Monsoon Hair Care Tips : ಮಳೆಗಾಲದಲ್ಲಿ ಕೇಶರಾಶಿಯ ಆರೈಕೆ ಮಾಡುವುದೇಗೆ? ಈ ಟಿಪ್ಸ್ ಪಾಲಿಸಿ

ಮಳೆಗಾಲ ಎಂದರೆ ಕೆಲವರಿಗೆ ಇಷ್ಟ, ಇನ್ನು ಕೆಲವರಿಗೆ ಕಷ್ಟ. ಈ ಋತುವಿನಲ್ಲಿ ತಂಪಾದ ವಾತಾವರಣ, ಹೊರಗೆ ಹೋಗಿ ಬಂದರೆ ಮನಸ್ಸಿಗೂ ಉಲ್ಲಾಸ. ಆದರೆ ಜೋರಾ ಗಿ ಮಳೆ ಸುರಿಯುತ್ತಿದ್ದರೆ ಯಾರು ಕೂಡ ಹೊರಗೆ ಹೋಗಲು ಇಷ್ಟ ಪಡುವುದಿಲ್ಲ. ಕೆಲಸವಿತ್ತೆಂದೂ ಹೊರಗೆ ಹೋದರೆ, ಮಳೆರಾಯನಿಗೆ ನಮ್ಮನ್ನು ಒದ್ದೆಯಾಗಿಸಿ ಬಿಟ್ಟರೇನೇ ಸಮಾಧಾನ. ಈ ಸಮಯದಲ್ಲಿ ಮೈ ಕೈ, ಬಟ್ಟೆ, ಕೂದಲು ಒದ್ದೆಯಾಗುವುದು ಸಾಮಾನ್ಯ. ಆದರೆ ಈ ಸಮಯದಲ್ಲಿ ಕೂದಲ ಆರೈಕೆಯ ಕಡೆಗೂ ಗಮನ ಕೊಡುವುದು ತುಂಬಾನೇ ಮುಖ್ಯ.

Monsoon Hair Care Tips : ಮಳೆಗಾಲದಲ್ಲಿ ಕೇಶರಾಶಿಯ ಆರೈಕೆ ಮಾಡುವುದೇಗೆ? ಈ ಟಿಪ್ಸ್ ಪಾಲಿಸಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 08, 2024 | 12:36 PM

ಮಳೆಗಾಲದಲ್ಲಿ ಕೂದಲಿನ ಆರೈಕೆ ಮಾಡುವುದು ಸವಾಲಿನ ಕೆಲಸ. ಈ ಮಳೆಗೆ ಕೂದಲು ಒದ್ದೆಯಾಗಿಯೋ, ತಲೆ ಸ್ನಾನ ಮಾಡಿದ ನಂತರ ತಲೆ ಕೂದಲು ಒಣಗದೇ ಇದ್ದರೆಯೂ ಕೂದಲಿನ ಆರೋಗ್ಯವು ಹಾಳಾಗುತ್ತದೆ. ಈ ಸಮಯದಲ್ಲಿ ತಲೆ ಕೂದಲುದುರುವಿಕೆ, ತಲೆ ಹೊಟ್ಟಿನ ಸಮಸ್ಯೆ ಹೀಗೆ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಮಳೆಗಾಲದಲ್ಲಿ ಕೂದಲಿನ ಆರೈಕೆಯತ್ತ ಹೆಚ್ಚು ಗಮನ ನೀಡಬೇಕು. ಹೆಚ್ಚು ಕಾಲ ಕೂದಲು ಒದ್ದೆಯಾಗಿರಲು ಬಿಡಬಾರದು.

ಮಳೆಗಾಲದಲ್ಲಿ ಕೂದಲಿನ ಆರೈಕೆಗೆ ಸರಳ ಸಲಹೆಗಳಿವು

  • ಆಂಟಿ ಡ್ಯಾಂಡ್ರಫ್ ಶಾಂಪೂ ಬಳಸಿ ವಾರಕ್ಕೆ ಕನಿಷ್ಠ 3 ಬಾರಿ ತಲೆ ಕೂದಲನ್ನು ಸ್ವಚ್ಛಗೊಳಿಸಿ. ಅದಲ್ಲದೇ, ಮೈಲ್ಡ್ ಶಾಂಪೂ ಜೊತೆಗೆ ಆ್ಯಂಟಿ ಡ್ಯಾಂಡ್ರಫ್ ಶಾಂಪೂ ಬಳಸಿ ಸ್ನಾನ ಮಾಡುವುದು ಒಳ್ಳೆಯದು.
  • ಮಳೆಗಾಲದಲ್ಲಿ ಕೂದಲು ಉದುರುವ ಸಮಸ್ಯೆ ಹೆಚ್ಚು. ಹೀಗಾಗಿ ಶಾಂಪೂ ಬಳಸಿದ ನಂತರ ಕಂಡೀಷನರ್ ಬಳಸಲು ಮರೆಯದಿರಿ. ಕಂಡೀಷನ್ ಬಳಸುವುದಿಲ್ಲ ಎಂದಾದರೆ ಕೂದಲಿನ ತೇವಾಂಶವನ್ನು ಉಳಿಸಿಕೊಳ್ಳಲು ತೆಂಗಿನ ಎಣ್ಣೆಯನ್ನು ಸಹ ಬಳಸಬಹುದು.
  • ಮಳೆಗಾಲದಲ್ಲಿ ಸ್ನಾನದ ಬಳಿಕ ಕೂದಲನ್ನು ಚೆನ್ನಾಗಿ ಒಣಗಿಸಿ. ಫ್ಯಾನ್‌ನಿಂದ ಕೂದಲನ್ನು ಒಣಗಿಸುವುದರಿಂದ ಒದ್ದೆ ಕೂದಲು ಬ್ಯಾಕ್ಟೀರಿಯಾದ ಸೋಂಕಿಗೆ ಒಳಗಾಗುವುದನ್ನು ತಪ್ಪಿಸಬಹುದು.
  • ಈ ಋತುವಿನಲ್ಲಿ ನೆತ್ತಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೂದಲನ್ನು ಚೆನ್ನಾಗಿ ಬಾಚಿಕೊಳ್ಳಬೇಕು. ಈ ಅಭ್ಯಾಸವು ತಲೆಬುರುಡೆಯಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸಿ, ಕೂದಲಿನ ಸಮಸ್ಯೆ ಕಡಿಮೆ ಮಾಡುತ್ತದೆ.
  • ಕೂದಲು ಆರೋಗ್ಯಕರವಾಗಿರಲು, ದೈನಂದಿನ ಆಹಾರದ ಕಡೆಗೂ ಗಮನ ಕೊಡಿ. ಕೆಲವೊಮ್ಮೆ ದೇಹದಲ್ಲಿ ಪೋಷಕಾಂಶಗಳು ಇಲ್ಲದಿದ್ದರೂ ಕೂದಲಿನ ಸಮಸ್ಯೆಗಳು ಹೆಚ್ಚಾಗುತ್ತವೆ. ಹೀಗಾಗಿ ಸಾಕಷ್ಟು ನೀರು, ತರಕಾರಿಗಳು, ಹಣ್ಣುಗಳನ್ನು ಸೇವಿಸುವ ಅಭ್ಯಾಸವನ್ನು ರೂಢಿಸಿಕೊಳ್ಳಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ