AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸಭರಿತ ತಾಜಾ ಕಲ್ಲಂಗಡಿ ಹಣ್ಣು ಖರೀದಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಬೇಸಿಗೆ ಆರಂಭವಾಗುತ್ತಿದ್ದಂತೆ ಮಾರುಕಟ್ಟೆ ತುಂಬೆಲ್ಲಾ ಕಲ್ಲಂಗಡಿ ಹಣ್ಣುಗಳದ್ದೇ ಕಾರುಬಾರು ಶುರುವಾಗುತ್ತದೆ. ಕೆಂಪು ಮತ್ತು ರಸಭರಿತ ಕಲ್ಲಂಗಡಿ ಸಿಕ್ಕರೆ ಬಾಯಿ ಚಪ್ಪರಿಸಿಕೊಂಡು ತಿನ್ನುವವರೇ ಹೆಚ್ಚು. ನೀರಿನಾಂಶ ಹೇರಳವಾಗಿರುವ ಈ ಕಲ್ಲಂಗಡಿಯಲ್ಲಿ ಹಲವಾರು ರೀತಿಯ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಆರೋಗ್ಯಕ್ಕೆ ಒಳ್ಳೆಯದು. ಇದರ ನಿಯಮಿತ ಸೇವನೆಯಿಂದ ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ. ಇಷ್ಟೆಲ್ಲಾ ಆರೋಗ್ಯ ಲಾಭವಿರುವ ಕಲ್ಲಂಗಡಿ ಹಣ್ಣು ಅಗ್ಗದ ಬೆಲೆಗೆ ಸಿಗುತ್ತದೆ ಎಂದಾದರೆ ಖರೀದಿ ಮಾಡಿ ತರುವವರೇ ಹೆಚ್ಚು. ಆದರೆ ರಸಭರಿತ ಹಾಗೂ ತಾಜಾ ಕಲ್ಲಂಗಡಿ ಖರೀದಿಸುವುದು ಹೇಗೆ? ಹಣ್ಣನ್ನು ಖರೀದಿಸುವಾಗ ಈ ಕೆಲವು ಟಿಪ್ಸ್ ಪಾಲಿಸುವುದು.

ರಸಭರಿತ ತಾಜಾ ಕಲ್ಲಂಗಡಿ ಹಣ್ಣು ಖರೀದಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಕಲ್ಲಂಗಡಿ
ಸಾಯಿನಂದಾ
| Edited By: |

Updated on: Mar 17, 2025 | 5:45 PM

Share

ಕಲ್ಲಂಗಡಿ (Watermelon) ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಬೇಸಿಗೆ ಬಂತೆಂದರೆ ಈ ಹಣ್ಣನ್ನು ಎಲ್ಲರೂ ತಪ್ಪದೇ ಖರೀದಿ ಮಾಡುತ್ತಾರೆ. ಈ ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್‌ ಸೇರಿದಂತೆ ಇನ್ನಿತ್ತರ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲೇ ಇದೆ. ಸುಡುವ ಬಿಸಿಲಿನಲ್ಲಿ ದೇಹವನ್ನು ಡಿಹೈಡ್ರೇಟ್‌ ಮಾಡಲು ಈ ಕಲ್ಲಂಗಡಿ ಸಹಕಾರಿಯಾಗಿದೆ. ಮಾರುಕಟ್ಟೆಯಲ್ಲಿ ಅಗ್ಗದ ಬೆಲೆಗೆ ಈ ಹಣ್ಣು ಸಿಗುತ್ತದೆ ಎಂದು ಖರೀದಿ ಮಾಡುವ ಮುನ್ನ ಈ ಹಣ್ಣು ಸಿಹಿಯಾಗಿದೆಯೇ ಎಂದು ತಿಳಿಯುವುದು ಮುಖ್ಯ. ಈ ಅಂಶಗಳನ್ನು ಗಮನಿಸಿದರೆ ಸಿಹಿ ಹಾಗೂ ರಸಭರಿತ ಕಲ್ಲಂಗಡಿ ಹಣ್ಣನ್ನು ಖರೀದಿಸಬಹುದಾಗಿದ್ದು, ಈ ಕುರಿತಾದ ಟಿಪ್ಸ್ ಇಲ್ಲಿದೆ.

ಕಲ್ಲಂಗಡಿ ಖರೀದಿಸುವಾಗ ಈ ಟಿಪ್ಸ್ ಪಾಲಿಸಿ

  • ಮೆಲ್ಲಗೆ ಬೆರಳಿನಿಂದ ಬಡಿಯಿರಿ : ಕಲ್ಲಂಗಡಿ ಖರೀದಿ ಮಾಡುವಾಗ ಅದನ್ನು ಒಮ್ಮೆ ಕೈಯಲ್ಲಿ ಎತ್ತಿಕೊಂಡು ಬೆರಳುಗಳ ಸಹಾಯದಿಂದ ಸಣ್ಣದಾಗಿ ಬಡಿಯಿರಿ. ಈ ವೇಳೆ ಜೋರಾಗಿ ಶಬ್ದ ಬಂದರೆ ಹಣ್ಣು ಸಿಹಿಯಾಗಿದೆ ಎಂದರ್ಥ.
  • ಸಣ್ಣ ರಂಧ್ರಗಳಿಲ್ಲದ ಹಣ್ಣನ್ನು ಆಯ್ಕೆ ಮಾಡಿ : ಕಲ್ಲಂಗಡಿ ಕೊಳ್ಳುವಾಗ ಗಮನಿಸಬೇಕಾದದ್ದು ರಂಧ್ರಗಳಿದೆಯೇ ಎಂದು. ಹಣ್ಣು ಬೇಗ ಬೆಳೆಯಲಿ ಎಂದು ಹಾನಿಕಾರಕ ಹಾರ್ಮೋನ್ ಗಳ ಚುಚ್ಚುಮದ್ದುಗಳನ್ನು ಇಂಜೆಕಕ್ಟ್ ಮಾಡುತ್ತಾರೆ. ರಂಧ್ರಗಳಿಲ್ಲದೇ ಇದ್ದರೆ ಆ ಹಣ್ಣುಗಳನ್ನು ನೈಸರ್ಗಿಕವಾಗಿ ಹಣ್ಣು ಮಾಡಲಾಗಿದೆ ಎಂದರ್ಥ.
  • ಆಕಾರ ನೋಡಿ ಖರೀದಿ ಮಾಡಿ : ಕಲ್ಲಂಗಡಿ ಹಣ್ಣು ಖರೀದಿ ಮಾಡುವಾಗ ಮೊದಲು ನೋಡಬೇಕಾಗಿರುವುದು ಆಕಾರ. ಮೊಟ್ಟೆಯ ಆಕಾರದ ಕಲ್ಲಂಗಡಿಗಳನ್ನೇ ಖರೀದಿಸಿ, ಇದು ಹೆಚ್ಚು ಸಿಹಿಯಾಗಿರುತ್ತವೆ. ವೃತ್ತಾಕಾರದಲ್ಲಿರುವ ಕಲ್ಲಂಗಡಿ ಸಿಹಿಯಾಗಿ ಹಾಗೂ ರುಚಿಯಾಗಿರುವುದಿಲ್ಲ
  • ಹಣ್ಣು ಹಳದಿಯಾಗಿಯೇ ನೋಡಿ : ಹೆಚ್ಚಿನ ಜನರು ಕಲ್ಲಂಗಡಿ ಹಣ್ಣಿನ ಹೊರಭಾಗ ಹಸಿರು ಬಣ್ಣದಲ್ಲಿಯೇ ಎಂದು ನೋಡಿ ಅದನ್ನೇ ಖರೀದಿ ಮಾಡುತ್ತಾರೆ. ಆದರೆ ಈ ಹಣ್ಣನ್ನು ಖರೀದಿ ಮಾಡುವಾಗ ಆ ಹಣ್ಣಿನ ಹೊರಭಾಗವು ಹಳದಿ ಬಣ್ಣದಲ್ಲಿಯೇ ಇದೆಯೇ ಒಂದು ನೋಡುವುದು ಮುಖ್ಯ. ಹೊರಭಾಗವು ತಿಳಿ ಹಳದಿ ಬಣ್ಣದಲ್ಲಿದ್ದರೆ ಆ ಕಲ್ಲಂಗಡಿ ಸಿಹಿಯಾಗಿದ್ದು ಒಳಭಾಗವು ಕೆಂಪು ಬಣ್ಣದಲ್ಲಿರುತ್ತದೆ. ಈ ಹಣ್ಣಿನ ಕೆಳಭಾಗದಲ್ಲಿ ಹೆಚ್ಚು ಹಳದಿ ಕಲೆಗಳು ಇದ್ದರೆ, ಹಣ್ಣು ಸಿಹಿಯಾಗಿರುತ್ತದೆ.
  • ತೂಕದ ಬಗ್ಗೆ ಗಮನ ಕೊಡಿ : ಮಾಗಿದ ಕಲ್ಲಂಗಡಿ ಹಣ್ಣು ಗಾತ್ರಕ್ಕಿಂತ ಭಾರವಾಗಿರುತ್ತದೆ. ಈ ಹಣ್ಣಿನಲ್ಲಿ ನೀರಿನಾಂಶ ಅಧಿಕವಿರುತ್ತದೆ. ಹೆಚ್ಚು ಭಾರವಿರುವ ಹಣ್ಣನ್ನು ಖರೀದಿ ಮಾಡಿ, ಇದು ರಸಭರಿತ, ಸಿಹಿ ಹಾಗೂ ರುಚಿಕರವಾಗಿರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​