AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

kitchen Tips in Kannada : ಈರುಳ್ಳಿ ಹಾಳಾಗದಂತೆ ಸಂಗ್ರಹಿಸಿಡುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಭಾರತೀಯ ಅಡುಗೆಯಲ್ಲಿ ಈರುಳ್ಳಿಯಿಲ್ಲದೇ ಯಾವುದೇ ಅಡುಗೆಯು ರುಚಿಸುವುದಿಲ್ಲ. ಅಡುಗೆಯ ರುಚಿ ಹಾಗೂ ಸ್ವಾದವನ್ನು ಹೆಚ್ಚಿಸುವ ಈರುಳ್ಳಿಯನ್ನು ಹಸಿಯಾಗಿಯೇ ತಿನ್ನುತ್ತಾರೆ. ಆದರೆ ಈ ದೀರ್ಘಕಾಲದವರೆಗೂ ಈ ತರಕಾರಿಯನ್ನು ತಾಜಾವಾಗಿಡುವುದು ಕಷ್ಟ. ಅದಲ್ಲದೇ, ಬೇಸಿಗೆಯಲ್ಲಿ ಈರುಳ್ಳಿ ಬೇಗನೇ ಕೆಡುವುದಲ್ಲದೇ ಮೊಳಕೆಯೊಡೆಯುತ್ತದೆ. ಈ ಸುಲಭ ವಿಧಾನಗಳಿಂದ ಕೆಡದಂತೆ ದೀರ್ಘಕಾಲದವರೆಗೆ ಸಂರಕ್ಷಿಸಿಟ್ಟುಕೊಳ್ಳಬಹುದು.

kitchen Tips in Kannada : ಈರುಳ್ಳಿ ಹಾಳಾಗದಂತೆ ಸಂಗ್ರಹಿಸಿಡುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Edited By: |

Updated on: May 21, 2024 | 12:08 PM

Share

ಯಾವುದೇ ಅಡುಗೆಯಿರಲಿ ಈರುಳ್ಳಿಯಿಲ್ಲದೇ ರುಚಿ ಬರುವುದೇ ಇಲ್ಲ. ಮಸಾಲೆಯುಕ್ತ ಆಹಾರಗಳಿಗೆ ಈರುಳ್ಳಿ ಇರಲೇಬೇಕು. ಅಡುಗೆಗೆ ಹೆಚ್ಚು ಉಪಯೋಗವಾಗುವ ಕಾರಣ ಈರುಳ್ಳಿ ಹೆಚ್ಚು ತರುತ್ತೇವೆ. ಆದರೆ ಕೆಲವೊಮ್ಮೆ ಮಾರುಕಟ್ಟೆಯಲ್ಲಿ ತಂದ ಈರುಳ್ಳಿ ಬೇಗನೇ ಕೆಡುತ್ತದೆ. ಹೆಚ್ಚಿನವರು ಫ್ರಿಡ್ಜ್ ನಲ್ಲಿ ಸಂಗ್ರಹಿಸಿಡುತ್ತಾರೆ. ಆದರೆ ಈ ಕೆಲವು ತಪ್ಪುಗಳನ್ನು ಮಾಡದೇ ಕೆಲ ಸಲಹೆಗಳನ್ನು ಅನುಸರಿಸಿದರೆ ಒಳ್ಳೆಯದು.

  • ಈರುಳ್ಳಿಯನ್ನು ಶೇಖರಿಸಿಡುವಾಗ ಶುಷ್ಕ ಮತ್ತು ತಂಪಾದ ವಾತಾವರಣವಿರಲಿ.
  • ಗಾಳಿಯಾಡುವ ಪ್ರದೇಶದಲ್ಲಿಟ್ಟರೆ ಈರುಳ್ಳಿಯು ಬೇಗನೆ ಕೆಡುವುದಿಲ್ಲ.
  • ಒಣ ಬಟ್ಟೆಯಿಂದ ಈರುಳ್ಳಿಯನ್ನು ಒರೆಸಿ, ತೆರೆದ ಬ್ಲಾಸ್ಕೆಟ್ ನಲ್ಲಿ ಗಾಳಿಯಾಡುವಂತೆ ಇಡುವುದು ಒಳ್ಳೆಯದು.
  • ಈರುಳ್ಳಿ ಗ್ಯಾಸ್ ಬಿಡುಗಡೆ ಮಾಡುತ್ತದೆ. ಹೀಗಾಗಿ ಈರುಳ್ಳಿಯ ಜೊತೆಗೆ ಬೇರೆ ತರಕಾರಿ ಹಾಗೂ ಹಣ್ಣುಗಳನ್ನು ಇಡಬೇಡಿ.
  • ಮಾರುಕಟ್ಟೆಯಿಂದ ತಂದ ಈರುಳ್ಳಿಯನ್ನು ಪ್ಲಾಸ್ಟಿಕ್‌ ಕವರ್‌ನೊಳಗೆ ಹಾಕಿಡಬಾರದು. ಹೀಗೆ ಮಾಡಿದರೆ ಬೇಗನೇ ಕೊಳೆತು ಹೋಗುತ್ತದೆ.
  • ಈರುಳ್ಳಿಯನ್ನು ಎಂದಿಗೂ ಫ್ರಿಡ್ಜ್‌ನಲ್ಲಿ ಶೇಖರಿಸಿಡಬೇಡಿ. ಹೀಗಿಟ್ಟರೆ ಬೇಗನೇ ಹಾಳಾಗುತ್ತದೆ.
  • ಕತ್ತರಿಸಿದ ಹಾಗೂ ಸಿಪ್ಪೆ ಸುಲಿದ ಈರುಳ್ಳಿಯನ್ನು ಆದಷ್ಟು ಬೇಗ ಅಡುಗೆ ಬಳಸುವುದು ಒಳ್ಳೆಯದು.
  • ಮಾರುಕಟ್ಟೆಯಲ್ಲಿ ಈರುಳ್ಳಿಯನ್ನು ತರುವಾಗ ದೊಡ್ಡ ಈರುಳ್ಳಿಯನ್ನೇ ಆಯ್ಕೆ ಮಾಡಿಕೊಳ್ಳಿ. ಒಣಸಿಪ್ಪೆಯ ಪದರುಗಳೂ ಹಾಗೂ ದೊಡ್ಡ ಈರುಳ್ಳಿಯು ಹೆಚ್ಚು ಕಾಲ ಉಳಿಯುತ್ತದೆ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್