AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Human Rights Day 2024: ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಇಂದು ವಿಶ್ವ ಮಾನವ ಹಕ್ಕುಗಳ ದಿನ. ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಹಾಗೂ ಮೂಲಭೂತ ಹಕ್ಕುಗಳೊಂದಿಗೆ ಮಾನವನ ಹಕ್ಕುಗಳ ಮಹತ್ವದ ಕುರಿತು ತಿಳಿಸುವ ಉದ್ದೇಶದಿಂದ ಈ ದಿನವನ್ನು ಘೋಷಿಸಲಾಯಿತು. ಹೀಗಾಗಿ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಹಾಗಾದ್ರೆ ಈ ದಿನದ ಆಚರಣೆ ಯಾವಾಗ ಶುರುವಾಯಿತು? ಮಹತ್ವ ಸೇರಿದಂತೆ ಇನ್ನಿತ್ತರ ಸಂಪೂರ್ಣ ಮಾಹಿತಿ ಇಲ್ಲಿದೆ.

Human Rights Day 2024: ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Dec 10, 2024 | 10:33 AM

Share

ಸಮಾಜದಲ್ಲಿ ಮಾನವನಿಗೆ ಯಾವುದೇ ಸ್ವಾತಂತ್ರ್ಯ ಹಾಗೂ ಹಕ್ಕುಗಳು ಇರದೇ ಹೋಗಿದ್ದರೆ ಹೇಗಿದ್ದೀರಬಹುದು. ಮಾನವನು ಹೇಗೆ ಬೇಕೋ ಹಾಗೆ ಬದುಕುತ್ತಿದ್ದ, ಯಾವುದೇ ಅಸ್ತಿತ್ವವೇ ಇಲ್ಲವಾಗಿರುತ್ತಿತ್ತು. ಮನುಷ್ಯನ ಬದುಕಿಗಾಗಿ ಹಾಗೂ ಅಸ್ತಿತ್ವಕ್ಕಾಗಿ ಇರುವುದೇ ಈ ಮಾನವನ ಹಕ್ಕುಗಳು. ಇಲ್ಲಿ ಯಾವುದೇ ಜಾತಿ ಜನಾಂಗ, ಬಣ್ಣ, ಧರ್ಮ, ಲಿಂಗ, ಭಾಷೆ, ರಾಜಕೀಯ, ಸ್ಥಾನಮಾನಗಳಿಗೆ ಬೆಲೆ ಕೊಡದೇ ಎಲ್ಲರೂ ಕೂಡ ಸರಿಸಮಾನರು. ಹೀಗಾಗಿ ಸಮಾಜದಲ್ಲಿರುವ ಪ್ರತಿಯೊಬ್ಬರು ಬದುಕುವ ಹಕ್ಕಿನೊಂದಿಗೆ ಇತರೆ ಹಕ್ಕುಗಳನ್ನು ಹೊಂದಿದ್ದಾರೆ. ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವುದು, ಮಾನವನ ಹಕ್ಕುಗಳ ಮಹತ್ವವನ್ನು ಸಾರುವ ಉದ್ದೇಶದಿಂದ ಪ್ರತಿ ವರ್ಷ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಮಾನವ ಹಕ್ಕುಗಳ ದಿನದ ಇತಿಹಾಸ

1948ರ ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು ಮಾನವ ಹಕ್ಕುಗಳ ದಿನ ಎಂದು ಅಂಗೀಕರಿಸಿತು. ಆ ಬಳಿಕ ಮಾನವ ಹಕ್ಕುಗಳ ದಿನವನ್ನು ಔಷಚಾರಿಕವಾಗಿ 1950ರಲ್ಲಿ ಸ್ಥಾಪಿಸಲಾಯಿತು. ಅಸೆಂಬ್ಲಿಯು ರೆಸಲ್ಯೂಷನ್‌ 423 (V) ಅನ್ನು ಸ್ಥಾಪನೆ ಮಾಡಲಾಯಿತು. ಇದು ಎಲ್ಲಾ ರಾಷ್ಟ್ರಗಳು ಹಾಗೂ ಆಸಕ್ತ ಸಂಸ್ಥೆಗಳಿಗೆ ಡಿಸೆಂಬರ್‌ 10 ರಂದು ಮಾನವ ಹಕ್ಕಗಳು ದಿನವನ್ನಾಗಿ ಆಚರಿಸಲು ಕರೆ ನೀಡಿತು. ಅಂದಿನಿಂದ ಪ್ರತಿ ವರ್ಷ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಗಂಡ ಎಷ್ಟೇ ಒಳ್ಳೆಯವನಾಗಿದ್ರು ಈ ಸಂದರ್ಭದಲ್ಲಿ ಹೆಣ್ಣಿಗೆ ತಾಯಿ ನೆನಪು ಕಾಡುತ್ತದೆಯಂತೆ

ಮಾನವ ಹಕ್ಕುಗಳ ದಿನದ ಈ ವರ್ಷದ ಥೀಮ್ ಹಾಗೂ ಮಹತ್ವ

ಪ್ರತಿ ವರ್ಷವು ಒಂದೊಂದು ಥೀಮ್ ನಲ್ಲಿ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ‘ಎಲ್ಲರಿಗೂ ಸಮಾನತೆ ಎನ್ನುವ ಥೀಮ್ ನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಅಸಮಾನತೆಯನ್ನು ಹೋಗಲಾಡಿಸಿ ಸಮಾನತೆಯನ್ನು ತರುವ ಉದ್ದೇಶವನ್ನು ಹೊಂದಿದೆ. ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕಿನೊಂದಿಗೆ ಕೆಲವು ಮೂಲಭೂತ ಹಕ್ಕುಗಳು ಹಾಗೂ ಸ್ವಾತ್ರಂತ್ಯವನ್ನು ನೆನಪಿಸುವ ಸಲುವಾಗಿ ಈ ದಿನದ ಆಚರಣೆ ಯು ಮಹತ್ವದ್ದಾಗಿದೆ. ಈ ವಿಶೇಷ ದಿನದಂದು ಮಾನವ ಹಕ್ಕುಗಳಿಗಾಗಿ ಹೋರಾಡಿದ ಎಲ್ಲಾ ಪ್ರಮುಖರನ್ನು ನೆನಪಿಸಿಕೊಳ್ಳಲಾಗುತ್ತದೆ. ಅದಲ್ಲದೇ ಜಾಗತಿಕ ಮಟ್ಟದಲ್ಲಿ ಕಾರ್ಯಾಗಾರಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!