AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin Care : ಮೊಸರಿನಲ್ಲಿದೆ ಸೌಂದರ್ಯದ ಗುಟ್ಟು, ಹೀಗೆ ಬಳಸಿದರೆ ತ್ವಚೆಯಲ್ಲಾಗುತ್ತೆ ಮ್ಯಾಜಿಕ್

ಎಲ್ಲರ ಮುಂದೇ ತಾನು ಸುಂದರವಾಗಿ ಕಾಣಬೇಕು ಎನ್ನುವುದು ಯಾರಿಗಿಲ್ಲ ಹೇಳಿ? ಹೀಗಾಗಿ ಹುಡುಗಿಯರು ಪಾರ್ಲರ್, ಸೌಂದರ್ಯ ಉತ್ಪನ್ನಗಳಿಗೆ ಖರ್ಚು ಮಾಡುವ ದುಡ್ಡು ಅಷ್ಟಿಷ್ಟಲ್ಲ. ಆದರೆ ಎಷ್ಟೇ ದುಡ್ಡು ಖರ್ಚು ಮಾಡಿದರೂ ಈ ಉತ್ಪನ್ನಗಳು ಕೆಲವೊಮ್ಮೆ ಸ್ಕಿನ್ ಟೋನ್ ಗೆ ಹೊಂದಿಕೊಳ್ಳದೇ ಅಡ್ಡಪರಿಣಾಮಗಳನ್ನು ಬಿರುತ್ತದೆ. ಆದರೆ ಅಡುಗೆ ಮನೆಯಲ್ಲಿರುವ ಮೊಸರನ್ನು ಬಳಸಿ ಮುಖದ ಸೌಂದರ್ಯವನ್ನು ಇಮ್ಮಡಿಗೊಳಿಸಬಹುದು.

Skin Care : ಮೊಸರಿನಲ್ಲಿದೆ ಸೌಂದರ್ಯದ ಗುಟ್ಟು, ಹೀಗೆ ಬಳಸಿದರೆ ತ್ವಚೆಯಲ್ಲಾಗುತ್ತೆ ಮ್ಯಾಜಿಕ್
ಸಾಯಿನಂದಾ
| Edited By: |

Updated on: Jun 04, 2024 | 5:45 PM

Share

ಸಾಮಾನ್ಯವಾಗಿ ಮೊಸರನ್ನು ಎಲ್ಲರೂ ಇಷ್ಟಪಟ್ಟೆ ಸೇವಿಸುತ್ತಾರೆ. ಅನ್ನ, ಮೊಸರು ಹಾಗೂ ಉಪ್ಪಿನಕಾಯಿ ಇದ್ದು ಬಿಟ್ಟರೆ, ಯಾವ ಊಟಕ್ಕೂ ಇದು ಕಡಿಮೆಯಿಲ್ಲ. ಈ ಮೊಸರಿನಲ್ಲಿ ವಿಟಮಿನ್ ಬಿ 2, ವಿಟಮಿನ್ ಬಿ 12, ಪೊಟ್ಯಾಸಿಯಮ್ ಮತ್ತು ಮೆಗ್ನೀಷಿಯಂ ಪೋಷಕಾಂಶಗಳನ್ನು ಹೊಂದಿರುವ ಹೇರಳವಾಗಿದ್ದು, ಆರೋಗ್ಯಕ್ಕೆ ಒಳ್ಳೆಯದು ಎನ್ನಲಾಗಿದೆ. ಆರೋಗ್ಯಕ್ಕೆ ಮಾತ್ರವಲ್ಲದೇ ಮುಖದ ಅಂದವನ್ನು ಹೆಚ್ಚಿಸಲು ಈ ಮೊಸರನ್ನು ಬಳಸಬಹುದು.

* ಎರಡು ಚಮಚ ಮೊಸರಿಗೆ ಒಂದು ಚಿಟಿಕೆಯಷ್ಟು ಸಕ್ಕರೆ ಹಾಕಿ ಸೇರಿಸಿ ಇದನ್ನು ಮುಖಕ್ಕೆ ಹಚ್ಚಿ, ಸುಮಾರು 15 ನಿಮಿಷ ನಂತರ ಬೆಚ್ಚಗಿನ ನೀರಿನಲ್ಲಿ ಮುಖ ತೊಳೆಯಬೇಕು. ಇದು ಮುಖದಲ್ಲಿನ ಕೊಳೆಯೂ ನಿವಾರಣೆ ಮಾಡಿ ಮುಖದ ಕಾಂತಿ ಹೆಚ್ಚಿಸುತ್ತದೆ.

* ಒಂದು ಚಮಚ ಮೊಸರನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡುವುದರಿಂದ ಅರ್ಧ ಗಂಟೆ ನಂತರ ಮುಖವನ್ನು ತೊಳೆದರೆ ಕಪ್ಪುಕಲೆ ಮಾಯವಾಗುತ್ತದೆ.

* ಅರ್ಧ ಕಪ್ ಮೊಸರಿಗೆ ಮೂರು ಚಮಚ ತುರಿದ ಸೌತೆಕಾಯಿಯನ್ನು ಬೆರೆಸಿ, ಈ ಮಿಶ್ರಣವನ್ನು ಡಾರ್ಕ್ ಸರ್ಕಲ್ ಹಾಗೂ ಟ್ಯಾನ್ ಇರುವ ಜಾಗಕ್ಕೆ ಹಚ್ಚಿಕೊಳ್ಳಬೇಕು. ಹದಿನೈದು ನಿಮಿಷಗಳ ಬಳಿಕ ತಣ್ಣನೆಯ ನೀರಿನಲ್ಲಿ ತೊಳೆದರೆ ಮುಖದ ಕಾಂತಿಯು ಹೆಚ್ಚಾಗುತ್ತದೆ.

ಇದನ್ನೂ ಓದಿ: ಬೆಳಗ್ಗೆ 8 ಗಂಟೆಯಾದ್ರೂ ಹಾಸಿಗೆಯಲ್ಲೇ ಇರ್ತೀರಾ? ಬೇಗ ಏಳಲು ಇಲ್ಲಿದೆ ಟಿಪ್ಸ್

* ಒಂದು ಚಮಚ ಕಡಲೆ ಹಿಟ್ಟಿಗೆ 2 ಚಮಚ ಮೊಸರನ್ನು ಸೇರಿಸಿ, ಮುಖಕ್ಕೆ ಹಚ್ಚಿಕೊಂಡು 15 ನಿಮಿಷಗಳ ನಂತರ ಮುಖ ತೊಳೆದರೆ ಮುಖದ ಮೇಲಿನ ಜಿಡ್ಡಿನ ಅಂಶವು ಕಡಿಮೆಯಾಗುತ್ತದೆ.

* ಎರಡು ಚಮಚ ಮೊಸರಿಗೆ ಒಂದು ಚಮಚ ಅರಶಿಣವನ್ನು ಸೇರಿಸಿ ಮಿಶ್ರಣ ಮಾಡಿ, ಇದನ್ನು ಮುಖಕ್ಕೆ ಲೇಪಿಸಿದರೆ ಮುಖದ ಕಾಂತಿಯು ಹೆಚ್ಚಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು