿ ಫ್ರಿಜ್‌ನಲ್ಲಿ ಸಂಗ್ರಹಿಸಬಹುದು. ಶುಂಠಿಯನ್ನು ಎರಡು ತಿಂಗಳು ಕೆಡದಂತೆ ಬಳಸಬಹುದು.

ಬೆಳ್ಳುಳ್ಳಿಯನ್ನು ತಾಜಾ ಆಗಿ ಸಂಗ್ರಹಿಸಲು ಸಲಹೆಗಳು:

-ಬೆಳ್ಳುಳ್ಳಿಯನ್ನು 6 ತಿಂಗಳ ಕಾಲ ಅನುಕೂಲಕರವಾಗಿ ಸಂಗ್ರಹಿಸಬಹುದು. ಇದಕ್ಕಾಗಿ ಬೆಳ್ಳುಳ್ಳಿ ಖರೀದಿಸುವಾಗ ಅದು ಮೊಳಕೆ ಬಾರದಂತೆ ನೋಡಿಕೊಳ್ಳಿ. ಅಂತಹ ಬೆಳ್ಳುಳ್ಳಿಯನ್ನು ದೀರ್ಘಕಾಲದವರೆಗೆ ಸಂಗ್ರಹಿಸಲು, ಬೆಳಕಿನಿಂದ ದೂರವಿರುವ ತೆರೆದ ಸ್ಥಳದಲ್ಲಿ ಇರಿಸಿ. ಅಂದರೆ, ಚೀಲಗಳಲ್ಲಿ ಅಥವಾ ಪಾತ್ರೆಗಳಲ್ಲಿ ಪ್ಯಾಕ್ ಮಾಡಬೇಡಿ.

– ನೀವು ಸಿಪ್ಪೆ ಸುಲಿದ ಅಥವಾ ಕತ್ತರಿಸಿದ ಬೆಳ್ಳುಳ್ಳಿ ಎಸಳನ್ನು ಪ್ರತ್ಯೇಕವಾಗಿ ಶೇಖರಿಸಿಡಬಯಸಿದರೆ ಅದನ್ನು ಗಾಳಿಯಾಡದ ಪಾತ್ರೆಯಲ್ಲಿ ಸಂಗ್ರಹಿಸಿ ಮತ್ತು ಫ್ರಿಜ್ನಲ್ಲಿ ಇರಿಸಿ. ಬೆಳ್ಳುಳ್ಳಿ ಎರಡರಿಂದ ಮೂರು ವಾರಗಳವರೆಗೆ ಉಪಯುಕ್ತವಾಗಿರುತ್ತದೆ. ಅದೇ ಬೆಳ್ಳುಳ್ಳಿಯನ್ನು ಕತ್ತರಿಸಿದರೆ ದೀರ್ಘ ಕಾಲ ಶೇಖರಣೆ ಮಾಡಿಡುವುದು ಸಾಧ್ಯವಾಗುವುದಿಲ್ಲ.

-ಜನರು ಬೆಳ್ಳುಳ್ಳಿಯನ್ನು ಫ್ರಿಡ್ಜ್ ನಲ್ಲಿ ಇಡುವುದಿಲ್ಲ. ಆದರೆ ಸರಿಯಾದ ಕ್ರಮದಲ್ಲಿ ಫ್ರಿಡ್ಜ್ ನಲ್ಲಿಟ್ಟರೆ ಬೆಳ್ಳುಳ್ಳಿ ತಾಜಾವಾಗಿರುತ್ತದೆ. ಇದಕ್ಕಾಗಿ ಬೆಳ್ಳುಳ್ಳಿಯನ್ನು ಪೇಸ್ಟ್ ಮಾಡಿ ರೆಫ್ರಿಜರೇಟರ್ ನಲ್ಲಿಟ್ಟರೆ ಅದು ತಿಂಗಳಾನುಗಟ್ಟಲೆ ತಾಜಾವಾಗಿರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!