AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ತುಳಸಿ ಗಿಡ ಒಣಗುತ್ತಿದೆಯೇ? ಆರೈಕೆ ಹೀಗೆ ಮಾಡಿ

ತುಳಸಿ ಗಿಡವನ್ನು ಪವಿತ್ರ ಹಾಗೂ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ತುಳಸಿಗಿಡವು ಒಣಗಬಾರದು ಹಾಗೂ ಸಾಯಬಾರದು ಎನ್ನಲಾಗುತ್ತದೆ. ಒಂದು ವೇಳೆ ಈ ರೀತಿ ಏನಾದರೂ ಆದರೆ ಮನೆಗೆ ಅಶುಭವೆಂದು ಭಾವಿಸಲಾಗುತ್ತದೆ. ಚಳಿಗಾಲದಲ್ಲಿ ತುಳಸಿ ಸಸ್ಯವು ಒಣಗಲು ಪ್ರಾರಂಭವಾಗುತ್ತದೆ. ಈ ಸಸ್ಯದ ಆರೈಕೆಗೆ ಗಮನ ನೀಡದಿರುವುದೇ ಮುಖ್ಯ ಕಾರಣವಾಗಿದೆ. ಈ ಋತುವಿನಲ್ಲಿ ತುಳಸಿ ಗಿಡವು ಒಣಗುತ್ತಿದ್ದರೆ ಹೆಚ್ಚು ಚಿಂತಿಸಬೇಡಿ. ಮನೆಯಂಗಳದಲ್ಲಿರುವ ತುಳಸಿ ಗಿಡವು ಸದಾ ಹಸಿರಾಗಿರಲು ಈ ಕೆಲವು ಸಲಹೆಗಳನ್ನು ತಪ್ಪದೇ ಪಾಲಿಸಿ.

ಚಳಿಗಾಲದಲ್ಲಿ ತುಳಸಿ ಗಿಡ ಒಣಗುತ್ತಿದೆಯೇ? ಆರೈಕೆ ಹೀಗೆ ಮಾಡಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Dec 21, 2024 | 3:52 PM

Share

ತುಳಸಿ ಗಿಡವನ್ನು ಲಕ್ಷ್ಮಿಯ ಅವತಾರ ಎಂದು ಪರಿಗಣಿಸಲಾಗಿದ್ದು, ಹಿಂದೂ ಧರ್ಮದಲ್ಲಿ ತುಳಸಿಗೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ಹಚ್ಚ ಹಸಿರಿನಿಂದ ಕಂಗೊಳಿಸುವ ತುಳಸಿ ಗಿಡವು ಸಂತೋಷ ಮತ್ತು ಸಮೃದ್ಧಿಯ ಸಂಕೇತವಾಗಿದೆ. ಆದರೆ ಈ ತುಳಸಿ ಗಿಡವು ಒಣಗುವುದು ಅಥವಾ ಸಾಯುವುದು ಅಶುಭ ಎಂದು ಪರಿಗಣಿಸಲಾಗಿದೆ. ಆದರೆ ಚಳಿಗಾಲದಲ್ಲಿ ಹಚ್ಚಹಸಿರಿನಿಂದ ಕೂಡಿದ ತುಳಸಿಯೂ ಒಣಗುತ್ತವೆ. ಈ ಋತುವಿನಲ್ಲಿ ತುಳಸಿಯ ಆರೈಕೆ ಮಾಡುವುದು ಕಷ್ಟದಾಯಕವಾಗಿದ್ದು, ಒಂದು ವೇಳೆ ನಿಮ್ಮ ಮನೆಯಲ್ಲಿರುವ ತುಳಸಿ ಗಿಡವು ಒಣಗುತ್ತಿದ್ದರೆ ಈ ಕೆಲವು ಸಲಹೆಗಳನ್ನು ಅನುಸರಿಸಿ ಗಿಡದ ಆರೈಕೆ ಮಾಡಿ.

  • ಚಳಿಗಾಲದಲ್ಲಿ ತಂಪಾದ ವಾತಾವರಣವಿರುವ ಕಾರಣ ತುಳಸಿ ಗಿಡಗಳಿಗೆ ತಣ್ಣೀರು ಹಾಕಬೇಡಿ. ಯಾವಾಗಲೂ ಉಗುರುಬೆಚ್ಚನೆಯ ನೀರು ಬಳಕೆ ಮಾಡಿ. ಹೀಗೆ ಮಾಡಿದ್ದಲ್ಲಿ ಸಸ್ಯದಲ್ಲಿ ತೇವಾಂಶ ಉಳಿದು, ಗಿಡವು ಒಣಗುವುದಿಲ್ಲ ಹಚ್ಚಹಸಿರಾಗಿರುತ್ತದೆ.
  • ಚಳಿಗಾಲದಲ್ಲಿ ತುಳಸಿಯನ್ನು ಹಸಿರಾಗಿಡಲು, ಎಲೆಗಳ ಮೇಲೆ ಸಂಗ್ರಹವಾಗಿರುವ ಧೂಳನ್ನು ಸ್ವಚ್ಛಗೊಳಿಸುವುದರೊಂದಿಗೆ ಬೇರಿನ ಸುತ್ತಲಿನ ಮಣ್ಣನ್ನು ಸಡಿಲುಗೊಳಿಸುತ್ತ ಇರುವುದು ಬಹಳ ಮುಖ್ಯ. ವಾರಕ್ಕೆ ಎರಡು ಬಾರಿಯಾದರೂ ಮಣ್ಣನ್ನು ಸಡಿಲಗೊಳಿಸಿ.
  • ಚಳಿಗಾಲದಲ್ಲಿ ತುಳಸಿ ಗಿಡವು ಒಣಗಲು ಪ್ರಾರಂಭಿಸಿದರೆ ಮಡಕೆಯಲ್ಲಿ ಮಣ್ಣು ಮತ್ತು ಮರಳನ್ನು ಮಿಶ್ರಣ ಮಾಡಿಕೊಳ್ಳಿ. ಮಡಕೆಯ ಕೆಳಗಿನಿಂದ ಚಿಕ್ಕದಾಗಿ ತೂತು ಮಾಡಿ ತುಳಸಿ ಗಿಡವನ್ನು ನೆಡಿ. ಮಡಕೆ ಸ್ವಲ್ಪ ದೊಡ್ಡದಿರಲಿ. ಈ ರೀತಿ ಗಿಡ ನೆಡುವುದು ಉತ್ತಮ.
  • ತುಳಸಿ ಗಿಡಕ್ಕೆ ನೀರು ಅಗತ್ಯವಾಗಿ ಬೇಕು. ಆದರೆ ಹೆಚ್ಚು ನೀರನ್ನು ಹಾಕಬೇಡಿ. ನೀರು ಹೆಚ್ಚಾದರೆ ಸಸ್ಯದ ಬೇರುಗಳಿಂದಲೇ ಕೊಳೆಯಲು ಪ್ರಾರಂಭಿಸುತ್ತದೆ. ನೀರು ಕಡಿಮೆಯಾದ್ರೂ ಕೂಡ ಗಿಡ ಒಣಗುತ್ತವೆ. ಹೀಗಾಗಿ ನೀರನ್ನು ಹಾಕುವಾಗ ನೀರಿನ ಪ್ರಮಾಣದ ಬಗ್ಗೆ ಹೆಚ್ಚು ಗಮನ ಕೊಡಿ.
  • ಚಳಿಗಾಲದಲ್ಲಿ ಇಬ್ಬನಿಯಿಂದ ತುಳಸಿ ಗಿಡವು ಒಣಗಿ ಸಾಯುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ತುಳಸಿ ಗಿಡವನ್ನು ಸ್ವಚ್ಛವಾದ ಕೆಂಪು ಬಟ್ಟೆಯಿಂದ ಮುಚ್ಚಿ. ಅದಲ್ಲದೇ, ಈ ಗಿಡವನ್ನು ಒಳಾಂಗಣದಲ್ಲಿ ಇರಿಸುವುದು ಸೂಕ್ತ.
  • ತುಳಸಿ ಗಿಡಕ್ಕೆ ಯೂರಿಯಾದಂತಹ ಕೃತಕ ಗೊಬ್ಬರಗಳ ಬಳಕೆಯನ್ನು ಆದಷ್ಟು ತಪ್ಪಿಸಿ. ಈ ಗಿಡಕ್ಕೆ ಮಿಶ್ರಗೊಬ್ಬರ, ಸಾವಯವ ಮಿಶ್ರಗೊಬ್ಬರವನ್ನು ಬಳಸುವುದು ಸೂಕ್ತದಾಯಕವಾಗಿದೆ. ಕಾಲಕಾಲಕ್ಕೆ ಮಣ್ಣನ್ನು ಬದಲಾಯಿಸುತ್ತ ಇರಿ. ಇದರಿಂದ ಸಸ್ಯಕ್ಕೆ ಅಗತ್ಯವಾದ ಪೋಷಕಾಂಶಗಳು ಸಿಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!