AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon Hair Care Tips : ಮಳೆಗಾಲದಲ್ಲಿ ಕೇಶರಾಶಿಯ ಆರೈಕೆ ಮಾಡುವುದೇಗೆ? ಈ ಟಿಪ್ಸ್ ಪಾಲಿಸಿ

ಮಳೆಗಾಲ ಎಂದರೆ ಕೆಲವರಿಗೆ ಇಷ್ಟ, ಇನ್ನು ಕೆಲವರಿಗೆ ಕಷ್ಟ. ಈ ಋತುವಿನಲ್ಲಿ ತಂಪಾದ ವಾತಾವರಣ, ಹೊರಗೆ ಹೋಗಿ ಬಂದರೆ ಮನಸ್ಸಿಗೂ ಉಲ್ಲಾಸ. ಆದರೆ ಜೋರಾ ಗಿ ಮಳೆ ಸುರಿಯುತ್ತಿದ್ದರೆ ಯಾರು ಕೂಡ ಹೊರಗೆ ಹೋಗಲು ಇಷ್ಟ ಪಡುವುದಿಲ್ಲ. ಕೆಲಸವಿತ್ತೆಂದೂ ಹೊರಗೆ ಹೋದರೆ, ಮಳೆರಾಯನಿಗೆ ನಮ್ಮನ್ನು ಒದ್ದೆಯಾಗಿಸಿ ಬಿಟ್ಟರೇನೇ ಸಮಾಧಾನ. ಈ ಸಮಯದಲ್ಲಿ ಮೈ ಕೈ, ಬಟ್ಟೆ, ಕೂದಲು ಒದ್ದೆಯಾಗುವುದು ಸಾಮಾನ್ಯ. ಆದರೆ ಈ ಸಮಯದಲ್ಲಿ ಕೂದಲ ಆರೈಕೆಯ ಕಡೆಗೂ ಗಮನ ಕೊಡುವುದು ತುಂಬಾನೇ ಮುಖ್ಯ.

Monsoon Hair Care Tips : ಮಳೆಗಾಲದಲ್ಲಿ ಕೇಶರಾಶಿಯ ಆರೈಕೆ ಮಾಡುವುದೇಗೆ? ಈ ಟಿಪ್ಸ್ ಪಾಲಿಸಿ
ಸಾಯಿನಂದಾ
| Edited By: |

Updated on: Jun 08, 2024 | 12:36 PM

Share

ಮಳೆಗಾಲದಲ್ಲಿ ಕೂದಲಿನ ಆರೈಕೆ ಮಾಡುವುದು ಸವಾಲಿನ ಕೆಲಸ. ಈ ಮಳೆಗೆ ಕೂದಲು ಒದ್ದೆಯಾಗಿಯೋ, ತಲೆ ಸ್ನಾನ ಮಾಡಿದ ನಂತರ ತಲೆ ಕೂದಲು ಒಣಗದೇ ಇದ್ದರೆಯೂ ಕೂದಲಿನ ಆರೋಗ್ಯವು ಹಾಳಾಗುತ್ತದೆ. ಈ ಸಮಯದಲ್ಲಿ ತಲೆ ಕೂದಲುದುರುವಿಕೆ, ತಲೆ ಹೊಟ್ಟಿನ ಸಮಸ್ಯೆ ಹೀಗೆ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಮಳೆಗಾಲದಲ್ಲಿ ಕೂದಲಿನ ಆರೈಕೆಯತ್ತ ಹೆಚ್ಚು ಗಮನ ನೀಡಬೇಕು. ಹೆಚ್ಚು ಕಾಲ ಕೂದಲು ಒದ್ದೆಯಾಗಿರಲು ಬಿಡಬಾರದು.

ಮಳೆಗಾಲದಲ್ಲಿ ಕೂದಲಿನ ಆರೈಕೆಗೆ ಸರಳ ಸಲಹೆಗಳಿವು

  • ಆಂಟಿ ಡ್ಯಾಂಡ್ರಫ್ ಶಾಂಪೂ ಬಳಸಿ ವಾರಕ್ಕೆ ಕನಿಷ್ಠ 3 ಬಾರಿ ತಲೆ ಕೂದಲನ್ನು ಸ್ವಚ್ಛಗೊಳಿಸಿ. ಅದಲ್ಲದೇ, ಮೈಲ್ಡ್ ಶಾಂಪೂ ಜೊತೆಗೆ ಆ್ಯಂಟಿ ಡ್ಯಾಂಡ್ರಫ್ ಶಾಂಪೂ ಬಳಸಿ ಸ್ನಾನ ಮಾಡುವುದು ಒಳ್ಳೆಯದು.
  • ಮಳೆಗಾಲದಲ್ಲಿ ಕೂದಲು ಉದುರುವ ಸಮಸ್ಯೆ ಹೆಚ್ಚು. ಹೀಗಾಗಿ ಶಾಂಪೂ ಬಳಸಿದ ನಂತರ ಕಂಡೀಷನರ್ ಬಳಸಲು ಮರೆಯದಿರಿ. ಕಂಡೀಷನ್ ಬಳಸುವುದಿಲ್ಲ ಎಂದಾದರೆ ಕೂದಲಿನ ತೇವಾಂಶವನ್ನು ಉಳಿಸಿಕೊಳ್ಳಲು ತೆಂಗಿನ ಎಣ್ಣೆಯನ್ನು ಸಹ ಬಳಸಬಹುದು.
  • ಮಳೆಗಾಲದಲ್ಲಿ ಸ್ನಾನದ ಬಳಿಕ ಕೂದಲನ್ನು ಚೆನ್ನಾಗಿ ಒಣಗಿಸಿ. ಫ್ಯಾನ್‌ನಿಂದ ಕೂದಲನ್ನು ಒಣಗಿಸುವುದರಿಂದ ಒದ್ದೆ ಕೂದಲು ಬ್ಯಾಕ್ಟೀರಿಯಾದ ಸೋಂಕಿಗೆ ಒಳಗಾಗುವುದನ್ನು ತಪ್ಪಿಸಬಹುದು.
  • ಈ ಋತುವಿನಲ್ಲಿ ನೆತ್ತಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೂದಲನ್ನು ಚೆನ್ನಾಗಿ ಬಾಚಿಕೊಳ್ಳಬೇಕು. ಈ ಅಭ್ಯಾಸವು ತಲೆಬುರುಡೆಯಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸಿ, ಕೂದಲಿನ ಸಮಸ್ಯೆ ಕಡಿಮೆ ಮಾಡುತ್ತದೆ.
  • ಕೂದಲು ಆರೋಗ್ಯಕರವಾಗಿರಲು, ದೈನಂದಿನ ಆಹಾರದ ಕಡೆಗೂ ಗಮನ ಕೊಡಿ. ಕೆಲವೊಮ್ಮೆ ದೇಹದಲ್ಲಿ ಪೋಷಕಾಂಶಗಳು ಇಲ್ಲದಿದ್ದರೂ ಕೂದಲಿನ ಸಮಸ್ಯೆಗಳು ಹೆಚ್ಚಾಗುತ್ತವೆ. ಹೀಗಾಗಿ ಸಾಕಷ್ಟು ನೀರು, ತರಕಾರಿಗಳು, ಹಣ್ಣುಗಳನ್ನು ಸೇವಿಸುವ ಅಭ್ಯಾಸವನ್ನು ರೂಢಿಸಿಕೊಳ್ಳಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು