AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಗಡಿ ಕಡಿಮೆಯಾದರೂ ಎದೆಯಲ್ಲಿ ಕಟ್ಟಿಕೊಂಡಿರುವ ಕಫ ಕಡಿಮೆ ಮಾಡುವುದು ಹೇಗೆ? ಇಲ್ಲಿದೆ ಮನೆಮದ್ದು

ಬದಲಾಗುತ್ತಿರುವ ಹವಾಮಾನದ ಕಾರಣದಿಂದಾಗಿ ಅನೇಕ ಜನರು ಶೀತ ಮತ್ತು ಜ್ವರದಂತಹ ಕಾಯಿಲೆಗೆ ಆಗಾಗ್ಗೆ ತುತ್ತಾಗುತ್ತಿರುತ್ತಾರೆ. ಮತ್ತೊಂದೆಡೆ ನೆಗಡಿ ವಾಸಿಯಾದ ನಂತರವೂ ಎದೆಯಲ್ಲಿ ಕಟ್ಟಿಕೊಂಡಿರುವ ಕಫ ಹಾಗೇನೇ ಉಳಿದುಕೊಂಡು ನಮ್ಮನ್ನು ತೊಂದರೆಗೀಡು ಮಾಡುತ್ತದೆ. ಔಷಧಿಗಳ ಬದಲು ಮನೆಮದ್ದುಗಳ ಸಹಾಯದಿಂದ ಈ ಕಫದ ಸಮಸ್ಯೆಯಿಂದ ಸುಲಭವಾಗಿ ಮುಕ್ತಿ ಪಡೆಯಬಹುದು.

ನೆಗಡಿ ಕಡಿಮೆಯಾದರೂ ಎದೆಯಲ್ಲಿ ಕಟ್ಟಿಕೊಂಡಿರುವ ಕಫ ಕಡಿಮೆ ಮಾಡುವುದು ಹೇಗೆ? ಇಲ್ಲಿದೆ ಮನೆಮದ್ದು
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Aug 28, 2023 | 6:17 PM

Share

ಬದಲಾಗುತ್ತಿರು ಹವಾಮಾನವು ವೈರಲ್ ಸೋಂಕುಗಳನ್ನು ಉಂಟುಮಾಡುತ್ತದೆ. ಇದರಿಂದ ಹೆಚ್ಚಿನ ಜನರಿಗೆ ಜ್ವರ ಮತ್ತು ಶೀತ, ನೆಗಡಿಯಂತಹ ಆರೋಗ್ಯ ಸಮಸ್ಯೆಗಳು ಭಾದಿಸುತ್ತದೆ. ಶೀತ ಮತ್ತು ಜ್ವರ ಎರಡು ಅಥವಾ ಮೂರು ದಿನಗಳಲ್ಲಿ ಕಡಿಮೆಯಾಗುತ್ತದೆ. ಆದರೆ ಹೆಚ್ಚಿನವರಿಗೆ ನೆಗಡಿ ವಾಸಿಯಾದ ನಂತರವೂ ಕಫದ ಸಮಸ್ಯೆ ಪದೇ ಪದೇ ಕಾಡುತ್ತಲೇ ಇರುತ್ತದೆ. ಎದೆಯಲ್ಲಿ ಕಟ್ಟಿಕೊಂಡಿರುವ ಕಫವು ನ್ಯಪೋನಿಯಾ, ಕ್ಷಯ, ಶ್ವಾಸಕೋಶದ ಕ್ಯಾನ್ಸರ್, ಬ್ರಾಂಕಿಯೆಕ್ಟಾಸಿಸ್ ಮತ್ತು ಬ್ರಾಂಕೈಟಿಸ್ ನಂತಹ ಕಾಯಿಲೆಗಳಿಗೆ ಕಾರಣವಾಗಬಹುದು. ಹಾಗಾಗಿ ಕಫದ ಸಮಸ್ಯೆಯನ್ನು ನಿರ್ಲಕ್ಷಿಸಬಾರದು. ಔಷಧಿಗಳಿಂದ ಈ ಸಮಸ್ಯೆ ಕಡಿಮೆಯಾಗದಿದ್ದರೆ, ಈ ಕೆಲವೊಂದು ಮನೆಮದ್ದುಗಳ ಸಹಾಯದಿಂದ ಎದೆಯಲ್ಲಿ ಕಟ್ಟಿಕೊಂಡಿರುವ ಕಫದ ಸಮಸ್ಯೆಯಿಂದ ಸುಲಭವಾಗಿ ಮುಕ್ತಿ ಪಡೆಯಬಹುದು.

ಕಫದಿಂದ ಮುಕ್ತಿ ಪಡೆಯಲು ಪರಿಣಾಮಕಾರಿ ಮನೆಮದ್ದುಗಳು ಯಾವುದೆಂದರೆ:

ಒಣದ್ರಾಕ್ಷಿ ಮತ್ತು ಕರಿಮೆಣಸು ಮಿಶ್ರಿತ ನೀರು:

ಒಣದ್ರಾಕ್ಷಿ ಮತ್ತು ಕರಿಮೆಣಸು ಮಿಶ್ರಿತ ನೀರನ್ನು ಕುಡಿಯುವುದರಿಂದ ಎದೆಯಲ್ಲಿ ಕಟ್ಟಿಕೊಂಡಿರುವ ಕಫವನ್ನು ಹೋಗಲಾಡಿಸಬಹುದು. ನೀವು 10 ಒಣದ್ರಾಕ್ಷಿ ಮತ್ತು 6 ಕರಿಮೆಣಸನ್ನು ತೆಗೆದುಕೊಂಡು ಈ ಎರಡೂ ವಸ್ತುಗಳನ್ನು ಒಂದು ಪಾತ್ರೆಗೆ ಹಾಕಿ ಅದಕ್ಕೆ ಒಂದು ಲೋಟ ನೀರನ್ನು ಸೇರಿಸಿ ಚೆನ್ನಾಗಿ ಕುದಿಸಿ. ಮತ್ತು ನೀರು ಪಾತ್ರೆಯಲ್ಲಿ ಅರ್ಧದಷ್ಟು ಆವಿಯಾಗುವವರೆಗೆ ಕುದಿಸಿ. ಈ ನೀರನ್ನು ದಿನಕ್ಕೆ ಎರಡರಿಂದ ಮೂರು ಬಾರಿ ಕುಡಿಯುವುದರಿಂದ ಗಂಟಲು ಮತ್ತು ಎದೆಯಲ್ಲಿ ಸಂಗ್ರಹವಾಗಿರುವ ಕಫವನ್ನು ಸುಲಭವಾಗಿ ತೆಗೆದುಹಾಕಬಹುದು. ಮಾತ್ರವಲ್ಲದೆ ಇದು ಕೆಮ್ಮು ಮತ್ತು ನೆಗಡಿಯನ್ನು ಕಡಿಮೆ ಮಾಡುತ್ತದೆ. 3 ದಿನಗಳ ಕಾಲ ನಿರಂತರವಾಗಿ ಈ ಕಷಾಯವನ್ನು ಕುಡಿಯುವುದರಿಂದ ಕಫದಿಂದ ಮುಕ್ತಿ ಪಡೆಯಬಹುದು,

ಶುಂಠಿ ಮತ್ತು ಜೇನುತುಪ್ಪ:

ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಜೇನುತುಪ್ಪವು ಕಫ ಮತ್ತು ಗಂಟಲು ನೋವನ್ನು ನಿವಾರಿಸಲು ಪರಿಣಾಮಕಾರಿ ಮನೆಮದ್ದಾಗಿದೆ. ಶುಂಠಿ ರಸದೊಂದಿಗೆ ಜೇನುತುಪ್ಪವನ್ನು ಬೆರೆಸಿ ಸೇವಿಸುವುದರಿಂದ ಕಫದಿಂದ ಮುಕ್ತಿ ಪಡೆಯಬಹುದು. ಇದು ಮಾತ್ರವಲ್ಲದೆ ನೀವು ಶುಂಠಿಯನ್ನು ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಚೆನ್ನಾಗಿ ಕುದಿಸಿ ಆ ನೀರನ್ನು ಮಲಗುವ ಮುನ್ನ ಕುಡಿಯಿರಿ. ಈ ಮನೆಮದ್ದು ಕೂಡ ಕಫದಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಈ ಹಣ್ಣುಗಳನ್ನು ಸೇವಿಸಿದ ತಕ್ಷಣ ನೀರು ಕುಡಿಯಬೇಡಿ

ಜೇನುತುಪ್ಪ ಮತ್ತು ಕರಿಮೆಣಸು:

ಕರಿಮೆಣಸನ್ನು ಮಸಾಲೆಗಳ ರಾಜ ಎಂದೂ ಕರೆಯುತ್ತಾರೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ನಮಗೆ ರೋಗಗಳ ವಿರುದ್ಧ ಹೋರಾಡುವ ಸಾಮಾರ್ಥ್ಯವನ್ನು ಒದಗಿಸುತ್ತದೆ. ಕರಿಮೆಣಸಿನ ಪುಡಿಯೊಂದಿಗೆ ಸ್ವಲ್ಪ ಜೇನುತುಪ್ಪವನ್ನು ಬೆರೆಸಿ ಸೇವಿಸುವುದರಿಂದ ಎದೆಯಲ್ಲಿ ಕಟ್ಟಿಕೊಂಡಿರುವ ಕಫವನ್ನು ತೊಡೆದುಹಾಕಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್