AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Domestic Violence: ಕೌಟುಂಬಿಕ ಕಲಹ, ಹಿಂಸಾಚಾರವು ಮಕ್ಕಳ ಮನಸ್ಸಿನ ಮೇಲೆ ಹೇಗೆಲ್ಲಾ ಪರಿಣಾಮ ಬೀರಬಲ್ಲದು?

ಕುಟುಂಬದಲ್ಲಿ ಏನೇ ಸಮಸ್ಯೆ, ಮನಸ್ಥಾಪಗಳಿದ್ದರೂ ದೊಡ್ಡವರ ನಡುವೆ ಇರಲಿ, ಮಕ್ಕಳೆದುರು ಜಗಳ ಮಾಡುವುದಾಗಿರಲಿ, ಹೊಡೆದಾಟವಾಗಿರಲಿ ಮಾಡಿದ್ದಲ್ಲಿ ಅದು ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ.

Domestic Violence: ಕೌಟುಂಬಿಕ ಕಲಹ, ಹಿಂಸಾಚಾರವು ಮಕ್ಕಳ ಮನಸ್ಸಿನ ಮೇಲೆ ಹೇಗೆಲ್ಲಾ ಪರಿಣಾಮ ಬೀರಬಲ್ಲದು?
ChildrenImage Credit source: The Webaddicted
TV9 Web
| Edited By: |

Updated on: Aug 12, 2022 | 2:26 PM

Share

ಕುಟುಂಬದಲ್ಲಿ ಏನೇ ಸಮಸ್ಯೆ, ಮನಸ್ಥಾಪಗಳಿದ್ದರೂ ದೊಡ್ಡವರ ನಡುವೆ ಇರಲಿ, ಮಕ್ಕಳೆದುರು ಜಗಳ ಮಾಡುವುದಾಗಿರಲಿ, ಹೊಡೆದಾಟವಾಗಿರಲಿ ಮಾಡಿದ್ದಲ್ಲಿ ಅದು ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಕೌಟುಂಬಿಕ ಕಲಹ ಅಥವಾ ಹಿಂಸಾಚಾರವು ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮವನ್ನುಂಟು ಮಾಡುತ್ತದೆ. ಹಾಗೆಯೇ ಮಕ್ಕಳನ್ನು ದೀರ್ಘಕಾಲದ ಆಘಾತಕ್ಕೆ ದೂಡುತ್ತದೆ.

ಮಗುವಿನ ಮೇಲೆ ದೀರ್ಘಕಾಲದ ಪರಿಣಾಮ ಒಂದೊಮ್ಮೆ ನೀವು ಮಕ್ಕಳೆದುರು ನಿತ್ಯ ಜಗಳವಾಡುತ್ತಿದ್ದರೆ ಅದು ಮಕ್ಕಳ ಮೇಲೆ ದೀರ್ಘಕಾಲದ ಪರಿಣಾಮವನ್ನು ಉಂಟು ಮಾಡುತ್ತದೆ. ಹಾಗೆಯೇ ಮಕ್ಕಳಲ್ಲಿ ಏಕಾಗ್ರತೆ ಕೊರತೆ, ಕೋಪ ಇವೆಲ್ಲವೂ ಜಾಸ್ತಿಯಾಗುತ್ತದೆ. ಸುಮಾರು 10-12 ವರ್ಷಗಳ ಕಾಲ ಈ ರೀತಿ ಕೂಟುಂಬಿಕ ದೌರ್ಜನ್ಯವನ್ನು ನೋಡುತ್ತಾ ಬಂದಿರುವ ಮಕ್ಕಳಲ್ಲಿ ಪಿಟಿಎಸ್​ಡಿ ಸಮಸ್ಯೆಯುಂಟಾಗಬಹುದು. ಹಾಗೆಯೇ ಮಕ್ಕಳಲ್ಲಿ ತಾವು ಸುರಕ್ಷಿತವಾಗಿಲ್ಲ ಎಂಬ ಭಾವ ಉಂಟಾಗುತ್ತದೆ.

ಮಕ್ಕಳ ನಿತ್ಯದ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಹುದು ಮಕ್ಕಳು ನಿತ್ಯವೂ ಮನೆಯಲ್ಲಿ ನಡೆಯುತ್ತಿರುವ ಕಲಹ, ಮನಸ್ತಾಪವನ್ನು ವೀಕ್ಷಿಸುತ್ತಿರುತ್ತಾರೆ ಇದು ಅವರ ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮವನ್ನು ಬೀರುತ್ತದೆ. ಹಾಗೆಯೇ ಆತಂಕ, ಒತ್ತಡದಿಂದಾಗಿ ಶಾಲೆಗೆ ಹೋಗಲು ಕೂಡ ಹಿಂಜರಿಯುತ್ತಾರೆ.

ಹಲವು ರೀತಿಯ ಪರಿಣಾಮಗಳು ಕೌಟುಂಬಿಕ ಕಲಹಗಳು ಮಕ್ಕಳ ಮೇಲೆ ಹಲವು ರೀತಿಯ ಪರಿಣಾಮವನ್ನು ಬೀರುತ್ತದೆ. ಶಾರೀರಿಕವಾಗಿ, ಮಾನಸಿಕವಾಗಿ ಪರಿಣಾಮ ಬೀರುತ್ತದೆ.

ನಿಮ್ಮ ಮಗುವನ್ನು ರಕ್ಷಿಸುವುದು ಹೇಗೆ? ಮೊದಲನೆಯದಾಗಿ ಮಗುವಿಗೆ ತಾನು ಸುರಕ್ಷಿತವಾಗಿದ್ದೇನೆ ಎಂಬ ಭಾವನೆ ಮೂಡುವಂತೆ ಮಾಡಿ. ಆಗ ಮಾತ್ರ ನಿಮ್ಮ ಮಗುವೂ ಸುರಕ್ಷಿತವಾಗಿರುತ್ತದೆ. ನಿಮ್ಮ ಮಾನಸಿಕ ಸ್ಥಿರತೆ ಮತ್ತು ಸುರಕ್ಷತೆಗೆ ಆದ್ಯತೆ ನೀಡಿ. ಕೆಟ್ಟ ನಡವಳಿಕೆಗಳ ಬಗ್ಗೆ ಅವರಿಗೆ ಶಿಕ್ಷಣ ನೀಡಿ ಮತ್ತು ಆರೋಗ್ಯಕರ ಸಂವಹನ ಹೇಗಿರಬೇಕು ಎಂಬುದನ್ನು ತಿಳಿಸಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು