AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon Home Clean Tips : ಮಳೆಗಾಲದಲ್ಲಿ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಮನೆಯನ್ನು ಎಲ್ಲಾ ಋತುವಿನಲ್ಲಿಯೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಆದರೆ ಈ ಮಳೆಗಾಲದಲ್ಲಿ ಮನೆಯ ನಿರ್ವಹಣೆಗೆ ಹೆಚ್ಚು ಗಮನ ನೀಡಬೇಕಾಗುತ್ತದೆ. ಶುಚಿಯಾಗಿ ಇಟ್ಟುಕೊಳ್ಳದೇ ಹೋದರೆ ಆರೊಗ್ಯ ಸಮಸ್ಯೆಗಳು ಹೆಚ್ಚಾಗುತ್ತದೆ. ಈ ವೇಳೆಯಲ್ಲಿ ಮನೆ ಸ್ವಚ್ಛತೆಯ ಕಡೆಗೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ. ಹಾಗಾದ್ರೆ ಈ ಮನೆಯನ್ನು ಶುಚಿಯಾಗಿಟ್ಟುಕೊಳ್ಳುವುದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Monsoon Home Clean Tips : ಮಳೆಗಾಲದಲ್ಲಿ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
Monsoon Home Clean Tips
ಸಾಯಿನಂದಾ
| Edited By: |

Updated on:Jun 19, 2024 | 6:05 PM

Share

ಮಳೆಗಾಲದಲ್ಲಿ ಹಚ್ಚ ಹಸಿರಿನ ತಂಪಾದ ವಾತಾವರಣಗಳಿಂದ ಮನಸ್ಸಿಗೇನು ಹಿತವೆನಿಸುತ್ತದೆ. ಆದರೆ ಬಿಡದೇ ಸುರಿಯುವ ಮಳೆಯಿಂದ ಬೋರ್ ಅನಿಸುವುದು ಇದೆ. ಅಷ್ಟೇ ಅಲ್ಲದೇ, ಈ ಋತುವಿನಲ್ಲಿ ಮನೆ ಹಾಗೂ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಾಗುತ್ತದೆ. ಮಳೆಗಾಲದಲ್ಲಿ ಗೋಡೆ ಹಸಿಯಾಗುವುದು, ಅಂಗಳ ಜಾರುವುದು ಹೀಗೆ ಒಂದಲ್ಲ ಒಂದು ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಒಂದು ವೇಳೆ ಶುಚಿತ್ವದ ಕಡೆಗೆ ಗಮನ ಕೊಡದೇ ಹೋದಲ್ಲಿ ಆರೋಗ್ಯ ಸಮಸ್ಯೆಗಳು ಒಕ್ಕರಿಸಿಕೊಂಡು ಬಿಡುತ್ತದೆ.

  1. ಮನೆಯ ಛಾವಣಿ ಸೋರುತ್ತಿದೆಯೇ ಎಂದು ಒಮ್ಮೆ ನೋಡಿ. ಇಲ್ಲದಿದ್ದರೆ ಸೋರುತ್ತಿರುವ ಛಾವಣಿಯಿಂದಾಗಿ ಮಳೆ ನೀರು ಮನೆಯ ಒಳಗೆ ತುಂಬುತ್ತದೆ.
  2. ಮಳೆಗಾಲದಲ್ಲಿ ನೆಲ ತಣ್ಣನೆಗಿರುತ್ತದೆ. ಮನೆಯನ್ನು ಸ್ವಚ್ಛಗೊಳಿಸಲು ಬಿಸಿ ನೀರನ್ನು ಬಳಸಿ. ಈ ನೀರಿಗೆ ಉಪ್ಪು ನೀರು ಬೆರೆಸುವುದರಿಂದ ವಿಷಜಂತುಗಳಿಗೆ ಸಾಯುತ್ತವೆ.
  3. ಬೆಡ್ ಕವರ್, ಪರದೆಗಳು, ಟವೆಲನ್ನು ದಿನನಿತ್ಯ ಬದಲಾಯಿಸುವುದು ಕಷ್ಟವಾದರೆ ವಾರಕ್ಕೊಮ್ಮೆಯಾದರೂ ಬದಲಾಯಿಸುತ್ತ ಇರುವುದು ಒಳ್ಳೆಯದು. ಇಲ್ಲದಿದ್ದರೆ ಇದು ಕೆಟ್ಟ ವಾಸನೆಯನ್ನು ಬೀರುತ್ತದೆ.
  4. ಮನೆಯ ನೆಲ ಟೈಲ್ಸ್ ಆಗಿದ್ದರೆ ನೀರು ಬಿದ್ದ ತಕ್ಷಣವೇ ಒರೆಸಿಬಿಡಿ. ಚೆಲ್ಲಿದ ನೀರಿನ ಮೇಲೆ ಕಾಲಿಟ್ಟರೆ ಜಾರಿ ಬಿದ್ದು ಗಾಯಗಳಾಗುವ ಸಾಧ್ಯತೆಯೇ ಹೆಚ್ಚು.
  5. ಮಳೆಗಾಲದಲ್ಲಿ ಜೇಡವು ಬಲೆಕಟ್ಟದಂತೆ ನೋಡಿಕೊಳ್ಳಿ. ಒಂದು ವೇಳೆ ಬಲೆಯಿದ್ದರೆ ಆಗಾಗ ತೆಗೆಯುತ್ತ ಇರಿ.
  6. ಈ ಋತುವಿನಲ್ಲಿ ಕಾಲೊರಸಲು ಹತ್ತಿಯ ಮ್ಯಾಟ್ ಬಳಸುವುದು ಒಳ್ಳೆಯದು. ಹೊರಗೆ ಹೋಗಿ ಬಂದ ಕೂಡಲೇ ಕಾಲು ಒದ್ದೆಯಾಗಿರುವುದರಿಂದ ಹತ್ತಿಯ ಬಟ್ಟೆಯ ಮ್ಯಾಟ್ ನೀರನ್ನು ಬೇಗನೇ ಹೀರಿಕೊಳ್ಳುತ್ತದೆ.
  7. ಮಳೆ ಕಡಿಮೆಯಿದ್ದರೆ ಸಾಧ್ಯವಾದಷ್ಟು ಬಾಗಿಲು ಕಿಟಕಿಗಳನ್ನು ತೆರೆದಿಟ್ಟು, ಗಾಳಿಯಾಡುವಂತೆ ನೋಡಿಕೊಳ್ಳಿ. ಈ ಗಾಳಿಯಲ್ಲಿ ತೇವಾಂಶ ಹೆಚ್ಚಿದ್ದು ಮನೆಯ ವಸ್ತುಗಳೆಲ್ಲವೂ ತೇವ ಒಳಗಾಗಿ ದುರ್ವಾಸನೆ ಬೀರುತ್ತದೆ.
  8. ಈ ಸಮಯದಲ್ಲಿ ಬಟ್ಟೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ ಇಲ್ಲದಿದ್ದರೆ ಅವು ವಾಸನೆ ಬರಲು ಪ್ರಾರಂಭಿಸುತ್ತವೆ. ಮಳೆಯ ತೇವಾಂಶದಿಂದ ಕಬೋರ್ಡ್‌ನಲ್ಲಿ ಬೇವು, ಕರ್ಪೂರ, ಏಲಕ್ಕಿಯನ್ನು ಇಡುವ ಮೂಲಕ ಬಟ್ಟೆಗಳನ್ನು ದುರ್ನಾತದಿಂದ ರಕ್ಷಿಸಿಕೊಳ್ಳಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:03 pm, Wed, 19 June 24

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ