AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ್ಪು ಹೆಚ್ಚಾಗಿ ಅಡುಗೆ ಕೆಟ್ಟು ಹೋದ್ರೆ, ರುಚಿ ಸರಿದೂಗಿಸಲು ಈ ಸರಳ ಸಲಹೆಯನ್ನು ಪಾಲಿಸಿ

ಅಡುಗೆಗೆ ಉಪ್ಪು ತುಂಬಾನೇ ಮುಖ್ಯ. ಹೌದು ಉಪ್ಪು ಕಡಿಮೆಯಾದರೂ ಅಥವಾ ಉಪ್ಪು ಹೆಚ್ಚಾದರೂ ಅಡುಗೆಯ ರುಚಿ ಕೆಟ್ಟು ಹೋಗುತ್ತದೆ. ಹಾಗಾಗಿ ಸರಿಯಾದ ಪ್ರಮಾಣದಲ್ಲಿ ಉಪ್ಪನ್ನು ಹಾಕುಬೇಕು. ಆದ್ರೆ ಕೆಲವೊಂದು ಬಾರಿ ಅಡುಗೆಗೆ ಉಪ್ಪು ಹೆಚ್ಚಾಗುವ ಸಾಧ್ಯತೆ ಇರುತ್ತವೆ. ಇಂತಹ ಸಂದರ್ಭದಲ್ಲಿ ಅಡುಗೆ ಕೆಟ್ಟು ಹೋಯ್ತಲ್ವಾ ಎಂದು ಚಿಂತೆ ಮಾಡುವ ಬದಲು ಈ ಕೆಲವೊಂದು ಟಿಪ್ಸ್‌ ಪಾಲಿಸುವ ಮೂಲಕ ರುಚಿಯನ್ನು ಸರಿದೂಗಿಸಬಹುದು.

ಉಪ್ಪು ಹೆಚ್ಚಾಗಿ ಅಡುಗೆ ಕೆಟ್ಟು ಹೋದ್ರೆ, ರುಚಿ ಸರಿದೂಗಿಸಲು ಈ ಸರಳ ಸಲಹೆಯನ್ನು ಪಾಲಿಸಿ
ಸಾಂದರ್ಭಿಕ ಚಿತ್ರ Image Credit source: Freepik
ಮಾಲಾಶ್ರೀ ಅಂಚನ್​
|

Updated on:Dec 24, 2025 | 3:13 PM

Share

ಅಡುಗೆಯ ರುಚಿ ಹೆಚ್ಚಿಸುವಲ್ಲಿ ಉಪ್ಪಿನ (salt) ಪಾತ್ರ ಬಹಳ ದೊಡ್ಡದು. ಅದೇ ಒಂದು ವೇಳೆ ಸ್ವಲ್ಪ ಉಪ್ಪು ಜಾಸ್ತಿ ಆದ್ರೂ ಸಹ ಅಡುಗೆಯ ರುಚಿಯೇ ಕೆಟ್ಟು ಹೋಗುತ್ತದೆ. ಈ ರೀತಿ ಉಪ್ಪು ಜಾಸ್ತಿಯಾದಾಗ ಅಯ್ಯೋ ಕಷ್ಟಪಟ್ಟು ಮಾಡಿದ ಅಡುಗೆಯೆಲ್ಲಾ ವೇಸ್ಟ್‌ ಆಯ್ತಲ್ವಾ ಎಂದು ಹಲವರು ಟೆನ್ಷನ್‌ ಮಾಡ್ಕೊಳ್ಳುತ್ತಾರೆ. ಅಡುಗೆಗೆ ಉಪ್ಪು ಹೆಚ್ಚಾದ್ರೆ ಈ ರೀತಿ ಟೆನ್ಷನ್‌ ಮಾಡುವ ಯಾವುದೇ ಅವಶ್ಯಕತೆ ಇಲ್ಲ, ಜಸ್ಟ್‌ ಈ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ರುಚಿಯನ್ನು ಸರಿದೂಗಿಸಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಡುಗೆಗೆ ಉಪ್ಪು ಜಾಸ್ತಿ ಆದ್ರೆ ಏನು ಮಾಡಬೇಕು?

ಮೊಸರು ಸೇರಿಸಿ: ಉಪ್ಪು ಜಾಸ್ತಿಯಾಗಿ ಅಡುಗೆಯ ರುಚಿ ಕೆಟ್ಟು ಹೋದರೆ ರುಚಿಯನ್ನು ಸರಿದೂರಿಸಲು ನೀವು ಅಡುಗೆಗೆ ಮೊಸರನ್ನು ಸೇರಿಸಬಹುದು. ಅಡುಗೆಗೆ ಎರಡು ಚಮಚ ಮೊಸರು ಸೇರಿಸಿ ಎರಡು ನಿಮಿಷ ಬೇಯಿಸಿ. ಇದು ಉಪ್ಪಿನ ಅಂಶವನ್ನು ಸಮತೋಲನಗೊಳಿಸುತ್ತದೆ ಮತ್ತು ಅಡುಗೆಯ ರುಚಿಯನ್ನು ಸುಧಾರಿಸುತ್ತದೆ.

ಕಡಲೆ ಹಿಟ್ಟು: ನೀವು ಹುರಿದ ಕಡಲೆ ಹಿಟ್ಟನ್ನು ಸಹ ಬಳಸಬಹುದು. ನೀವು ಮಾಡಿದ ಅಡುಗೆಯಲ್ಲಿ ಉಪ್ಪು ಹೆಚ್ಚು ಇದ್ದರೆ, ಅದಕ್ಕೆ ಹುರಿದ ಕಡಲೆ ಹಿಟ್ಟನ್ನು ಸೇರಿಸಿ. ಇದು ಹೆಚ್ಚುವರಿ ಉಪ್ಪನ್ನು ಸಮತೋಲನಗೊಳಿಸುತ್ತದೆ ಮತ್ತು ಅಡುಗೆಯ ರುಚಿಯನ್ನು ಸುಧಾರಿಸುತ್ತದೆ.

ಬೇಯಿಸಿದ ಆಲೂಗಡ್ಡೆ: ಬೇಯಿಸಿದ ಆಲೂಗಡ್ಡೆಯನ್ನು ಬಳಸುವ ಮೂಲಕ ಅಡುಗೆಯಲ್ಲಿನ ಉಪ್ಪಿನ ಪ್ರಮಾಣವನ್ನು ಕಡಿಮೆ ಮಾಡಬಹುದು. ಉಪ್ಪು ಹೆಚ್ಚಾಗಿ ರುಚಿ ಕೆಟ್ಟಿದ್ದರೆ ಬೇಯಿಸಿದ ಆಲೂಗಡ್ಡೆಯನ್ನು ಕಟ್‌ ಮಾಡಿ, ನೀವು ತಯಾರಿಸಿಟ್ಟ ಅಡುಗೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಇದು ಉಪ್ಪಿನಾಂಶವನ್ನು ಹೀರಿಕೊಳ್ಳುತ್ತದೆ. ಹಸಿ ಆಲೂಗಡ್ಡೆಯ ತುಂಡನ್ನು ಸಹ ಸೇರಿಸಬಹುದು.

ಇದನ್ನೂ ಓದಿ: ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಬಾರದೆಂದರೆ ಸರಳ ಸಲಹೆಯನ್ನು ಪಾಲಿಸಿ

ನಿಂಬೆ ರಸ: ಅಡುಗೆಯಲ್ಲಿ ಉಪ್ಪು ಹೆಚ್ಚಾಗಿದ್ದರೆ ಅದನ್ನು ಸಮತೋಲನಗೊಳಿಸಲು ನಿಂಬೆ ರಸ ಕೂಡ ಸಹಕಾರಿಯಾಗಿದೆ. ಹೌದು ಉಪ್ಪು ಜಾಸ್ತಿಯಾದ್ರೆ ಅಡುಗೆಗೆ ಅರ್ಧ ನಿಂಬೆಹಣ್ಣನ್ನು ಹಿಂಡಿ ಚೆನ್ನಾಗಿ ವಿಶ್ರಣ ಮಾಡಿ. ಇದು ಹೆಚ್ಚಾದ ಉಪ್ಪಿನಾಂಶವನ್ನು ಸಮತೋಲನಗೊಳಿಸುತ್ತದೆ.

ತೆಂಗಿನ ಹಾಲು: ನೀವು ಮಾಡಿದ ಗ್ರೇವಿಯ ಉಪ್ಪು ಜಾಸ್ತಿ ಆದ್ರೆ ಅದಕ್ಕೆ ತೆಂಗಿನ ಹಾಲನ್ನು ಸೇರಿಸಬಹುದು. ತೆಂಗಿನ ಹಾಲಿನೊಂದಿಗೆ ಸ್ವಲ್ಪ ನೀರು ಬೆರೆಸಿ ಗ್ರೇವಿಗೆ ಸೇರಿಸಿ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚುವರಿ ಉಪ್ಪನ್ನು ಸಮತೋಲನಗೊಳಿಸುತ್ತದೆ.

ಸಕ್ಕರೆ: ಅಡುಗೆಗೆ ಉಪ್ಪು ಹೆಚ್ಚಾದರೆ ಅದಕ್ಕೆ ಸ್ವಲ್ಪ ಸಕ್ಕರೆ ಅಥವಾ ಬೆಲ್ಲ ಸೇರಿಸಿ. ಸಕ್ಕರೆಯ ಸಿಹಿಯು ಉಪ್ಪಿನ ಪ್ರಮಾಣವನ್ನು ಸರಿದೂಗಿಸಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:11 pm, Wed, 24 December 25

ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ