AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ice Baths : ಉರಿ ಉರಿ ಸೆಕೆಯ ನಡುವೆ ಐಸ್ ಬಾತ್ ಮಾಡಿ, ಇದರ ಪ್ರಯೋಜನ ಒಂದೆರಡರಲ್ಲ

ಬಿಸಿಲಿನ ಬೇಗೆಯ ನಡುವೆ ತಣ್ಣೀರಿನ ಸ್ನಾನವು ದೇಹ ಹಾಗೂ ಮನಸ್ಸನ್ನು ನಿರಾಳವಾಗಿಸುತ್ತದೆ. ಆದರೆ ಈ ಐಸ್​ನಷ್ಟು ತಣ್ಣನೆಯ ನೀರಿನಲ್ಲಿ ಸ್ನಾನ ಮಾಡುವ ಬಗ್ಗೆ ಕೇಳಿದ್ದೀರಬಹುದು. ಸೆಲೆಬ್ರಿಟಿಗಳು ಹೆಚ್ಚಾಗಿ ಈ ಐಸ್ ವಾಟರ್ ಬಾತ್ ನತ್ತ ಒಲವು ತೋರಿಸುತ್ತಿದ್ದಾರೆ. ಈ ಅಭ್ಯಾಸದಿಂದ ಆರೋಗ್ಯ ಪ್ರಯೋಜನಗಳು ಅಧಿಕ ಎನ್ನಲಾಗಿದೆ.

Ice Baths : ಉರಿ ಉರಿ ಸೆಕೆಯ ನಡುವೆ ಐಸ್ ಬಾತ್ ಮಾಡಿ, ಇದರ ಪ್ರಯೋಜನ ಒಂದೆರಡರಲ್ಲ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 04, 2024 | 3:19 PM

Share

ಇತ್ತೀಚೆಗಿನ ದಿನಗಳಲ್ಲಿ ಐಸ್ ವಾಟರ್ ಬಾತ್ ಎನ್ನುವುದು ಟ್ರೆಂಡ್ ಆಗುತ್ತಿದೆ. ಸೆಲೆಬ್ರಿಟಿಗಳು, ಕ್ರಿಕೆಟ್​ ಪಟುಗಳು ಐಸ್ ವಾಟರ್ ಸ್ನಾನ ಮಾಡುತ್ತಿದ್ದಾರೆ. ಅದಲ್ಲದೇ, ಐಸ್ ವಾಟರ್ ಸ್ನಾನವನ್ನು ಹಲವರು ಚಾಲೆಂಜ್ ಆಗಿಯೂ ಸ್ವೀಕರಿಸುತ್ತಿದ್ದಾರೆ. ಐಸ್ ವಾಟರ್​ನಲ್ಲಿ 10ರಿಂದ 15 ನಿಮಿಷ ಕುಳಿತುಕೊಳ್ಳುವ ಮೂಲಕ ಇದೊಂದು ಥೆರಪಿಯಾಗಿದೆ. ಐಸ್​ ನೀರಿರುವ ಟಬ್​ನಲ್ಲಿ ತಲೆಯನ್ನು ಮಾತ್ರ ಮೇಲೆತ್ತಿಕೊಂಡು ಸಂಪೂರ್ಣವಾಗಿ ದೇಹವನ್ನು ಮುಳುಗಿಸಿ ಕುಳಿತುಕೊಳ್ಳುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು ಅಧಿಕವಾಗಿದೆ.

ಐಸ್ ವಾಟರ್ ಬಾತ್ ನಿಂದ ಆಗುವ ಆರೋಗ್ಯ ಪ್ರಯೋಜನಗಳು

* ಸ್ನಾಯುಗಳ ನೋವನ್ನು ನಿವಾರಿಸುತ್ತದೆ: ದೀರ್ಘಕಾಲದ ವ್ಯಾಯಾಮದ ನಂತರದಲ್ಲಿ ಐಸ್ ವಾಟರ್ ಸ್ನಾನವು ಬಹಳಷ್ಟು ಪ್ರಯೋಜನಕಾರಿಯಾಗಿದೆ. ವ್ಯಾಯಾಮದ ನಂತರ ವ್ಯಕ್ತಿಯು ಸ್ನಾಯುಗಳಲ್ಲಿ ಅನುಭವಿಸುವ ಕೆಲವು ಊತ ಮತ್ತು ನೋವನ್ನು ಶಮನ ಮಾಡುತ್ತದೆ.

* ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ : ದೈಹಿಕವಾಗಿ ಶ್ರಮ ವಹಿಸಿ ಕೆಲಸ ಮಾಡುವುದರಿಂದ ದೇಹದ ಉಷ್ಣತೆಯೂ ಸಹಜವಾಗಿ ಹೆಚ್ಚಾಗುತ್ತದೆ. ಹೀಗಾದಾಗ ಐಸ್ ನೀರಿನಲ್ಲಿ ಸ್ನಾನವನ್ನು ಮಾಡುವುದರಿಂದ ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

* ಏಕಾಗ್ರತೆಯನ್ನು ಹೆಚ್ಚಿಸುತ್ತದೆ : ವೆಬ್‌ಮ್‌ಡಿ ವರದಿಯ ಪ್ರಕಾರ, ಮಾನಸಿಕ ಆರೋಗ್ಯಕ್ಕೆ ಐಸ್ ಬಾತ್ ತುಂಬಾ ಪ್ರಯೋಜನಕಾರಿಯಾಗಿದೆ. ಅದಲ್ಲದೇ, ಏಕಾಗ್ರತೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಭೂ ಗರ್ಭದ ಸ್ಫೋಟ, ಜನರ ಜೀವಕ್ಕೆ ಆಪತ್ತು ಖಚಿತ!

* ಉರಿಯೂತವನ್ನು ಕಡಿಮೆ ಮಾಡುತ್ತದೆ : ತಣ್ಣೀರು ದೇಹದಲ್ಲಿನ ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ, ಇದು ದೇಹದಲ್ಲಿನ ಊತ ಹಾಗೂ ಉರಿಯೂತವನ್ನು ನಿವಾರಿಸುತ್ತದೆ.

* ಉತ್ತಮ ನಿದ್ರೆಗೆ ಸಹಕಾರಿ : ಕೆಲವು ಸಂಶೋಧನೆಗಳ ಪ್ರಕಾರ, ಐಸ್ ವಾಟರ್ ಬಾತ್ ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ. ಈ ರೀತಿಯ ಸ್ನಾನದಿಂದ ಆಯಾಸವನ್ನು ಅನುಭವಿಸುವ ಪ್ರಮಾಣವು ಕಡಿಮೆಯಾಗುತ್ತದೆ.

* ರೋಗನಿರೋಧಕ ಶಕ್ತಿಯು ಹೆಚ್ಚಳ : ತಣ್ಣನೆಯ ನೀರಿನಲ್ಲಿ ಮುಳುಗಿ ಸ್ನಾನ ಮಾಡುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್