AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ತುಳಸಿ ಗಿಡ ಒಣಗುತ್ತಿದೆಯೇ? ಆರೈಕೆ ಹೀಗೆ ಮಾಡಿ

ತುಳಸಿ ಗಿಡವನ್ನು ಪವಿತ್ರ ಹಾಗೂ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ತುಳಸಿಗಿಡವು ಒಣಗಬಾರದು ಹಾಗೂ ಸಾಯಬಾರದು ಎನ್ನಲಾಗುತ್ತದೆ. ಒಂದು ವೇಳೆ ಈ ರೀತಿ ಏನಾದರೂ ಆದರೆ ಮನೆಗೆ ಅಶುಭವೆಂದು ಭಾವಿಸಲಾಗುತ್ತದೆ. ಚಳಿಗಾಲದಲ್ಲಿ ತುಳಸಿ ಸಸ್ಯವು ಒಣಗಲು ಪ್ರಾರಂಭವಾಗುತ್ತದೆ. ಈ ಸಸ್ಯದ ಆರೈಕೆಗೆ ಗಮನ ನೀಡದಿರುವುದೇ ಮುಖ್ಯ ಕಾರಣವಾಗಿದೆ. ಈ ಋತುವಿನಲ್ಲಿ ತುಳಸಿ ಗಿಡವು ಒಣಗುತ್ತಿದ್ದರೆ ಹೆಚ್ಚು ಚಿಂತಿಸಬೇಡಿ. ಮನೆಯಂಗಳದಲ್ಲಿರುವ ತುಳಸಿ ಗಿಡವು ಸದಾ ಹಸಿರಾಗಿರಲು ಈ ಕೆಲವು ಸಲಹೆಗಳನ್ನು ತಪ್ಪದೇ ಪಾಲಿಸಿ.

ಚಳಿಗಾಲದಲ್ಲಿ ತುಳಸಿ ಗಿಡ ಒಣಗುತ್ತಿದೆಯೇ? ಆರೈಕೆ ಹೀಗೆ ಮಾಡಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Dec 21, 2024 | 3:52 PM

Share

ತುಳಸಿ ಗಿಡವನ್ನು ಲಕ್ಷ್ಮಿಯ ಅವತಾರ ಎಂದು ಪರಿಗಣಿಸಲಾಗಿದ್ದು, ಹಿಂದೂ ಧರ್ಮದಲ್ಲಿ ತುಳಸಿಗೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ಹಚ್ಚ ಹಸಿರಿನಿಂದ ಕಂಗೊಳಿಸುವ ತುಳಸಿ ಗಿಡವು ಸಂತೋಷ ಮತ್ತು ಸಮೃದ್ಧಿಯ ಸಂಕೇತವಾಗಿದೆ. ಆದರೆ ಈ ತುಳಸಿ ಗಿಡವು ಒಣಗುವುದು ಅಥವಾ ಸಾಯುವುದು ಅಶುಭ ಎಂದು ಪರಿಗಣಿಸಲಾಗಿದೆ. ಆದರೆ ಚಳಿಗಾಲದಲ್ಲಿ ಹಚ್ಚಹಸಿರಿನಿಂದ ಕೂಡಿದ ತುಳಸಿಯೂ ಒಣಗುತ್ತವೆ. ಈ ಋತುವಿನಲ್ಲಿ ತುಳಸಿಯ ಆರೈಕೆ ಮಾಡುವುದು ಕಷ್ಟದಾಯಕವಾಗಿದ್ದು, ಒಂದು ವೇಳೆ ನಿಮ್ಮ ಮನೆಯಲ್ಲಿರುವ ತುಳಸಿ ಗಿಡವು ಒಣಗುತ್ತಿದ್ದರೆ ಈ ಕೆಲವು ಸಲಹೆಗಳನ್ನು ಅನುಸರಿಸಿ ಗಿಡದ ಆರೈಕೆ ಮಾಡಿ.

  • ಚಳಿಗಾಲದಲ್ಲಿ ತಂಪಾದ ವಾತಾವರಣವಿರುವ ಕಾರಣ ತುಳಸಿ ಗಿಡಗಳಿಗೆ ತಣ್ಣೀರು ಹಾಕಬೇಡಿ. ಯಾವಾಗಲೂ ಉಗುರುಬೆಚ್ಚನೆಯ ನೀರು ಬಳಕೆ ಮಾಡಿ. ಹೀಗೆ ಮಾಡಿದ್ದಲ್ಲಿ ಸಸ್ಯದಲ್ಲಿ ತೇವಾಂಶ ಉಳಿದು, ಗಿಡವು ಒಣಗುವುದಿಲ್ಲ ಹಚ್ಚಹಸಿರಾಗಿರುತ್ತದೆ.
  • ಚಳಿಗಾಲದಲ್ಲಿ ತುಳಸಿಯನ್ನು ಹಸಿರಾಗಿಡಲು, ಎಲೆಗಳ ಮೇಲೆ ಸಂಗ್ರಹವಾಗಿರುವ ಧೂಳನ್ನು ಸ್ವಚ್ಛಗೊಳಿಸುವುದರೊಂದಿಗೆ ಬೇರಿನ ಸುತ್ತಲಿನ ಮಣ್ಣನ್ನು ಸಡಿಲುಗೊಳಿಸುತ್ತ ಇರುವುದು ಬಹಳ ಮುಖ್ಯ. ವಾರಕ್ಕೆ ಎರಡು ಬಾರಿಯಾದರೂ ಮಣ್ಣನ್ನು ಸಡಿಲಗೊಳಿಸಿ.
  • ಚಳಿಗಾಲದಲ್ಲಿ ತುಳಸಿ ಗಿಡವು ಒಣಗಲು ಪ್ರಾರಂಭಿಸಿದರೆ ಮಡಕೆಯಲ್ಲಿ ಮಣ್ಣು ಮತ್ತು ಮರಳನ್ನು ಮಿಶ್ರಣ ಮಾಡಿಕೊಳ್ಳಿ. ಮಡಕೆಯ ಕೆಳಗಿನಿಂದ ಚಿಕ್ಕದಾಗಿ ತೂತು ಮಾಡಿ ತುಳಸಿ ಗಿಡವನ್ನು ನೆಡಿ. ಮಡಕೆ ಸ್ವಲ್ಪ ದೊಡ್ಡದಿರಲಿ. ಈ ರೀತಿ ಗಿಡ ನೆಡುವುದು ಉತ್ತಮ.
  • ತುಳಸಿ ಗಿಡಕ್ಕೆ ನೀರು ಅಗತ್ಯವಾಗಿ ಬೇಕು. ಆದರೆ ಹೆಚ್ಚು ನೀರನ್ನು ಹಾಕಬೇಡಿ. ನೀರು ಹೆಚ್ಚಾದರೆ ಸಸ್ಯದ ಬೇರುಗಳಿಂದಲೇ ಕೊಳೆಯಲು ಪ್ರಾರಂಭಿಸುತ್ತದೆ. ನೀರು ಕಡಿಮೆಯಾದ್ರೂ ಕೂಡ ಗಿಡ ಒಣಗುತ್ತವೆ. ಹೀಗಾಗಿ ನೀರನ್ನು ಹಾಕುವಾಗ ನೀರಿನ ಪ್ರಮಾಣದ ಬಗ್ಗೆ ಹೆಚ್ಚು ಗಮನ ಕೊಡಿ.
  • ಚಳಿಗಾಲದಲ್ಲಿ ಇಬ್ಬನಿಯಿಂದ ತುಳಸಿ ಗಿಡವು ಒಣಗಿ ಸಾಯುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ತುಳಸಿ ಗಿಡವನ್ನು ಸ್ವಚ್ಛವಾದ ಕೆಂಪು ಬಟ್ಟೆಯಿಂದ ಮುಚ್ಚಿ. ಅದಲ್ಲದೇ, ಈ ಗಿಡವನ್ನು ಒಳಾಂಗಣದಲ್ಲಿ ಇರಿಸುವುದು ಸೂಕ್ತ.
  • ತುಳಸಿ ಗಿಡಕ್ಕೆ ಯೂರಿಯಾದಂತಹ ಕೃತಕ ಗೊಬ್ಬರಗಳ ಬಳಕೆಯನ್ನು ಆದಷ್ಟು ತಪ್ಪಿಸಿ. ಈ ಗಿಡಕ್ಕೆ ಮಿಶ್ರಗೊಬ್ಬರ, ಸಾವಯವ ಮಿಶ್ರಗೊಬ್ಬರವನ್ನು ಬಳಸುವುದು ಸೂಕ್ತದಾಯಕವಾಗಿದೆ. ಕಾಲಕಾಲಕ್ಕೆ ಮಣ್ಣನ್ನು ಬದಲಾಯಿಸುತ್ತ ಇರಿ. ಇದರಿಂದ ಸಸ್ಯಕ್ಕೆ ಅಗತ್ಯವಾದ ಪೋಷಕಾಂಶಗಳು ಸಿಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ