AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ice Baths : ಉರಿ ಉರಿ ಸೆಕೆಯ ನಡುವೆ ಐಸ್ ಬಾತ್ ಮಾಡಿ, ಇದರ ಪ್ರಯೋಜನ ಒಂದೆರಡರಲ್ಲ

ಬಿಸಿಲಿನ ಬೇಗೆಯ ನಡುವೆ ತಣ್ಣೀರಿನ ಸ್ನಾನವು ದೇಹ ಹಾಗೂ ಮನಸ್ಸನ್ನು ನಿರಾಳವಾಗಿಸುತ್ತದೆ. ಆದರೆ ಈ ಐಸ್​ನಷ್ಟು ತಣ್ಣನೆಯ ನೀರಿನಲ್ಲಿ ಸ್ನಾನ ಮಾಡುವ ಬಗ್ಗೆ ಕೇಳಿದ್ದೀರಬಹುದು. ಸೆಲೆಬ್ರಿಟಿಗಳು ಹೆಚ್ಚಾಗಿ ಈ ಐಸ್ ವಾಟರ್ ಬಾತ್ ನತ್ತ ಒಲವು ತೋರಿಸುತ್ತಿದ್ದಾರೆ. ಈ ಅಭ್ಯಾಸದಿಂದ ಆರೋಗ್ಯ ಪ್ರಯೋಜನಗಳು ಅಧಿಕ ಎನ್ನಲಾಗಿದೆ.

Ice Baths : ಉರಿ ಉರಿ ಸೆಕೆಯ ನಡುವೆ ಐಸ್ ಬಾತ್ ಮಾಡಿ, ಇದರ ಪ್ರಯೋಜನ ಒಂದೆರಡರಲ್ಲ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 04, 2024 | 3:19 PM

Share

ಇತ್ತೀಚೆಗಿನ ದಿನಗಳಲ್ಲಿ ಐಸ್ ವಾಟರ್ ಬಾತ್ ಎನ್ನುವುದು ಟ್ರೆಂಡ್ ಆಗುತ್ತಿದೆ. ಸೆಲೆಬ್ರಿಟಿಗಳು, ಕ್ರಿಕೆಟ್​ ಪಟುಗಳು ಐಸ್ ವಾಟರ್ ಸ್ನಾನ ಮಾಡುತ್ತಿದ್ದಾರೆ. ಅದಲ್ಲದೇ, ಐಸ್ ವಾಟರ್ ಸ್ನಾನವನ್ನು ಹಲವರು ಚಾಲೆಂಜ್ ಆಗಿಯೂ ಸ್ವೀಕರಿಸುತ್ತಿದ್ದಾರೆ. ಐಸ್ ವಾಟರ್​ನಲ್ಲಿ 10ರಿಂದ 15 ನಿಮಿಷ ಕುಳಿತುಕೊಳ್ಳುವ ಮೂಲಕ ಇದೊಂದು ಥೆರಪಿಯಾಗಿದೆ. ಐಸ್​ ನೀರಿರುವ ಟಬ್​ನಲ್ಲಿ ತಲೆಯನ್ನು ಮಾತ್ರ ಮೇಲೆತ್ತಿಕೊಂಡು ಸಂಪೂರ್ಣವಾಗಿ ದೇಹವನ್ನು ಮುಳುಗಿಸಿ ಕುಳಿತುಕೊಳ್ಳುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು ಅಧಿಕವಾಗಿದೆ.

ಐಸ್ ವಾಟರ್ ಬಾತ್ ನಿಂದ ಆಗುವ ಆರೋಗ್ಯ ಪ್ರಯೋಜನಗಳು

* ಸ್ನಾಯುಗಳ ನೋವನ್ನು ನಿವಾರಿಸುತ್ತದೆ: ದೀರ್ಘಕಾಲದ ವ್ಯಾಯಾಮದ ನಂತರದಲ್ಲಿ ಐಸ್ ವಾಟರ್ ಸ್ನಾನವು ಬಹಳಷ್ಟು ಪ್ರಯೋಜನಕಾರಿಯಾಗಿದೆ. ವ್ಯಾಯಾಮದ ನಂತರ ವ್ಯಕ್ತಿಯು ಸ್ನಾಯುಗಳಲ್ಲಿ ಅನುಭವಿಸುವ ಕೆಲವು ಊತ ಮತ್ತು ನೋವನ್ನು ಶಮನ ಮಾಡುತ್ತದೆ.

* ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ : ದೈಹಿಕವಾಗಿ ಶ್ರಮ ವಹಿಸಿ ಕೆಲಸ ಮಾಡುವುದರಿಂದ ದೇಹದ ಉಷ್ಣತೆಯೂ ಸಹಜವಾಗಿ ಹೆಚ್ಚಾಗುತ್ತದೆ. ಹೀಗಾದಾಗ ಐಸ್ ನೀರಿನಲ್ಲಿ ಸ್ನಾನವನ್ನು ಮಾಡುವುದರಿಂದ ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

* ಏಕಾಗ್ರತೆಯನ್ನು ಹೆಚ್ಚಿಸುತ್ತದೆ : ವೆಬ್‌ಮ್‌ಡಿ ವರದಿಯ ಪ್ರಕಾರ, ಮಾನಸಿಕ ಆರೋಗ್ಯಕ್ಕೆ ಐಸ್ ಬಾತ್ ತುಂಬಾ ಪ್ರಯೋಜನಕಾರಿಯಾಗಿದೆ. ಅದಲ್ಲದೇ, ಏಕಾಗ್ರತೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಭೂ ಗರ್ಭದ ಸ್ಫೋಟ, ಜನರ ಜೀವಕ್ಕೆ ಆಪತ್ತು ಖಚಿತ!

* ಉರಿಯೂತವನ್ನು ಕಡಿಮೆ ಮಾಡುತ್ತದೆ : ತಣ್ಣೀರು ದೇಹದಲ್ಲಿನ ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ, ಇದು ದೇಹದಲ್ಲಿನ ಊತ ಹಾಗೂ ಉರಿಯೂತವನ್ನು ನಿವಾರಿಸುತ್ತದೆ.

* ಉತ್ತಮ ನಿದ್ರೆಗೆ ಸಹಕಾರಿ : ಕೆಲವು ಸಂಶೋಧನೆಗಳ ಪ್ರಕಾರ, ಐಸ್ ವಾಟರ್ ಬಾತ್ ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ. ಈ ರೀತಿಯ ಸ್ನಾನದಿಂದ ಆಯಾಸವನ್ನು ಅನುಭವಿಸುವ ಪ್ರಮಾಣವು ಕಡಿಮೆಯಾಗುತ್ತದೆ.

* ರೋಗನಿರೋಧಕ ಶಕ್ತಿಯು ಹೆಚ್ಚಳ : ತಣ್ಣನೆಯ ನೀರಿನಲ್ಲಿ ಮುಳುಗಿ ಸ್ನಾನ ಮಾಡುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?