AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ice Baths : ಉರಿ ಉರಿ ಸೆಕೆಯ ನಡುವೆ ಐಸ್ ಬಾತ್ ಮಾಡಿ, ಇದರ ಪ್ರಯೋಜನ ಒಂದೆರಡರಲ್ಲ

ಬಿಸಿಲಿನ ಬೇಗೆಯ ನಡುವೆ ತಣ್ಣೀರಿನ ಸ್ನಾನವು ದೇಹ ಹಾಗೂ ಮನಸ್ಸನ್ನು ನಿರಾಳವಾಗಿಸುತ್ತದೆ. ಆದರೆ ಈ ಐಸ್​ನಷ್ಟು ತಣ್ಣನೆಯ ನೀರಿನಲ್ಲಿ ಸ್ನಾನ ಮಾಡುವ ಬಗ್ಗೆ ಕೇಳಿದ್ದೀರಬಹುದು. ಸೆಲೆಬ್ರಿಟಿಗಳು ಹೆಚ್ಚಾಗಿ ಈ ಐಸ್ ವಾಟರ್ ಬಾತ್ ನತ್ತ ಒಲವು ತೋರಿಸುತ್ತಿದ್ದಾರೆ. ಈ ಅಭ್ಯಾಸದಿಂದ ಆರೋಗ್ಯ ಪ್ರಯೋಜನಗಳು ಅಧಿಕ ಎನ್ನಲಾಗಿದೆ.

Ice Baths : ಉರಿ ಉರಿ ಸೆಕೆಯ ನಡುವೆ ಐಸ್ ಬಾತ್ ಮಾಡಿ, ಇದರ ಪ್ರಯೋಜನ ಒಂದೆರಡರಲ್ಲ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 04, 2024 | 3:19 PM

Share

ಇತ್ತೀಚೆಗಿನ ದಿನಗಳಲ್ಲಿ ಐಸ್ ವಾಟರ್ ಬಾತ್ ಎನ್ನುವುದು ಟ್ರೆಂಡ್ ಆಗುತ್ತಿದೆ. ಸೆಲೆಬ್ರಿಟಿಗಳು, ಕ್ರಿಕೆಟ್​ ಪಟುಗಳು ಐಸ್ ವಾಟರ್ ಸ್ನಾನ ಮಾಡುತ್ತಿದ್ದಾರೆ. ಅದಲ್ಲದೇ, ಐಸ್ ವಾಟರ್ ಸ್ನಾನವನ್ನು ಹಲವರು ಚಾಲೆಂಜ್ ಆಗಿಯೂ ಸ್ವೀಕರಿಸುತ್ತಿದ್ದಾರೆ. ಐಸ್ ವಾಟರ್​ನಲ್ಲಿ 10ರಿಂದ 15 ನಿಮಿಷ ಕುಳಿತುಕೊಳ್ಳುವ ಮೂಲಕ ಇದೊಂದು ಥೆರಪಿಯಾಗಿದೆ. ಐಸ್​ ನೀರಿರುವ ಟಬ್​ನಲ್ಲಿ ತಲೆಯನ್ನು ಮಾತ್ರ ಮೇಲೆತ್ತಿಕೊಂಡು ಸಂಪೂರ್ಣವಾಗಿ ದೇಹವನ್ನು ಮುಳುಗಿಸಿ ಕುಳಿತುಕೊಳ್ಳುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು ಅಧಿಕವಾಗಿದೆ.

ಐಸ್ ವಾಟರ್ ಬಾತ್ ನಿಂದ ಆಗುವ ಆರೋಗ್ಯ ಪ್ರಯೋಜನಗಳು

* ಸ್ನಾಯುಗಳ ನೋವನ್ನು ನಿವಾರಿಸುತ್ತದೆ: ದೀರ್ಘಕಾಲದ ವ್ಯಾಯಾಮದ ನಂತರದಲ್ಲಿ ಐಸ್ ವಾಟರ್ ಸ್ನಾನವು ಬಹಳಷ್ಟು ಪ್ರಯೋಜನಕಾರಿಯಾಗಿದೆ. ವ್ಯಾಯಾಮದ ನಂತರ ವ್ಯಕ್ತಿಯು ಸ್ನಾಯುಗಳಲ್ಲಿ ಅನುಭವಿಸುವ ಕೆಲವು ಊತ ಮತ್ತು ನೋವನ್ನು ಶಮನ ಮಾಡುತ್ತದೆ.

* ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ : ದೈಹಿಕವಾಗಿ ಶ್ರಮ ವಹಿಸಿ ಕೆಲಸ ಮಾಡುವುದರಿಂದ ದೇಹದ ಉಷ್ಣತೆಯೂ ಸಹಜವಾಗಿ ಹೆಚ್ಚಾಗುತ್ತದೆ. ಹೀಗಾದಾಗ ಐಸ್ ನೀರಿನಲ್ಲಿ ಸ್ನಾನವನ್ನು ಮಾಡುವುದರಿಂದ ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

* ಏಕಾಗ್ರತೆಯನ್ನು ಹೆಚ್ಚಿಸುತ್ತದೆ : ವೆಬ್‌ಮ್‌ಡಿ ವರದಿಯ ಪ್ರಕಾರ, ಮಾನಸಿಕ ಆರೋಗ್ಯಕ್ಕೆ ಐಸ್ ಬಾತ್ ತುಂಬಾ ಪ್ರಯೋಜನಕಾರಿಯಾಗಿದೆ. ಅದಲ್ಲದೇ, ಏಕಾಗ್ರತೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಭೂ ಗರ್ಭದ ಸ್ಫೋಟ, ಜನರ ಜೀವಕ್ಕೆ ಆಪತ್ತು ಖಚಿತ!

* ಉರಿಯೂತವನ್ನು ಕಡಿಮೆ ಮಾಡುತ್ತದೆ : ತಣ್ಣೀರು ದೇಹದಲ್ಲಿನ ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ, ಇದು ದೇಹದಲ್ಲಿನ ಊತ ಹಾಗೂ ಉರಿಯೂತವನ್ನು ನಿವಾರಿಸುತ್ತದೆ.

* ಉತ್ತಮ ನಿದ್ರೆಗೆ ಸಹಕಾರಿ : ಕೆಲವು ಸಂಶೋಧನೆಗಳ ಪ್ರಕಾರ, ಐಸ್ ವಾಟರ್ ಬಾತ್ ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ. ಈ ರೀತಿಯ ಸ್ನಾನದಿಂದ ಆಯಾಸವನ್ನು ಅನುಭವಿಸುವ ಪ್ರಮಾಣವು ಕಡಿಮೆಯಾಗುತ್ತದೆ.

* ರೋಗನಿರೋಧಕ ಶಕ್ತಿಯು ಹೆಚ್ಚಳ : ತಣ್ಣನೆಯ ನೀರಿನಲ್ಲಿ ಮುಳುಗಿ ಸ್ನಾನ ಮಾಡುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್