AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cleaning Tips : ತೊಳೆದ್ರು ಬಿಳಿ ಬಟ್ಟೆ ಮೇಲಿನ ಕಲೆ ಹೋಗ್ತಿಲ್ವಾ? ಹೀಗೆ ಮಾಡಿ

ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸಿದಾಗ ಎಷ್ಟೇ ಕಾಳಜಿ ವಹಿಸಿದರೂ ಕೆಲವೊಮ್ಮೆ ಕಲೆಗಳಾಗಿ ಬಿಡುತ್ತದೆ. ಈ ಮಳೆಗಾಲದಲ್ಲಿ ಬಿಳಿ ಬಣ್ಣದ ಉಡುಪನ್ನು ಧರಿಸಿದರಂತೂ, ಕಲೆಯಾಗದಂತೆ ನೋಡಿಕೊಳ್ಳುವುದು ಸವಾಲಿನ ಸಂಗತಿ. ಒಂದು ವೇಳೆ ಬಿಳಿ ಬಟ್ಟೆಯಲ್ಲಿ ಕಲೆಯೇನಾದ್ರೂ ಇದ್ರೆ, ಈ ವಸ್ತುಗಳಿಂದ ಸುಲಭ ಪರಿಹಾರ ಸಾಧ್ಯ.

Cleaning Tips : ತೊಳೆದ್ರು ಬಿಳಿ ಬಟ್ಟೆ ಮೇಲಿನ ಕಲೆ ಹೋಗ್ತಿಲ್ವಾ? ಹೀಗೆ ಮಾಡಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jun 18, 2024 | 5:06 PM

Share

ಬಿಳಿ ಬಟ್ಟೆಯನ್ನು ಕಲೆಯಾಗದಂತೆ ನೋಡಿಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ಕೈ ತಪ್ಪಿ ಟೀ ಕಾಫಿ ಚೆಲ್ಲಿಯೋ, ಪೆನ್ನಿನ ಇಂಕ್ ತಾಗಿಯೋ ಬಿಳಿ ಬಟ್ಟೆಯ ಅಂದವನ್ನು ಹಾಳು ಮಾಡುತ್ತದೆ. ಈ ವೇಳೆ ಯಾವುದೇ ಡಿಟರ್ಜೆಂಟ್, ಸೋಪ್ ಬಳಸಿ ತಿಕ್ಕಿ ತೊಳೆದರೂ ಪ್ರಯೋಜನವಂತೂ ಆಗುವುದೇ ಇಲ್ಲ. ಬಟ್ಟೆಯನ್ನು ಜಾಸ್ತಿ ಉಜ್ಜಿದರೆ, ಆ ಬಟ್ಟೆಗಳು ಹಾಳಾಗುವ ಸಾಧ್ಯತೆ ಇರುತ್ತದೆ. ನಿಮಗೂ ಈ ರೀತಿ ಅನುಭವವಾಗಿದ್ದರೆ ಟೆನ್ಶನ್ ಮಾಡಿಕೊಳ್ಬೇಡಿ, ಈ ವಸ್ತುಗಳನ್ನು ಬಳಸಿ ಕಲೆಯನ್ನು ನಿವಾರಿಸಿಕೊಳ್ಳಬಹುದು.

  • ಅರ್ಧ ಕಪ್ ನೀರಿಗೆ ಅರ್ಧ ಕಪ್ ವಿನೆಗರ್ ಮಿಶ್ರಣ ಮಾಡಿ ಬಿಳಿ ಬಟ್ಟೆಯ ಮೇಲೆ ಇರುವ ಕಲೆಗೆ ಸ್ಪ್ರೇ ಮಾಡಿ, ಸ್ವಲ್ಪ ಸಮಯ ಹಾಗೆ ಬಿಡಬೇಕು. ತದನಂತರದಲ್ಲಿ ಅದೇ ನೀರಿನಿಂದ ತಿಕ್ಕಿ ತೊಳೆದರೆ ಕಲೆ ಬಿಡುತ್ತದೆ.
  • ಬಿಳಿ ಬಟ್ಟೆ ಮೇಲಿನ ಕಲೆಯನ್ನು ತೆಗೆದು ಹಾಕಲು ಅಡುಗೆ ಸೋಡಾ ಬೆಸ್ಟ್ ಎನ್ನಬಹುದು. ನೀರಿಗೆ ಅಡುಗೆ ಸೋಡಾ ಸೇರಿಸಿ, ಕಲೆಯಾದ ಬಟ್ಟೆಯನ್ನು ಆ ನೀರಿನಲ್ಲಿ ನೆನೆಸಿಡಬೇಕು. ಸ್ವಲ್ಪ ಸಮಯದ ಬಳಿಕ ಬಟ್ಟೆಯನ್ನು ತೊಳೆದರೆ ಕಲೆಯೂ ಹೋಗುತ್ತದೆ.
  • ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಆ ಜಾಗಕ್ಕೆ ನಿಂಬೆರಸ ಹಾಕಿ ಉಪ್ಪು ಮತ್ತು ಸೋಪಿನಿಂದ ಚೆನ್ನಾಗಿ ತೊಳೆದರೆ ಕಲೆಯೂ ಇಲ್ಲದಂತಾಗುತ್ತದೆ.
  • ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಸೇರಿಸಿ ಉಜ್ಜುವುದರಿಂದ ಬಿಳಿ ಬಟ್ಟೆ ಮೇಲಿನ ಕಲೆಯೂ ನಿವಾರಣೆಯಾಗುತ್ತದೆ.
  • ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಸ್ವಲ್ಪ ಬಿಸಿ ನೀರನ್ನು ಆ ಜಾಗಕ್ಕೆ ಹಾಕಿ, ಡಿರ್ಟಜೆಂಟ್‌ ನಿಂದ ಉಜ್ಜಿ ಕಲೆಯನ್ನು ತೆಗೆದು ಹಾಕಬಹುದು.
  • ಬಿಳಿ ಬಟ್ಟೆ ಮೇಲಿನ ಕಲೆ ನಿವಾರಣೆಗೆ ಟೂತ್ ಪೇಸ್ಟ್ ಬಳಸುವುದು ಪರಿಣಾಮಕಾರಿಯಾಗಿದೆ. ಕಲೆ ಮೇಲೆ ಟೂತ್ಪೇಸ್ಟ್ ಅನ್ವಯಿಸಿ, ಹತ್ತರಿಂದ ಹದಿನೈದು ನಿಮಿಷಗಳ ಕಾಲ ಹಾಗೆ ಬಿಡಬೇಕು. ಆ ಬಳಿಕ ಡಿಟೆರ್ಜಂಟ್ ಬಳಸಿ ಸ್ವಚ್ಛಗೊಳಿಸಿದರೆ ಕಲೆ ಉಳಿಯುವುದಿಲ್ಲ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ