AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ice Baths : ಉರಿ ಉರಿ ಸೆಕೆಯ ನಡುವೆ ಐಸ್ ಬಾತ್ ಮಾಡಿ, ಇದರ ಪ್ರಯೋಜನ ಒಂದೆರಡರಲ್ಲ

ಬಿಸಿಲಿನ ಬೇಗೆಯ ನಡುವೆ ತಣ್ಣೀರಿನ ಸ್ನಾನವು ದೇಹ ಹಾಗೂ ಮನಸ್ಸನ್ನು ನಿರಾಳವಾಗಿಸುತ್ತದೆ. ಆದರೆ ಈ ಐಸ್​ನಷ್ಟು ತಣ್ಣನೆಯ ನೀರಿನಲ್ಲಿ ಸ್ನಾನ ಮಾಡುವ ಬಗ್ಗೆ ಕೇಳಿದ್ದೀರಬಹುದು. ಸೆಲೆಬ್ರಿಟಿಗಳು ಹೆಚ್ಚಾಗಿ ಈ ಐಸ್ ವಾಟರ್ ಬಾತ್ ನತ್ತ ಒಲವು ತೋರಿಸುತ್ತಿದ್ದಾರೆ. ಈ ಅಭ್ಯಾಸದಿಂದ ಆರೋಗ್ಯ ಪ್ರಯೋಜನಗಳು ಅಧಿಕ ಎನ್ನಲಾಗಿದೆ.

Ice Baths : ಉರಿ ಉರಿ ಸೆಕೆಯ ನಡುವೆ ಐಸ್ ಬಾತ್ ಮಾಡಿ, ಇದರ ಪ್ರಯೋಜನ ಒಂದೆರಡರಲ್ಲ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 04, 2024 | 3:19 PM

Share

ಇತ್ತೀಚೆಗಿನ ದಿನಗಳಲ್ಲಿ ಐಸ್ ವಾಟರ್ ಬಾತ್ ಎನ್ನುವುದು ಟ್ರೆಂಡ್ ಆಗುತ್ತಿದೆ. ಸೆಲೆಬ್ರಿಟಿಗಳು, ಕ್ರಿಕೆಟ್​ ಪಟುಗಳು ಐಸ್ ವಾಟರ್ ಸ್ನಾನ ಮಾಡುತ್ತಿದ್ದಾರೆ. ಅದಲ್ಲದೇ, ಐಸ್ ವಾಟರ್ ಸ್ನಾನವನ್ನು ಹಲವರು ಚಾಲೆಂಜ್ ಆಗಿಯೂ ಸ್ವೀಕರಿಸುತ್ತಿದ್ದಾರೆ. ಐಸ್ ವಾಟರ್​ನಲ್ಲಿ 10ರಿಂದ 15 ನಿಮಿಷ ಕುಳಿತುಕೊಳ್ಳುವ ಮೂಲಕ ಇದೊಂದು ಥೆರಪಿಯಾಗಿದೆ. ಐಸ್​ ನೀರಿರುವ ಟಬ್​ನಲ್ಲಿ ತಲೆಯನ್ನು ಮಾತ್ರ ಮೇಲೆತ್ತಿಕೊಂಡು ಸಂಪೂರ್ಣವಾಗಿ ದೇಹವನ್ನು ಮುಳುಗಿಸಿ ಕುಳಿತುಕೊಳ್ಳುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು ಅಧಿಕವಾಗಿದೆ.

ಐಸ್ ವಾಟರ್ ಬಾತ್ ನಿಂದ ಆಗುವ ಆರೋಗ್ಯ ಪ್ರಯೋಜನಗಳು

* ಸ್ನಾಯುಗಳ ನೋವನ್ನು ನಿವಾರಿಸುತ್ತದೆ: ದೀರ್ಘಕಾಲದ ವ್ಯಾಯಾಮದ ನಂತರದಲ್ಲಿ ಐಸ್ ವಾಟರ್ ಸ್ನಾನವು ಬಹಳಷ್ಟು ಪ್ರಯೋಜನಕಾರಿಯಾಗಿದೆ. ವ್ಯಾಯಾಮದ ನಂತರ ವ್ಯಕ್ತಿಯು ಸ್ನಾಯುಗಳಲ್ಲಿ ಅನುಭವಿಸುವ ಕೆಲವು ಊತ ಮತ್ತು ನೋವನ್ನು ಶಮನ ಮಾಡುತ್ತದೆ.

* ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ : ದೈಹಿಕವಾಗಿ ಶ್ರಮ ವಹಿಸಿ ಕೆಲಸ ಮಾಡುವುದರಿಂದ ದೇಹದ ಉಷ್ಣತೆಯೂ ಸಹಜವಾಗಿ ಹೆಚ್ಚಾಗುತ್ತದೆ. ಹೀಗಾದಾಗ ಐಸ್ ನೀರಿನಲ್ಲಿ ಸ್ನಾನವನ್ನು ಮಾಡುವುದರಿಂದ ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

* ಏಕಾಗ್ರತೆಯನ್ನು ಹೆಚ್ಚಿಸುತ್ತದೆ : ವೆಬ್‌ಮ್‌ಡಿ ವರದಿಯ ಪ್ರಕಾರ, ಮಾನಸಿಕ ಆರೋಗ್ಯಕ್ಕೆ ಐಸ್ ಬಾತ್ ತುಂಬಾ ಪ್ರಯೋಜನಕಾರಿಯಾಗಿದೆ. ಅದಲ್ಲದೇ, ಏಕಾಗ್ರತೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಭೂ ಗರ್ಭದ ಸ್ಫೋಟ, ಜನರ ಜೀವಕ್ಕೆ ಆಪತ್ತು ಖಚಿತ!

* ಉರಿಯೂತವನ್ನು ಕಡಿಮೆ ಮಾಡುತ್ತದೆ : ತಣ್ಣೀರು ದೇಹದಲ್ಲಿನ ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ, ಇದು ದೇಹದಲ್ಲಿನ ಊತ ಹಾಗೂ ಉರಿಯೂತವನ್ನು ನಿವಾರಿಸುತ್ತದೆ.

* ಉತ್ತಮ ನಿದ್ರೆಗೆ ಸಹಕಾರಿ : ಕೆಲವು ಸಂಶೋಧನೆಗಳ ಪ್ರಕಾರ, ಐಸ್ ವಾಟರ್ ಬಾತ್ ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ. ಈ ರೀತಿಯ ಸ್ನಾನದಿಂದ ಆಯಾಸವನ್ನು ಅನುಭವಿಸುವ ಪ್ರಮಾಣವು ಕಡಿಮೆಯಾಗುತ್ತದೆ.

* ರೋಗನಿರೋಧಕ ಶಕ್ತಿಯು ಹೆಚ್ಚಳ : ತಣ್ಣನೆಯ ನೀರಿನಲ್ಲಿ ಮುಳುಗಿ ಸ್ನಾನ ಮಾಡುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ