AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cleaning Tips : ತೊಳೆದ್ರು ಬಿಳಿ ಬಟ್ಟೆ ಮೇಲಿನ ಕಲೆ ಹೋಗ್ತಿಲ್ವಾ? ಹೀಗೆ ಮಾಡಿ

ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸಿದಾಗ ಎಷ್ಟೇ ಕಾಳಜಿ ವಹಿಸಿದರೂ ಕೆಲವೊಮ್ಮೆ ಕಲೆಗಳಾಗಿ ಬಿಡುತ್ತದೆ. ಈ ಮಳೆಗಾಲದಲ್ಲಿ ಬಿಳಿ ಬಣ್ಣದ ಉಡುಪನ್ನು ಧರಿಸಿದರಂತೂ, ಕಲೆಯಾಗದಂತೆ ನೋಡಿಕೊಳ್ಳುವುದು ಸವಾಲಿನ ಸಂಗತಿ. ಒಂದು ವೇಳೆ ಬಿಳಿ ಬಟ್ಟೆಯಲ್ಲಿ ಕಲೆಯೇನಾದ್ರೂ ಇದ್ರೆ, ಈ ವಸ್ತುಗಳಿಂದ ಸುಲಭ ಪರಿಹಾರ ಸಾಧ್ಯ.

Cleaning Tips : ತೊಳೆದ್ರು ಬಿಳಿ ಬಟ್ಟೆ ಮೇಲಿನ ಕಲೆ ಹೋಗ್ತಿಲ್ವಾ? ಹೀಗೆ ಮಾಡಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jun 18, 2024 | 5:06 PM

Share

ಬಿಳಿ ಬಟ್ಟೆಯನ್ನು ಕಲೆಯಾಗದಂತೆ ನೋಡಿಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ಕೈ ತಪ್ಪಿ ಟೀ ಕಾಫಿ ಚೆಲ್ಲಿಯೋ, ಪೆನ್ನಿನ ಇಂಕ್ ತಾಗಿಯೋ ಬಿಳಿ ಬಟ್ಟೆಯ ಅಂದವನ್ನು ಹಾಳು ಮಾಡುತ್ತದೆ. ಈ ವೇಳೆ ಯಾವುದೇ ಡಿಟರ್ಜೆಂಟ್, ಸೋಪ್ ಬಳಸಿ ತಿಕ್ಕಿ ತೊಳೆದರೂ ಪ್ರಯೋಜನವಂತೂ ಆಗುವುದೇ ಇಲ್ಲ. ಬಟ್ಟೆಯನ್ನು ಜಾಸ್ತಿ ಉಜ್ಜಿದರೆ, ಆ ಬಟ್ಟೆಗಳು ಹಾಳಾಗುವ ಸಾಧ್ಯತೆ ಇರುತ್ತದೆ. ನಿಮಗೂ ಈ ರೀತಿ ಅನುಭವವಾಗಿದ್ದರೆ ಟೆನ್ಶನ್ ಮಾಡಿಕೊಳ್ಬೇಡಿ, ಈ ವಸ್ತುಗಳನ್ನು ಬಳಸಿ ಕಲೆಯನ್ನು ನಿವಾರಿಸಿಕೊಳ್ಳಬಹುದು.

  • ಅರ್ಧ ಕಪ್ ನೀರಿಗೆ ಅರ್ಧ ಕಪ್ ವಿನೆಗರ್ ಮಿಶ್ರಣ ಮಾಡಿ ಬಿಳಿ ಬಟ್ಟೆಯ ಮೇಲೆ ಇರುವ ಕಲೆಗೆ ಸ್ಪ್ರೇ ಮಾಡಿ, ಸ್ವಲ್ಪ ಸಮಯ ಹಾಗೆ ಬಿಡಬೇಕು. ತದನಂತರದಲ್ಲಿ ಅದೇ ನೀರಿನಿಂದ ತಿಕ್ಕಿ ತೊಳೆದರೆ ಕಲೆ ಬಿಡುತ್ತದೆ.
  • ಬಿಳಿ ಬಟ್ಟೆ ಮೇಲಿನ ಕಲೆಯನ್ನು ತೆಗೆದು ಹಾಕಲು ಅಡುಗೆ ಸೋಡಾ ಬೆಸ್ಟ್ ಎನ್ನಬಹುದು. ನೀರಿಗೆ ಅಡುಗೆ ಸೋಡಾ ಸೇರಿಸಿ, ಕಲೆಯಾದ ಬಟ್ಟೆಯನ್ನು ಆ ನೀರಿನಲ್ಲಿ ನೆನೆಸಿಡಬೇಕು. ಸ್ವಲ್ಪ ಸಮಯದ ಬಳಿಕ ಬಟ್ಟೆಯನ್ನು ತೊಳೆದರೆ ಕಲೆಯೂ ಹೋಗುತ್ತದೆ.
  • ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಆ ಜಾಗಕ್ಕೆ ನಿಂಬೆರಸ ಹಾಕಿ ಉಪ್ಪು ಮತ್ತು ಸೋಪಿನಿಂದ ಚೆನ್ನಾಗಿ ತೊಳೆದರೆ ಕಲೆಯೂ ಇಲ್ಲದಂತಾಗುತ್ತದೆ.
  • ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಸೇರಿಸಿ ಉಜ್ಜುವುದರಿಂದ ಬಿಳಿ ಬಟ್ಟೆ ಮೇಲಿನ ಕಲೆಯೂ ನಿವಾರಣೆಯಾಗುತ್ತದೆ.
  • ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಸ್ವಲ್ಪ ಬಿಸಿ ನೀರನ್ನು ಆ ಜಾಗಕ್ಕೆ ಹಾಕಿ, ಡಿರ್ಟಜೆಂಟ್‌ ನಿಂದ ಉಜ್ಜಿ ಕಲೆಯನ್ನು ತೆಗೆದು ಹಾಕಬಹುದು.
  • ಬಿಳಿ ಬಟ್ಟೆ ಮೇಲಿನ ಕಲೆ ನಿವಾರಣೆಗೆ ಟೂತ್ ಪೇಸ್ಟ್ ಬಳಸುವುದು ಪರಿಣಾಮಕಾರಿಯಾಗಿದೆ. ಕಲೆ ಮೇಲೆ ಟೂತ್ಪೇಸ್ಟ್ ಅನ್ವಯಿಸಿ, ಹತ್ತರಿಂದ ಹದಿನೈದು ನಿಮಿಷಗಳ ಕಾಲ ಹಾಗೆ ಬಿಡಬೇಕು. ಆ ಬಳಿಕ ಡಿಟೆರ್ಜಂಟ್ ಬಳಸಿ ಸ್ವಚ್ಛಗೊಳಿಸಿದರೆ ಕಲೆ ಉಳಿಯುವುದಿಲ್ಲ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್