AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಗಿದ ತಕ್ಷಣ ನಿದ್ದೆ ಬರುವುದಿಲ್ಲವೇ ? ಹಾಗಿದ್ದರೆ ಈ ಅಭ್ಯಾಸಗಳನ್ನು ರೂಡಿಸಿಕೊಳ್ಳಿ ಉತ್ತಮ ನಿದ್ದೆ ಬರುತ್ತೆ

ನೀವು ನಿದ್ರಾ ಹೀನತೆಯಿಂದ ಬಳಲುತ್ತಿದ್ದರೇ ಈ ಸಲಹೆಗಳನ್ನು ಅನುಸರಿಸಿ ನಿಮಗೆ ಉತ್ತಮ ನಿದ್ದೆ ಬರುತ್ತದೆ

ಮಲಗಿದ ತಕ್ಷಣ ನಿದ್ದೆ ಬರುವುದಿಲ್ಲವೇ ? ಹಾಗಿದ್ದರೆ ಈ ಅಭ್ಯಾಸಗಳನ್ನು ರೂಡಿಸಿಕೊಳ್ಳಿ ಉತ್ತಮ ನಿದ್ದೆ ಬರುತ್ತೆ
ಸಾಂಧರ್ಬಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Oct 04, 2022 | 10:41 PM

Share

ಬೆಳಿಗ್ಗೆ ಎದ್ದ ನಂತರ ಅನೇಕ ಜನರು ಸೋಮಾರಿತನ ಮತ್ತು ಆಲಸ್ಯವನ್ನು ಅನುಭವಿಸುತ್ತಾರೆ. ರಾತ್ರಿ ಸರಿಯಾಗಿ ನಿದ್ದೆ ಮಾಡದೇ ಇರುವುದು ಇದಕ್ಕೆ ಮುಖ್ಯ ಕಾರಣ ಎನ್ನಬಹದು. ಇತ್ತೀಚಿನ ದಿನಗಳಲ್ಲಿ ಅನೇಕ ಜನರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವರ್ಷಕ್ಕೆ ಒಂದೋ ಎರಡೋ ಬಾರಿ ನಿದ್ದೆ ಕಳೆದುಕೊಂಡರೂ ಪರವಾಗಿಲ್ಲ.. ಆದರೆ ಪ್ರತಿ ರಾತ್ರಿ ನಿದ್ದೆ ಬಾರದಿದ್ದರೂ.. ಗಂಟೆಗಟ್ಟಲೆ ನಿದ್ದೆಯಿಲ್ಲದೆ ಹಾಸಿಗೆಯಲ್ಲಿ ಕಳೆದರೂ ಅದನ್ನು ನಿರ್ಲಕ್ಷಿಸಬಾರದು ಎಂದು ತಜ್ಞರು ಎಚ್ಚರಿಕೆ ನೀಡುತ್ತಾರೆ. ಏಕೆಂದರೆ ನಿದ್ರೆಯ ಕೊರತೆಯು ನಿಮ್ಮ ಆರೋಗ್ಯಕ್ಕೂ ಅಪಾಯಕಾರಿ. ಆದ್ದರಿಂದ, ನಿಮ್ಮ ಜೀವನಶೈಲಿ ಮತ್ತು ಆಹಾರಕ್ರಮಕ್ಕೆ ನೀವು ವಿಶೇಷ ಗಮನ ನೀಡಬೇಕು. ಪ್ರತಿನಿತ್ಯ ಇವುಗಳನ್ನು ಅನುಸರಿಸುವುದರಿಂದ ನೀವು ಹಾಸಿಗೆಯ ಮೇಲೆ ಮಲಗಿದ ತಕ್ಷಣ ನಿದ್ದೆ ಬರುತ್ತದೆ.

1. ತಿಂದ ತಕ್ಷಣ ನಿದ್ದೆ ಮಾಡಬೇಡಿ: ಊಟ ಮಾಡಿದ ತಕ್ಷಣ ಮಲಗುವುದು ಒಳ್ಳೆಯದಲ್ಲ. ಏಕೆಂದರೆ ಆಹಾರವನ್ನು ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ ಮತ್ತು ರಾತ್ರಿಯಲ್ಲಿ ನಿದ್ರೆ ಮಾಡುವುದು ಕಷ್ಟ. ಅದಕ್ಕಾಗಿಯೇ ರಾತ್ರಿಯಲ್ಲಿ ಚೆನ್ನಾಗಿ ನಿದ್ದೆ ಮಾಡಲು, ನೀವು ಮಲಗುವ 4 ಗಂಟೆಗಳ ಮೊದಲು ಆಹಾರವನ್ನು ಸೇವಿಸಬೇಕು. ರಾತ್ರಿ ಸಾಕಷ್ಟು ನೀರು ಕುಡಿದ ನಂತರ ಮಲಗಿಕೊಳ್ಳಿ. ಈ ರೀತಿ ಮಾಡುವುದರಿಂದ ಉತ್ತಮ ನಿದ್ದೆ ಬರುತ್ತದೆ.

2. ಮಲಗುವ ಮುನ್ನ ಸ್ನಾನ ಮಾಡಿ : ರಾತ್ರಿ ನಿದ್ದೆ ಬರದಿದ್ದರೆ ಸ್ನಾನ ಮಾಡುವುದರಿಂದ ಚೆನ್ನಾಗಿ ನಿದ್ದೆ ಮಾಡಬಹುದು. ಮಲಗುವ ಮುನ್ನ ಸ್ನಾನ ಮಾಡುವುದು ಅಭ್ಯಾಸ ಮಾಡಿಕೊಳ್ಳಿ. ರಾತ್ರಿ ಸ್ನಾನಕ್ಕೆ ಬೆಚ್ಚಗಿನ ನೀರನ್ನು ಬಳಸಬಹುದು. ಈ ರೀತಿ ಮಾಡುವುದರಿಂದ ಉತ್ತಮ ನಿದ್ದೆ ಬರುತ್ತದೆ. ಸ್ನಾನ ಮಾಡುವುದರಿಂದ ದೇಹ ಶುದ್ಧಿಯಾಗುವುದಲ್ಲದೆ ಆಯಾಸ ದೂರವಾಗುತ್ತದೆ.

3. ಮಲಗುವ ಮುನ್ನ ಲೈಟ್ ಆಫ್ ಮಾಡಿ: ಮಲಗುವ ಕೋಣೆಯಲ್ಲಿ ಲೈಟ್ ಆಫ್ ಮಾಡುವುದರಿಂದ ನಿಮ್ಮ ನಿದ್ರೆಗೆ ತೊಂದರೆಯಾಗುವುದಿಲ್ಲ. ಸಣ್ಣ ಎಣ್ಣೆಯ ದೀಪವನ್ನು ಆರಿಸಿ.

4. ಪುಸ್ತಕಗಳನ್ನು ಓದಿ: ಮಲಗುವ ಮುನ್ನ ಪುಸ್ತಕಗಳನ್ನು ಓದುವುದು ಮತ್ತು ನಿಮ್ಮ ನೆಚ್ಚಿನ ಸಂಗೀತವನ್ನು ಕೇಳುವುದು ಒಳ್ಳೆಯದು. ಹೀಗೆ ಮಾಡಿದರೆ ಉಪಶಮನದ ಜೊತೆಗೆ ನೆಮ್ಮದಿಯ ನಿದ್ದೆ ಬರುತ್ತದೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:41 pm, Tue, 4 October 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!