AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cleaning Tips : ತೊಳೆದ್ರು ಬಿಳಿ ಬಟ್ಟೆ ಮೇಲಿನ ಕಲೆ ಹೋಗ್ತಿಲ್ವಾ? ಹೀಗೆ ಮಾಡಿ

ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸಿದಾಗ ಎಷ್ಟೇ ಕಾಳಜಿ ವಹಿಸಿದರೂ ಕೆಲವೊಮ್ಮೆ ಕಲೆಗಳಾಗಿ ಬಿಡುತ್ತದೆ. ಈ ಮಳೆಗಾಲದಲ್ಲಿ ಬಿಳಿ ಬಣ್ಣದ ಉಡುಪನ್ನು ಧರಿಸಿದರಂತೂ, ಕಲೆಯಾಗದಂತೆ ನೋಡಿಕೊಳ್ಳುವುದು ಸವಾಲಿನ ಸಂಗತಿ. ಒಂದು ವೇಳೆ ಬಿಳಿ ಬಟ್ಟೆಯಲ್ಲಿ ಕಲೆಯೇನಾದ್ರೂ ಇದ್ರೆ, ಈ ವಸ್ತುಗಳಿಂದ ಸುಲಭ ಪರಿಹಾರ ಸಾಧ್ಯ.

Cleaning Tips : ತೊಳೆದ್ರು ಬಿಳಿ ಬಟ್ಟೆ ಮೇಲಿನ ಕಲೆ ಹೋಗ್ತಿಲ್ವಾ? ಹೀಗೆ ಮಾಡಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jun 18, 2024 | 5:06 PM

Share

ಬಿಳಿ ಬಟ್ಟೆಯನ್ನು ಕಲೆಯಾಗದಂತೆ ನೋಡಿಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ಕೈ ತಪ್ಪಿ ಟೀ ಕಾಫಿ ಚೆಲ್ಲಿಯೋ, ಪೆನ್ನಿನ ಇಂಕ್ ತಾಗಿಯೋ ಬಿಳಿ ಬಟ್ಟೆಯ ಅಂದವನ್ನು ಹಾಳು ಮಾಡುತ್ತದೆ. ಈ ವೇಳೆ ಯಾವುದೇ ಡಿಟರ್ಜೆಂಟ್, ಸೋಪ್ ಬಳಸಿ ತಿಕ್ಕಿ ತೊಳೆದರೂ ಪ್ರಯೋಜನವಂತೂ ಆಗುವುದೇ ಇಲ್ಲ. ಬಟ್ಟೆಯನ್ನು ಜಾಸ್ತಿ ಉಜ್ಜಿದರೆ, ಆ ಬಟ್ಟೆಗಳು ಹಾಳಾಗುವ ಸಾಧ್ಯತೆ ಇರುತ್ತದೆ. ನಿಮಗೂ ಈ ರೀತಿ ಅನುಭವವಾಗಿದ್ದರೆ ಟೆನ್ಶನ್ ಮಾಡಿಕೊಳ್ಬೇಡಿ, ಈ ವಸ್ತುಗಳನ್ನು ಬಳಸಿ ಕಲೆಯನ್ನು ನಿವಾರಿಸಿಕೊಳ್ಳಬಹುದು.

  • ಅರ್ಧ ಕಪ್ ನೀರಿಗೆ ಅರ್ಧ ಕಪ್ ವಿನೆಗರ್ ಮಿಶ್ರಣ ಮಾಡಿ ಬಿಳಿ ಬಟ್ಟೆಯ ಮೇಲೆ ಇರುವ ಕಲೆಗೆ ಸ್ಪ್ರೇ ಮಾಡಿ, ಸ್ವಲ್ಪ ಸಮಯ ಹಾಗೆ ಬಿಡಬೇಕು. ತದನಂತರದಲ್ಲಿ ಅದೇ ನೀರಿನಿಂದ ತಿಕ್ಕಿ ತೊಳೆದರೆ ಕಲೆ ಬಿಡುತ್ತದೆ.
  • ಬಿಳಿ ಬಟ್ಟೆ ಮೇಲಿನ ಕಲೆಯನ್ನು ತೆಗೆದು ಹಾಕಲು ಅಡುಗೆ ಸೋಡಾ ಬೆಸ್ಟ್ ಎನ್ನಬಹುದು. ನೀರಿಗೆ ಅಡುಗೆ ಸೋಡಾ ಸೇರಿಸಿ, ಕಲೆಯಾದ ಬಟ್ಟೆಯನ್ನು ಆ ನೀರಿನಲ್ಲಿ ನೆನೆಸಿಡಬೇಕು. ಸ್ವಲ್ಪ ಸಮಯದ ಬಳಿಕ ಬಟ್ಟೆಯನ್ನು ತೊಳೆದರೆ ಕಲೆಯೂ ಹೋಗುತ್ತದೆ.
  • ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಆ ಜಾಗಕ್ಕೆ ನಿಂಬೆರಸ ಹಾಕಿ ಉಪ್ಪು ಮತ್ತು ಸೋಪಿನಿಂದ ಚೆನ್ನಾಗಿ ತೊಳೆದರೆ ಕಲೆಯೂ ಇಲ್ಲದಂತಾಗುತ್ತದೆ.
  • ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಸೇರಿಸಿ ಉಜ್ಜುವುದರಿಂದ ಬಿಳಿ ಬಟ್ಟೆ ಮೇಲಿನ ಕಲೆಯೂ ನಿವಾರಣೆಯಾಗುತ್ತದೆ.
  • ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಸ್ವಲ್ಪ ಬಿಸಿ ನೀರನ್ನು ಆ ಜಾಗಕ್ಕೆ ಹಾಕಿ, ಡಿರ್ಟಜೆಂಟ್‌ ನಿಂದ ಉಜ್ಜಿ ಕಲೆಯನ್ನು ತೆಗೆದು ಹಾಕಬಹುದು.
  • ಬಿಳಿ ಬಟ್ಟೆ ಮೇಲಿನ ಕಲೆ ನಿವಾರಣೆಗೆ ಟೂತ್ ಪೇಸ್ಟ್ ಬಳಸುವುದು ಪರಿಣಾಮಕಾರಿಯಾಗಿದೆ. ಕಲೆ ಮೇಲೆ ಟೂತ್ಪೇಸ್ಟ್ ಅನ್ವಯಿಸಿ, ಹತ್ತರಿಂದ ಹದಿನೈದು ನಿಮಿಷಗಳ ಕಾಲ ಹಾಗೆ ಬಿಡಬೇಕು. ಆ ಬಳಿಕ ಡಿಟೆರ್ಜಂಟ್ ಬಳಸಿ ಸ್ವಚ್ಛಗೊಳಿಸಿದರೆ ಕಲೆ ಉಳಿಯುವುದಿಲ್ಲ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​